<p><strong>ನವದೆಹಲಿ:</strong> ‘ರಾಷ್ಟ್ರೀಯ ಹೆದ್ದಾರಿ ಮಾರ್ಗಲ್ಲಿ 65 ಕಿ.ಮೀವರೆಗೆ ಕ್ರಮಿಸಲು 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆಯಲ್ಲಿ ಪ್ರಯಾಣಿಕ ಸೆಣಸಾಡಬೇಕು ಎನ್ನುವಂತಾದರೆ ಆತ ಏಕೆ ಟೋಲ್ ಪಾವತಿಸಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (ಎನ್ಎಚ್ಎಐ) ಸುಪ್ರೀಂಕೋರ್ಟ್ ಸೋಮವಾರ ಪ್ರಶ್ನಿಸಿದೆ. </p>.<p>ಕೇರಳದ ತ್ರಿಶ್ಶೂರ್ನ ಪಾಲಿಯೇಕ್ಕರ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ರದ್ದುಗೊಳಿಸಿರುವ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುರುವಾಯೂರ್ ಮೂಲ ಸೌಕರ್ಯ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. </p>.<p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್, ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. </p>.<p>ವಿಚಾರಣೆ ವೇಳೆ, ಹೆದ್ದಾರಿ ಮಾರ್ಗದಲ್ಲಿ ವಾರಂತ್ಯದಲ್ಲಿ 12 ಗಂಟೆಗಳ ಟ್ರಾಫಿಕ್ ದಟ್ಟಣೆ ಇರುತ್ತದೆ ಎಂಬುದನ್ನು ನ್ಯಾಯಪೀಠದ ಗಮನಕ್ಕೆ ತರಲಾಗಿದೆ.</p>.<p>ನ್ಯಾಯಪೀಠವು ಪ್ರಕರಣ ಕುರಿತ ತೀರ್ಪನ್ನು ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಾಷ್ಟ್ರೀಯ ಹೆದ್ದಾರಿ ಮಾರ್ಗಲ್ಲಿ 65 ಕಿ.ಮೀವರೆಗೆ ಕ್ರಮಿಸಲು 12 ಗಂಟೆಗಳ ಕಾಲ ಟ್ರಾಫಿಕ್ ದಟ್ಟಣೆಯಲ್ಲಿ ಪ್ರಯಾಣಿಕ ಸೆಣಸಾಡಬೇಕು ಎನ್ನುವಂತಾದರೆ ಆತ ಏಕೆ ಟೋಲ್ ಪಾವತಿಸಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (ಎನ್ಎಚ್ಎಐ) ಸುಪ್ರೀಂಕೋರ್ಟ್ ಸೋಮವಾರ ಪ್ರಶ್ನಿಸಿದೆ. </p>.<p>ಕೇರಳದ ತ್ರಿಶ್ಶೂರ್ನ ಪಾಲಿಯೇಕ್ಕರ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹವನ್ನು ರದ್ದುಗೊಳಿಸಿರುವ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುರುವಾಯೂರ್ ಮೂಲ ಸೌಕರ್ಯ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. </p>.<p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಹಾಗೂ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್, ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. </p>.<p>ವಿಚಾರಣೆ ವೇಳೆ, ಹೆದ್ದಾರಿ ಮಾರ್ಗದಲ್ಲಿ ವಾರಂತ್ಯದಲ್ಲಿ 12 ಗಂಟೆಗಳ ಟ್ರಾಫಿಕ್ ದಟ್ಟಣೆ ಇರುತ್ತದೆ ಎಂಬುದನ್ನು ನ್ಯಾಯಪೀಠದ ಗಮನಕ್ಕೆ ತರಲಾಗಿದೆ.</p>.<p>ನ್ಯಾಯಪೀಠವು ಪ್ರಕರಣ ಕುರಿತ ತೀರ್ಪನ್ನು ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>