<p><strong>ನವದೆಹಲಿ:</strong> ಅತ್ಯಾಚಾರ ಸಂತ್ರಸ್ತೆಯೊಬ್ಬರನ್ನು ಭಾಗಶಃ ವಿಚಾರಣೆ ನಡೆಸಿದ ಬಳಿಕ ವಿಚಾರಣೆಯನ್ನು ನಾಲ್ಕು ತಿಂಗಳು ಮುಂದೂಡಿರುವ ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವೊಂದರ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ವಿಚಾರಣಾ ನ್ಯಾಯಾಲಯ ಮತ್ತು ಪ್ರಕರಣದ ತನಿಖೆ ನಡೆಸಿದ ಸಿಬಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಜೆ.ಬಿ ಪಾರ್ದೀವಾಲಾ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು ನಿರ್ದೇಶನ ನೀಡಿದೆ.</p>.<p>‘ಸಂತ್ರಸ್ತೆಯು ಈಗಾಗಲೇ ಸಾಕ್ಷಿದಾರರಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಅವರ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಲಾಗಿದೆ. ಸಂತ್ರಸ್ತೆಯೇ ಸಾಕ್ಷಿದಾರರಾಗಿರುವಾಗ ಅವರ ವಿಚಾರಣೆಯನ್ನು ಬಿಡಿಬಿಡಿಯಾಗಿ ಯಾಕೆ ನಡೆಸಲಾಗುತ್ತಿದೆ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ’ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. </p>.<p>‘ವಿಚಾರಣೆಯನ್ನು ದೀರ್ಘಾವಧಿಗೆ ಮುಂದೂಡುವ ಮೂಲಕ ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ವಿಚಾರಣಾ ನ್ಯಾಯಾಲಯವು ಅವಕಾಶ ಕಲ್ಪಿಸಿದೆ. ಇದು ಗಂಭೀರ ಪ್ರಕರಣವಾಗಿದ್ದು, ಇದನ್ನು ನಿರ್ಲಕ್ಷಿಸುವಂತಿಲ್ಲ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಸಿಬಿಐ, ಅದರಲ್ಲೂ ಮುಖ್ಯವಾಗಿ ಸರ್ಕಾರಿ ವಕೀಲರು ಈ ಬಗ್ಗೆ ಉತ್ತರಿಸಬೇಕು ನೀಡಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.</p>.<p>ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ನೀಡಿರುವ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅತ್ಯಾಚಾರ ಸಂತ್ರಸ್ತೆಯೊಬ್ಬರನ್ನು ಭಾಗಶಃ ವಿಚಾರಣೆ ನಡೆಸಿದ ಬಳಿಕ ವಿಚಾರಣೆಯನ್ನು ನಾಲ್ಕು ತಿಂಗಳು ಮುಂದೂಡಿರುವ ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವೊಂದರ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ವಿಚಾರಣಾ ನ್ಯಾಯಾಲಯ ಮತ್ತು ಪ್ರಕರಣದ ತನಿಖೆ ನಡೆಸಿದ ಸಿಬಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಜೆ.ಬಿ ಪಾರ್ದೀವಾಲಾ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು ನಿರ್ದೇಶನ ನೀಡಿದೆ.</p>.<p>‘ಸಂತ್ರಸ್ತೆಯು ಈಗಾಗಲೇ ಸಾಕ್ಷಿದಾರರಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಅವರ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಲಾಗಿದೆ. ಸಂತ್ರಸ್ತೆಯೇ ಸಾಕ್ಷಿದಾರರಾಗಿರುವಾಗ ಅವರ ವಿಚಾರಣೆಯನ್ನು ಬಿಡಿಬಿಡಿಯಾಗಿ ಯಾಕೆ ನಡೆಸಲಾಗುತ್ತಿದೆ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ’ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. </p>.<p>‘ವಿಚಾರಣೆಯನ್ನು ದೀರ್ಘಾವಧಿಗೆ ಮುಂದೂಡುವ ಮೂಲಕ ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ವಿಚಾರಣಾ ನ್ಯಾಯಾಲಯವು ಅವಕಾಶ ಕಲ್ಪಿಸಿದೆ. ಇದು ಗಂಭೀರ ಪ್ರಕರಣವಾಗಿದ್ದು, ಇದನ್ನು ನಿರ್ಲಕ್ಷಿಸುವಂತಿಲ್ಲ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಸಿಬಿಐ, ಅದರಲ್ಲೂ ಮುಖ್ಯವಾಗಿ ಸರ್ಕಾರಿ ವಕೀಲರು ಈ ಬಗ್ಗೆ ಉತ್ತರಿಸಬೇಕು ನೀಡಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.</p>.<p>ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ನೀಡಿರುವ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>