<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದ ಜಾರಿ ನಿರ್ದೇಶನಾಲಯದ ವಿರುದ್ದ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.</p><p>ಮರಳು ಅಕ್ರಮ ಗಾಣಿಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು, ವೆಲ್ಲೂರು, ತಿರುಚಿರಾಪಳ್ಳಿ, ಕರೂರ್, ತಾಂಜಾವೂರು ಹಾಗೂ ಅರಿಯಲೂರು ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು.</p>.ಮಸ್ಕಿ | ಉತ್ಖನನಕ್ಕೆ ಮುಂದಾದ ತಮಿಳುನಾಡು ಸರ್ಕಾರ.<p> ಈ ನೋಟಿಸ್ ವಿರುದ್ಧ ಮದ್ರಾಸ್ ಹೈಕೋರ್ಟ್ ಕದ ತಟ್ದಿದ್ದ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ತಡೆಯಾಜ್ಞೆ ತಂದಿದ್ದರು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್ ಮೊರೆಹೋಗಿತ್ತು.</p><p>‘ರಾಜ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಲು ಹೇಗೆ ಸಾಧ್ಯ? ಯಾವ ಕಾನೂನಿನಲ್ಲಿ ಇದಕ್ಕೆ ಅವಕಾಶ ಇದೆ? ಜಾರಿ ನಿರ್ದೇಶನಾಲಯದ ವಿರುದ್ಧ ಈ ರಿಟ್ ಅರ್ಜಿಯನ್ನು ಹೇಗೆ ಸಲ್ಲಿಸಬಹುದು ಎನ್ನುವುದನ್ನು ನಮಗೆ ತಿಳಿಸಿ. ಈ ಪ್ರರಣದಲ್ಲಿ ರಾಜ್ಯಕ್ಕೆ ಹೇಗೆ ಸಮಸ್ಯೆಯಾಗಿದೆ?’ ಎಂದು ತಮಿಳುನಾಡು ಸರ್ಕಾರ ಪರ ಹಾಜರಾದ ವಕೀಲರನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಪಂಕಜ್ ಮಿತ್ತಲ್ ಅವರ ಪೀಠ ಪ್ರಶ್ನೆ ಮಾಡಿತು.</p>.7 ಗುರಿಗಳನ್ನು ಸಾಧಿಸುವ ಬಜೆಟ್ ಮಂಡಿಸಿದ ತಮಿಳುನಾಡು ಸರ್ಕಾರ.<p>ಅಲ್ಲದೆ ಅಧಿಕಾರಿಗಳು ಇ.ಡಿ. ಜೊತೆ ಸಹಕರಿಸಬೇಕಿತ್ತು ಎಂದು ಹೇಳಿತು.</p><p>‘ತನಿಖಾ ಸಂಸ್ಥೆಯ ಕಾನೂನು ಬಾಹಿರ ವಿಚಾರಣೆಯಿಂದ ಅಧಿಕಾರಿಗಳನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ’ ಎಂದು ತಮಿಳುನಾಡು ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಗೂ ಅಮಿತ್ ಆನಂದ್ ತಿವಾರಿ ವಾದಿಸಿದರು.</p><p>‘ಜಿಲ್ಲಾಧಿಕಾರಿಗಳು ಆರೋಪಿಗಳಲ್ಲ. ಸಾಕ್ಷಿಗಳನ್ನಾಗಿಸಲು ಅವರಿಗೆ ನೋಟಿಸ್ ನೀಡಲಾಗಿತ್ತು’ ಎಂದು ಜಾರಿ ನಿರ್ದೇಶನಾಲಯದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ನ್ಯಾಯಾಲಯಕ್ಕೆ ಅರಿಕೆ ಮಾಡಿದರು.</p> .ತಮಿಳುನಾಡು: ವಿರುಧ್ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದ ಜಾರಿ ನಿರ್ದೇಶನಾಲಯದ ವಿರುದ್ದ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.</p><p>ಮರಳು ಅಕ್ರಮ ಗಾಣಿಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು, ವೆಲ್ಲೂರು, ತಿರುಚಿರಾಪಳ್ಳಿ, ಕರೂರ್, ತಾಂಜಾವೂರು ಹಾಗೂ ಅರಿಯಲೂರು ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು.</p>.ಮಸ್ಕಿ | ಉತ್ಖನನಕ್ಕೆ ಮುಂದಾದ ತಮಿಳುನಾಡು ಸರ್ಕಾರ.<p> ಈ ನೋಟಿಸ್ ವಿರುದ್ಧ ಮದ್ರಾಸ್ ಹೈಕೋರ್ಟ್ ಕದ ತಟ್ದಿದ್ದ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ತಡೆಯಾಜ್ಞೆ ತಂದಿದ್ದರು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್ ಮೊರೆಹೋಗಿತ್ತು.</p><p>‘ರಾಜ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಲು ಹೇಗೆ ಸಾಧ್ಯ? ಯಾವ ಕಾನೂನಿನಲ್ಲಿ ಇದಕ್ಕೆ ಅವಕಾಶ ಇದೆ? ಜಾರಿ ನಿರ್ದೇಶನಾಲಯದ ವಿರುದ್ಧ ಈ ರಿಟ್ ಅರ್ಜಿಯನ್ನು ಹೇಗೆ ಸಲ್ಲಿಸಬಹುದು ಎನ್ನುವುದನ್ನು ನಮಗೆ ತಿಳಿಸಿ. ಈ ಪ್ರರಣದಲ್ಲಿ ರಾಜ್ಯಕ್ಕೆ ಹೇಗೆ ಸಮಸ್ಯೆಯಾಗಿದೆ?’ ಎಂದು ತಮಿಳುನಾಡು ಸರ್ಕಾರ ಪರ ಹಾಜರಾದ ವಕೀಲರನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಪಂಕಜ್ ಮಿತ್ತಲ್ ಅವರ ಪೀಠ ಪ್ರಶ್ನೆ ಮಾಡಿತು.</p>.7 ಗುರಿಗಳನ್ನು ಸಾಧಿಸುವ ಬಜೆಟ್ ಮಂಡಿಸಿದ ತಮಿಳುನಾಡು ಸರ್ಕಾರ.<p>ಅಲ್ಲದೆ ಅಧಿಕಾರಿಗಳು ಇ.ಡಿ. ಜೊತೆ ಸಹಕರಿಸಬೇಕಿತ್ತು ಎಂದು ಹೇಳಿತು.</p><p>‘ತನಿಖಾ ಸಂಸ್ಥೆಯ ಕಾನೂನು ಬಾಹಿರ ವಿಚಾರಣೆಯಿಂದ ಅಧಿಕಾರಿಗಳನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ’ ಎಂದು ತಮಿಳುನಾಡು ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಗೂ ಅಮಿತ್ ಆನಂದ್ ತಿವಾರಿ ವಾದಿಸಿದರು.</p><p>‘ಜಿಲ್ಲಾಧಿಕಾರಿಗಳು ಆರೋಪಿಗಳಲ್ಲ. ಸಾಕ್ಷಿಗಳನ್ನಾಗಿಸಲು ಅವರಿಗೆ ನೋಟಿಸ್ ನೀಡಲಾಗಿತ್ತು’ ಎಂದು ಜಾರಿ ನಿರ್ದೇಶನಾಲಯದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ನ್ಯಾಯಾಲಯಕ್ಕೆ ಅರಿಕೆ ಮಾಡಿದರು.</p> .ತಮಿಳುನಾಡು: ವಿರುಧ್ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>