<p><strong>ನವದೆಹಲಿ:</strong> ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂದುವರಿದವರಿಗೆ ಸಾಮಾಜಿಕ ಚಲನಶೀಲತೆ ಇರುತ್ತದೆ, ಹಿಂದುಳಿದ ವರ್ಗಗಳಿಗೆ ಸೇರಿದ್ದರೂ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಬಲರಾಗಿರುವ ಕುಟುಂಬಗಳ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ.</p><p>ಅರ್ಜಿದಾರರ ತಂದೆ–ತಾಯಿ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಟ್ಟ ಕ್ರಮವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.</p><p>ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರಿದ್ದ ಪೀಠ ನಡೆಸಿತು.</p>.ಮೀಸಲಾತಿ ಕಡಿತ ಮಾಡಿದ್ದು ಕಾಂಗ್ರೆಸ್ ಮಾಡಿದ ಮಹಾ ಮೋಸ: ಬಿ. ಶ್ರೀರಾಮುಲು.<p>‘ಇಬ್ಬರೂ ಪೋಷಕರು ಐಎಎಸ್ ಅಧಿಕಾರಿಗಳಾಗಿರುವಾಗ, ಅವರ ಮಕ್ಕಳಿಗೆ ಮೀಸಲಾತಿ ಏಕೆ? ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣದೊಂದಿಗೆ ಸಾಮಾಜಿಕ ಚಲನಶೀಲತೆಯೂ ಇರುತ್ತದೆ. ಮಕ್ಕಳಿಗಾಗಿ ಪುನಃ ಮೀಸಲಾತಿ ಕೇಳಿದರೆ, ನಾವು ಎಂದಿಗೂ ಅದರಿಂದ ಹೊರಬರುವುದಿಲ್ಲ’ ಎಂದು ಪೀಠ ನುಡಿಯಿತು.</p><p>‘ಪೋಷಕರು ಉತ್ತಮ ಉದ್ಯೋಗಗಳಲ್ಲಿದ್ದು ಒಳ್ಳೆಯ ಆದಾಯ ಹೊಂದಿದ್ದರೆ ಅವರ ಮಕ್ಕಳು ಮೀಸಲಾತಿಯಿಂದ ಹೊರಬರಬೇಕು’ ಎಂದು ಪೀಠ ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿತು.</p><p>ಶ್ರೀಮಂತ ವರ್ಗಗಳನ್ನು ಮೀಸಲಾತಿ ಸೌಲಭ್ಯಗಳಿಂದ ಹೊರಗಿಡಲು ಸರ್ಕಾರ ಈಗಾಗಲೇ ಹಲವು ಆದೇಶಗಳನ್ನು ಜಾರಿಗೊಳಿಸಿದೆ. ಆದರೆ ಈಗ ಅವುಗಳನ್ನು ಪ್ರಶ್ನಿಸಲಾಗುತ್ತಿದೆ ಎಂದು ಪೀಠ ಹೇಳಿತು. </p>.ಮಾನವ ಇತಿಹಾಸವನ್ನೇ ಬದಲಿಸಿದ್ದ ಎಲ್ ನಿನೊ! ಕಾದಿದೆಯಾ ಮಹಾ ವಿಪತ್ತು?.<h2>ಏನಿದು ಪ್ರಕರಣ?</h2><p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ (ಕೆಪಿಟಿಸಿಎಲ್) ಮೀಸಲು ವರ್ಗದ ಅಡಿಯಲ್ಲಿ ಅರ್ಜಿದಾರರನ್ನು ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗೆ ಆಯ್ಕೆ ಮಾಡಲಾಗಿತ್ತು. </p><p>ಆದರೆ, ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯು ಅವರು ಕೆನೆಪದರದೊಳಗೆ ಬರುತ್ತಾರೆ ಎಂದು ತೀರ್ಮಾನಿಸಿ, ಅವರ ಜಾತಿ ಪ್ರಮಾಣಪತ್ರದ ಸಿಂಧುತ್ವವನ್ನು ರದ್ದುಗೊಳಿಸಿತು. </p><p>ಅಭ್ಯರ್ಥಿಯ ಇಬ್ಬರೂ ಪೋಷಕರು ಸರ್ಕಾರಿ ನೌಕರರಾಗಿದ್ದು, ಅವರ ಒಟ್ಟು ಆದಾಯವು ನಿಗದಿತ ಕೆನೆಪದರದ ಮಿತಿಯನ್ನು (₹ 8 ಲಕ್ಷ) ಮೀರಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ್ದ ಅರ್ಜಿದಾರರ ಜಾತಿ ಪ್ರಮಾಣಪತ್ರ ಸಿಂಧುತ್ವ ಈ ಕಾರಣಕ್ಕೆ ರದ್ದುಗೊಂಡಿತ್ತು. </p>.ಒಂದು ಗುರಿ, ಭಿನ್ನ ಮಾರ್ಗ: ಅಮೆರಿಕ, ಚೀನಾದ ಎ.ಐ ಓಟದಲ್ಲಿ ಗೆಲ್ಲುವವರು ಯಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂದುವರಿದವರಿಗೆ ಸಾಮಾಜಿಕ ಚಲನಶೀಲತೆ ಇರುತ್ತದೆ, ಹಿಂದುಳಿದ ವರ್ಗಗಳಿಗೆ ಸೇರಿದ್ದರೂ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಬಲರಾಗಿರುವ ಕುಟುಂಬಗಳ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ.</p><p>ಅರ್ಜಿದಾರರ ತಂದೆ–ತಾಯಿ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಟ್ಟ ಕ್ರಮವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.</p><p>ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರಿದ್ದ ಪೀಠ ನಡೆಸಿತು.</p>.ಮೀಸಲಾತಿ ಕಡಿತ ಮಾಡಿದ್ದು ಕಾಂಗ್ರೆಸ್ ಮಾಡಿದ ಮಹಾ ಮೋಸ: ಬಿ. ಶ್ರೀರಾಮುಲು.<p>‘ಇಬ್ಬರೂ ಪೋಷಕರು ಐಎಎಸ್ ಅಧಿಕಾರಿಗಳಾಗಿರುವಾಗ, ಅವರ ಮಕ್ಕಳಿಗೆ ಮೀಸಲಾತಿ ಏಕೆ? ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣದೊಂದಿಗೆ ಸಾಮಾಜಿಕ ಚಲನಶೀಲತೆಯೂ ಇರುತ್ತದೆ. ಮಕ್ಕಳಿಗಾಗಿ ಪುನಃ ಮೀಸಲಾತಿ ಕೇಳಿದರೆ, ನಾವು ಎಂದಿಗೂ ಅದರಿಂದ ಹೊರಬರುವುದಿಲ್ಲ’ ಎಂದು ಪೀಠ ನುಡಿಯಿತು.</p><p>‘ಪೋಷಕರು ಉತ್ತಮ ಉದ್ಯೋಗಗಳಲ್ಲಿದ್ದು ಒಳ್ಳೆಯ ಆದಾಯ ಹೊಂದಿದ್ದರೆ ಅವರ ಮಕ್ಕಳು ಮೀಸಲಾತಿಯಿಂದ ಹೊರಬರಬೇಕು’ ಎಂದು ಪೀಠ ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿತು.</p><p>ಶ್ರೀಮಂತ ವರ್ಗಗಳನ್ನು ಮೀಸಲಾತಿ ಸೌಲಭ್ಯಗಳಿಂದ ಹೊರಗಿಡಲು ಸರ್ಕಾರ ಈಗಾಗಲೇ ಹಲವು ಆದೇಶಗಳನ್ನು ಜಾರಿಗೊಳಿಸಿದೆ. ಆದರೆ ಈಗ ಅವುಗಳನ್ನು ಪ್ರಶ್ನಿಸಲಾಗುತ್ತಿದೆ ಎಂದು ಪೀಠ ಹೇಳಿತು. </p>.ಮಾನವ ಇತಿಹಾಸವನ್ನೇ ಬದಲಿಸಿದ್ದ ಎಲ್ ನಿನೊ! ಕಾದಿದೆಯಾ ಮಹಾ ವಿಪತ್ತು?.<h2>ಏನಿದು ಪ್ರಕರಣ?</h2><p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ (ಕೆಪಿಟಿಸಿಎಲ್) ಮೀಸಲು ವರ್ಗದ ಅಡಿಯಲ್ಲಿ ಅರ್ಜಿದಾರರನ್ನು ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗೆ ಆಯ್ಕೆ ಮಾಡಲಾಗಿತ್ತು. </p><p>ಆದರೆ, ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯು ಅವರು ಕೆನೆಪದರದೊಳಗೆ ಬರುತ್ತಾರೆ ಎಂದು ತೀರ್ಮಾನಿಸಿ, ಅವರ ಜಾತಿ ಪ್ರಮಾಣಪತ್ರದ ಸಿಂಧುತ್ವವನ್ನು ರದ್ದುಗೊಳಿಸಿತು. </p><p>ಅಭ್ಯರ್ಥಿಯ ಇಬ್ಬರೂ ಪೋಷಕರು ಸರ್ಕಾರಿ ನೌಕರರಾಗಿದ್ದು, ಅವರ ಒಟ್ಟು ಆದಾಯವು ನಿಗದಿತ ಕೆನೆಪದರದ ಮಿತಿಯನ್ನು (₹ 8 ಲಕ್ಷ) ಮೀರಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ್ದ ಅರ್ಜಿದಾರರ ಜಾತಿ ಪ್ರಮಾಣಪತ್ರ ಸಿಂಧುತ್ವ ಈ ಕಾರಣಕ್ಕೆ ರದ್ದುಗೊಂಡಿತ್ತು. </p>.ಒಂದು ಗುರಿ, ಭಿನ್ನ ಮಾರ್ಗ: ಅಮೆರಿಕ, ಚೀನಾದ ಎ.ಐ ಓಟದಲ್ಲಿ ಗೆಲ್ಲುವವರು ಯಾರು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>