<p><strong>ನವದೆಹಲಿ</strong>: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತಮ್ಮನ್ನು ಅಪರಾಧಿಯಾಗಿಸಿ ಸುಪ್ರೀಂ ಕೋರ್ಟ್ನ ಆಂತರಿಕ ತನಿಖಾ ಸಮಿತಿಯು ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿದ್ದ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ ಮತ್ತೆ ತರಾಟೆಗೆ ತೆಗೆದುಕೊಂಡಿತು.</p>.<p>ನಿಮ್ಮ ಬಗ್ಗೆ ನಿಮಗೇ ವಿಶ್ವಾಸ ಇಲ್ಲದ ಮೇಲೆ ಆಂತರಿಕ ತನಿಖಾ ಸಮಿತಿ ಎದುರು ಹಾಜರಾಗಿದ್ದು ಏಕೆ? ಆಗಲೇ ಏಕೆ ಅದನ್ನು ಪ್ರಶ್ನಿಸಲಿಲ್ಲ ಎಂದು ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ಮತ್ತೆ ಪ್ರಶ್ನಿಸಿತು.</p>.<p>ಆಂತರಿಕ ತನಿಖಾ ಸಮಿತಿಯ ವಿರುದ್ಧ ಇದಕ್ಕೂ ಮುಂಚೆಯೇ ಸುಪ್ರೀಂ ಕೋರ್ಟ್ ಬಳಿ ಬರಬೇಕಿತ್ತು ಎಂದು ನ್ಯಾಯಾಲಯವು ಹೇಳಿತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎ.ಜಿ.ಮಸೀಹ್ ಅವರ ನೇತೃತ್ವದ ನ್ಯಾಯಪೀಠವು, ನ್ಯಾಯಮೂರ್ತಿಯಿಂದ ದುರ್ನಡತೆ ನಡೆದಿದೆ ಎಂದು ಸಾಬೀತು ಮಾಡುವ ಪುರಾವೆಗಳು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರ ಬಳಿ ಇದ್ದರೆ, ಅವರು ಆ ಬಗ್ಗೆ ರಾಷ್ಟ್ರಪತಿಗಳು ಮತ್ತು ಪ್ರಧಾನಿಮಂತ್ರಿ ಅವರಿಗೆ ತಿಳಿಸಬಹುದು ಎಂದಿತು.</p>.<p>ವರ್ಮಾ ಅವರ ಅಶಿಸ್ತಿನ ವರ್ತನೆ ಮತ್ತು ಅವರ ವಿರುದ್ಧದ ಆರೋಪಗಳ ಕುರಿತ ಸಾಕ್ಷ್ಯಗಳ ಪರಿಶೀಲನೆ ಬಳಿಕ ಅವರ ಪದಚ್ಯುತಿ ಪ್ರಕ್ರಿಯೆ ಆರಂಭಕ್ಕೆ ಸಂಸತ್ತಿಗೆ ಸಿಜೆಐ ಶಿಫಾರಸು ಮಾಡಬಹುದು. ಶಿಫಾರಸನ್ನು ಸ್ವೀಕರಿಸುವ ಅಥವಾ ನಿರಾಕರಿಸುವ ಅಧಿಕಾರ ಸಂಸತ್ತಿಗೆ ಇರುತ್ತದೆ ಎಂದು ನ್ಯಾಯಪೀಠ ತಿಳಿಸಿತು.</p>.<p>‘ಶಿಫಾರಸಿನ ಅನ್ವಯ ಕ್ರಮ ಕೈಗೊಳ್ಳಬೇಕೇ ಅಥವಾ ಬೇಡವೇ ಎಂಬುದು ರಾಜಕೀಯ ನಿರ್ಧಾರ. ಆದರೆ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ ಎಂಬ ಸಂದೇಶವನ್ನು ನ್ಯಾಯಾಂಗವು ಸಮಾಜಕ್ಕೆ ರವಾನಿಸಬೇಕಿದೆ’ ಎಂದು ನ್ಯಾಯಪೀಠ ಪ್ರತಿಪಾದಿಸಿತು.</p>.<p>ವರ್ಮಾ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ವರ್ಮಾ ಅವರ ಪದಚ್ಯುತಿಗೆ ಸಲಹೆ ನೀಡಿದ ಆಂತರಿಕ ತನಿಖಾ ಸಮಿತಿಯ ಶಿಫಾರಸು ಅಸಾಂವಿಧಾನಿಕ. ಈ ರೀತಿಯ ಶಿಫಾರಸು ಅಪಾಯಕಾರಿ ನಿದರ್ಶನವಾಗಲಿದೆ’ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರು.</p>.<p>ವರ್ಮಾ ವಿರುದ್ಧ ವಿಡಿಯೊ ಬಿಡುಗಡೆಯಾಗಿ, ಅವರ ಗೌರವಕ್ಕೆ ಅದಾಗಲೇ ಚ್ಯುತಿ ಬಂದಿದ್ದ ಕಾರಣ ಅವರು ಮುಂಚೆಯೇ ಸುಪ್ರೀಂ ಕೋರ್ಟ್ ಮೊರೆಹೋಗಿರಲಿಲ್ಲ ಎಂದು ಸಿಬಲ್ ತಿಳಿಸಿದರು.</p>.<p>ಆಂತರಿಕ ತನಿಖಾ ಸಮಿತಿ ಶಿಫಾರಸು ಮತ್ತು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ‘ಸಂಸತ್ತಿನಲ್ಲಿ ವರ್ಮಾ ಅವರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೆಸಬೇಕು’ ಎಂದು ನೀಡಿರುವ ಸಲಹೆ ಪ್ರಶ್ನಿಸಿ ವರ್ಮಾ ಅವರು ಸಲ್ಲಿಸಿರುವ ಅರ್ಜಿಯ ಕುರಿತ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿತು.</p>.<p>ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿ ಸಲ್ಲಿಕೆಯಾದ ಅರ್ಜಿಯ ಆದೇಶವನ್ನೂ ಕೋರ್ಟ್ ಕಾಯ್ದಿರಿಸಿತು.</p>.<p>‘ನಗದು ಪತ್ತೆಯಾಗಿದ್ದ ಕೊಠಡಿಯನ್ನು ವರ್ಮಾ ಹಾಗೂ ಅವರ ಕುಟುಂಬಸ್ಥರು ಗೋಪ್ಯವಾಗಿ ನಿರ್ವಹಿಸುತ್ತಿದ್ದರು ಎಂಬುದು ಸಾಬೀತಾಗಿದೆ. ಈ ಅಪರಾಧವು ಅವರ ಪದಚ್ಯುತಿಯನ್ನು ಪ್ರತಿಪಾದಿಸುವಷ್ಟು ಗಂಭೀರವಾದುದು’ ಎಂದು ಸಮಿತಿ ವರದಿಯಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತಮ್ಮನ್ನು ಅಪರಾಧಿಯಾಗಿಸಿ ಸುಪ್ರೀಂ ಕೋರ್ಟ್ನ ಆಂತರಿಕ ತನಿಖಾ ಸಮಿತಿಯು ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿದ್ದ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ ಮತ್ತೆ ತರಾಟೆಗೆ ತೆಗೆದುಕೊಂಡಿತು.</p>.<p>ನಿಮ್ಮ ಬಗ್ಗೆ ನಿಮಗೇ ವಿಶ್ವಾಸ ಇಲ್ಲದ ಮೇಲೆ ಆಂತರಿಕ ತನಿಖಾ ಸಮಿತಿ ಎದುರು ಹಾಜರಾಗಿದ್ದು ಏಕೆ? ಆಗಲೇ ಏಕೆ ಅದನ್ನು ಪ್ರಶ್ನಿಸಲಿಲ್ಲ ಎಂದು ವರ್ಮಾ ಅವರನ್ನು ಸುಪ್ರೀಂ ಕೋರ್ಟ್ ಮತ್ತೆ ಪ್ರಶ್ನಿಸಿತು.</p>.<p>ಆಂತರಿಕ ತನಿಖಾ ಸಮಿತಿಯ ವಿರುದ್ಧ ಇದಕ್ಕೂ ಮುಂಚೆಯೇ ಸುಪ್ರೀಂ ಕೋರ್ಟ್ ಬಳಿ ಬರಬೇಕಿತ್ತು ಎಂದು ನ್ಯಾಯಾಲಯವು ಹೇಳಿತು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎ.ಜಿ.ಮಸೀಹ್ ಅವರ ನೇತೃತ್ವದ ನ್ಯಾಯಪೀಠವು, ನ್ಯಾಯಮೂರ್ತಿಯಿಂದ ದುರ್ನಡತೆ ನಡೆದಿದೆ ಎಂದು ಸಾಬೀತು ಮಾಡುವ ಪುರಾವೆಗಳು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರ ಬಳಿ ಇದ್ದರೆ, ಅವರು ಆ ಬಗ್ಗೆ ರಾಷ್ಟ್ರಪತಿಗಳು ಮತ್ತು ಪ್ರಧಾನಿಮಂತ್ರಿ ಅವರಿಗೆ ತಿಳಿಸಬಹುದು ಎಂದಿತು.</p>.<p>ವರ್ಮಾ ಅವರ ಅಶಿಸ್ತಿನ ವರ್ತನೆ ಮತ್ತು ಅವರ ವಿರುದ್ಧದ ಆರೋಪಗಳ ಕುರಿತ ಸಾಕ್ಷ್ಯಗಳ ಪರಿಶೀಲನೆ ಬಳಿಕ ಅವರ ಪದಚ್ಯುತಿ ಪ್ರಕ್ರಿಯೆ ಆರಂಭಕ್ಕೆ ಸಂಸತ್ತಿಗೆ ಸಿಜೆಐ ಶಿಫಾರಸು ಮಾಡಬಹುದು. ಶಿಫಾರಸನ್ನು ಸ್ವೀಕರಿಸುವ ಅಥವಾ ನಿರಾಕರಿಸುವ ಅಧಿಕಾರ ಸಂಸತ್ತಿಗೆ ಇರುತ್ತದೆ ಎಂದು ನ್ಯಾಯಪೀಠ ತಿಳಿಸಿತು.</p>.<p>‘ಶಿಫಾರಸಿನ ಅನ್ವಯ ಕ್ರಮ ಕೈಗೊಳ್ಳಬೇಕೇ ಅಥವಾ ಬೇಡವೇ ಎಂಬುದು ರಾಜಕೀಯ ನಿರ್ಧಾರ. ಆದರೆ ಎಲ್ಲಾ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ ಎಂಬ ಸಂದೇಶವನ್ನು ನ್ಯಾಯಾಂಗವು ಸಮಾಜಕ್ಕೆ ರವಾನಿಸಬೇಕಿದೆ’ ಎಂದು ನ್ಯಾಯಪೀಠ ಪ್ರತಿಪಾದಿಸಿತು.</p>.<p>ವರ್ಮಾ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ‘ವರ್ಮಾ ಅವರ ಪದಚ್ಯುತಿಗೆ ಸಲಹೆ ನೀಡಿದ ಆಂತರಿಕ ತನಿಖಾ ಸಮಿತಿಯ ಶಿಫಾರಸು ಅಸಾಂವಿಧಾನಿಕ. ಈ ರೀತಿಯ ಶಿಫಾರಸು ಅಪಾಯಕಾರಿ ನಿದರ್ಶನವಾಗಲಿದೆ’ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರು.</p>.<p>ವರ್ಮಾ ವಿರುದ್ಧ ವಿಡಿಯೊ ಬಿಡುಗಡೆಯಾಗಿ, ಅವರ ಗೌರವಕ್ಕೆ ಅದಾಗಲೇ ಚ್ಯುತಿ ಬಂದಿದ್ದ ಕಾರಣ ಅವರು ಮುಂಚೆಯೇ ಸುಪ್ರೀಂ ಕೋರ್ಟ್ ಮೊರೆಹೋಗಿರಲಿಲ್ಲ ಎಂದು ಸಿಬಲ್ ತಿಳಿಸಿದರು.</p>.<p>ಆಂತರಿಕ ತನಿಖಾ ಸಮಿತಿ ಶಿಫಾರಸು ಮತ್ತು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರು ‘ಸಂಸತ್ತಿನಲ್ಲಿ ವರ್ಮಾ ಅವರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೆಸಬೇಕು’ ಎಂದು ನೀಡಿರುವ ಸಲಹೆ ಪ್ರಶ್ನಿಸಿ ವರ್ಮಾ ಅವರು ಸಲ್ಲಿಸಿರುವ ಅರ್ಜಿಯ ಕುರಿತ ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿತು.</p>.<p>ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿ ಸಲ್ಲಿಕೆಯಾದ ಅರ್ಜಿಯ ಆದೇಶವನ್ನೂ ಕೋರ್ಟ್ ಕಾಯ್ದಿರಿಸಿತು.</p>.<p>‘ನಗದು ಪತ್ತೆಯಾಗಿದ್ದ ಕೊಠಡಿಯನ್ನು ವರ್ಮಾ ಹಾಗೂ ಅವರ ಕುಟುಂಬಸ್ಥರು ಗೋಪ್ಯವಾಗಿ ನಿರ್ವಹಿಸುತ್ತಿದ್ದರು ಎಂಬುದು ಸಾಬೀತಾಗಿದೆ. ಈ ಅಪರಾಧವು ಅವರ ಪದಚ್ಯುತಿಯನ್ನು ಪ್ರತಿಪಾದಿಸುವಷ್ಟು ಗಂಭೀರವಾದುದು’ ಎಂದು ಸಮಿತಿ ವರದಿಯಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>