<p><strong>ನವದೆಹಲಿ: </strong>ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಸಂದರ್ಭದಲ್ಲಿ ವಿಚಾರಣೆಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ.</p>.<p>‘ಹಿಜಾಬ್ ವಿವಾದದ ಕುರಿತಂತೆ ಕರ್ನಾಟಕದಲ್ಲಿ ಏನು ಆಗುತ್ತಿದೆ ಮತ್ತು ಹೈಕೋರ್ಟ್ನ ವಿಚಾರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಗಮನಿಸುತ್ತಿದೆ. ಇದನ್ನು ರಾಷ್ಟ್ರೀಯ ವಿವಾದವನ್ನಾಗಿ ಮಾಡಬೇಡಿ. ಸೂಕ್ತ ಸಂದರ್ಭದಲ್ಲಿ ಮಧ್ಯಪ್ರವೇಶಿಸುತ್ತೇವೆ’ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ್ದಾರೆ.</p>.<p><strong>ಏನಿದು ಪ್ರಕರಣ?: </strong>ಹಿಜಾಬ್ ಕುರಿತಂತೆ ಅಂತಿಮ ತೀರ್ಪು ಹೊರಬೀಳುವವರೆಗೂ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಬಾರದು ಎಂಬ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.</p>.<p>ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಹೈಕೋರ್ಟ್ನ ವಿಚಾರಣೆ ಮತ್ತು ಇದಕ್ಕೆ ಸಂಬಂಧಿಸಿದಂತೆ ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ಕೋರಲಾಗಿದೆ.</p>.<p>ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.</p>.<p>ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಶಾಲಾ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದೆ.</p>.<p>ಬುಧವಾರ ರಚನೆಯಾದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಹೈಕೋರ್ಟ್ನ ತ್ರಿಸದಸ್ಯ ಪೂರ್ಣ ಪೀಠವು, ಈ ವಿಷಯವನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಬೇಕೆಂದು ಹೇಳಿದ್ದು, ಅಲ್ಲಿಯವರೆಗೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಹೇಳಿದೆ.</p>.<p>'ಪ್ರಕರಣ ಇತ್ಯರ್ಥವಾಗುವವರೆಗೆ, ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಲು ಒತ್ತಾಯಿಸಬಾರದು’ಎಂದು ಅವಸ್ಥಿ ಹೇಳಿದ್ದಾರೆ.</p>.<p>‘ಶಾಲಾ-ಕಾಲೇಜುಗಳನ್ನು ಪ್ರಾರಂಭಿಸೋಣ. ಆದರೆ ವಿಷಯ ಇತ್ಯರ್ಥವಾಗುವವರೆಗೆ ಯಾವುದೇ ವಿದ್ಯಾರ್ಥಿಯು ಧಾರ್ಮಿಕ ಉಡುಗೆ ತೊಡಲು ಒತ್ತಾಯಿಸಬಾರದು’ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಸಂದರ್ಭದಲ್ಲಿ ವಿಚಾರಣೆಕೈಗೆತ್ತಿಕೊಳ್ಳುವುದಾಗಿ ನ್ಯಾಯಾಲಯ ಹೇಳಿದೆ.</p>.<p>‘ಹಿಜಾಬ್ ವಿವಾದದ ಕುರಿತಂತೆ ಕರ್ನಾಟಕದಲ್ಲಿ ಏನು ಆಗುತ್ತಿದೆ ಮತ್ತು ಹೈಕೋರ್ಟ್ನ ವಿಚಾರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಗಮನಿಸುತ್ತಿದೆ. ಇದನ್ನು ರಾಷ್ಟ್ರೀಯ ವಿವಾದವನ್ನಾಗಿ ಮಾಡಬೇಡಿ. ಸೂಕ್ತ ಸಂದರ್ಭದಲ್ಲಿ ಮಧ್ಯಪ್ರವೇಶಿಸುತ್ತೇವೆ’ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ್ದಾರೆ.</p>.<p><strong>ಏನಿದು ಪ್ರಕರಣ?: </strong>ಹಿಜಾಬ್ ಕುರಿತಂತೆ ಅಂತಿಮ ತೀರ್ಪು ಹೊರಬೀಳುವವರೆಗೂ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಬಾರದು ಎಂಬ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.</p>.<p>ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಹೈಕೋರ್ಟ್ನ ವಿಚಾರಣೆ ಮತ್ತು ಇದಕ್ಕೆ ಸಂಬಂಧಿಸಿದಂತೆ ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ಕೋರಲಾಗಿದೆ.</p>.<p>ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.</p>.<p>ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಶಾಲಾ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದೆ.</p>.<p>ಬುಧವಾರ ರಚನೆಯಾದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿ ಜೆಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಹೈಕೋರ್ಟ್ನ ತ್ರಿಸದಸ್ಯ ಪೂರ್ಣ ಪೀಠವು, ಈ ವಿಷಯವನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಬೇಕೆಂದು ಹೇಳಿದ್ದು, ಅಲ್ಲಿಯವರೆಗೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಹೇಳಿದೆ.</p>.<p>'ಪ್ರಕರಣ ಇತ್ಯರ್ಥವಾಗುವವರೆಗೆ, ಧಾರ್ಮಿಕ ಸೂಚಕ ಉಡುಪುಗಳನ್ನು ಧರಿಸಲು ಒತ್ತಾಯಿಸಬಾರದು’ಎಂದು ಅವಸ್ಥಿ ಹೇಳಿದ್ದಾರೆ.</p>.<p>‘ಶಾಲಾ-ಕಾಲೇಜುಗಳನ್ನು ಪ್ರಾರಂಭಿಸೋಣ. ಆದರೆ ವಿಷಯ ಇತ್ಯರ್ಥವಾಗುವವರೆಗೆ ಯಾವುದೇ ವಿದ್ಯಾರ್ಥಿಯು ಧಾರ್ಮಿಕ ಉಡುಗೆ ತೊಡಲು ಒತ್ತಾಯಿಸಬಾರದು’ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>