ಮಹಾರಾಷ್ಟ್ರದ ಮಾಧವಬಾಗ್ ಹಾರ್ಟ್ ಹಾಸ್ಟಿಟಲ್ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವಂತೆ ಅಸರಾಂ ಪರ ಹಾಜರಿದ್ದ ವಕೀಲರು ಪೀಠವನ್ನು ಕೋರಿದರು. ಇದನ್ನು ರಾಜಸ್ಥಾನ ಹೈಕೋರ್ಟ್ನಲ್ಲೇ ಕೋರುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿತು.
ಪ್ರಕರಣದಲ್ಲಿ ಶಿಕ್ಷೆಯ ವಿರುದ್ಧ ಹೈಕೋರ್ಟ್ನಲ್ಲಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಳಂಬಗೊಳಿಸಲು ಅಸಾರಾಂ ಮಾಡಿದ ಉದ್ದೇಶಪೂರ್ವಕ ಪ್ರಯತ್ನಗಳನ್ನು ನ್ಯಾಯಮೂರ್ತಿ ಖನ್ನಾ ಅವರು ಇದೇ ವೇಳೆ ಉಲ್ಲೇಖಿಸಿದರು.