<p><strong>ನವದೆಹಲಿ:</strong> ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜೊತೆ ನಕಲಿ ವಕೀಲರು ಮತ್ತು ಕಾರ್ಯಕರ್ತರು ನಂಟು ಹೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p><p>‘ಈ ವಿಚಾರವನ್ನು ಭಾವನಾತ್ಮಕವಾಗಿ ಪರಿಗಣಿಸಬೇಡಿ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಕೀಲರಾದ ಎನ್.ಕೆ. ಗೋಸ್ವಾಮಿ ಅವರಿಗೆ ಸೂಚಿಸಿದೆ.</p><p>ನಕಲಿ ಕಾನೂನು ಪದವಿ ವಿಚಾರವಾಗಿ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಮತ್ತೊಬ್ಬ ವಕೀಲರು, ‘ನ್ಯಾಯಾಲಯದ ವಿಚಾರಗಳು ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗಬಾರದು’ ಎಂದು ಹೇಳಿದರು.</p><p>‘ಮುಖ್ಯನ್ಯಾಯಮೂರ್ತಿಗಳ ಸ್ಪಷ್ಟನೆಯ ಹೊರತಾಗಿಯೂ, ವಿಕೃತ ಮತ್ತು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುವುದು ಮುಂದುವರಿದಿದೆ’ ಎಂದು ಗೋಸ್ವಾಮಿ ನ್ಯಾಯಾಲಯಕ್ಕೆ ತಿಳಿಸಿದರು.</p><p>‘ಈ ಅರ್ಜಿ ವಿಚಾರಣೆಗೆ ಅಂಥ ತುರ್ತು ಏನಿಲ್ಲ. ನಾವು ಪರಿಶೀಲಿಸುತ್ತೇವೆ’ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ತಿಳಿಸಿದರು.</p><p>ನ್ಯಾಯಾಲಯದ ವಿಚಾರಣೆ ಸಂದರ್ಭ ಮಾಡಲಾದ ಮೌಖಿಕ ಅವಲೋಕನಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ನಕಲಿ ಪದವಿ ಪಡೆದಿರುವವರು ವಕೀಲಿ ವೃತ್ತಿಯನ್ನು ಮಾಡುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆ ಮಾಡುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.</p><p>ಮೇ 15ರಂದು ವಕೀಲರೊಬ್ಬರ ಪದೋನ್ನತಿ ಕುರಿತ ಅರ್ಜಿಯ ವಿಚಾರಣೆ ವೇಳೆ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ‘ಜಿರಳೆಗಳು’ ಮತ್ತು ‘ಪರಾವಲಂಬಿಗಳು’ ಎಂಬ ಪದ ಬಳಸಿದ್ದರು. ಈ ಬಳಿಕ ‘ಜಿರಳೆ’ ಹೆಸರಿನಲ್ಲಿ ಸಿಜೆಪಿ ಹುಟ್ಟಿಕೊಂಡಿತ್ತು. </p><p>ತಮ್ಮ ಹೇಳಿಕೆಯು ನಕಲಿ ಪದವಿಗಳ ಮೂಲಕ ವಕೀಲ ವೃತ್ತಿಗೆ ಪ್ರವೇಶಿಸುವವರ ಕುರಿತು ಹೇಳಿಕೆ ನೀಡಿದ್ದೆ. ಆದರೆ ಕೆಲವು ಮಾಧ್ಯಮಗಳು ಅದನ್ನು ತಪ್ಪಾಗಿ ವರದಿ ಮಾಡಿವೆ ಎಂದು ಸಿಜೆಐ ಸ್ಪಷ್ಟನೆ ನೀಡಿದ್ದರು.</p>.<p><strong>‘ಸಿಜೆಪಿ: ರಾಜಕೀಯ ದೃಷ್ಟಿಕೋನದಿಂದ ನೋಡಬೇಡಿ’ </strong></p><p><strong>ಅಮರಾವತಿ:</strong> ಸಿಜೆಪಿ ದೇಶದ ಯುವಜನರ ನಿರಾಶೆಯ ಪ್ರತಿಫಲವಾಗಿದೆ. ಅದನ್ನು ಯುವಜನರ ಸಮಸ್ಯೆಗಳ ದೃಷ್ಟಿಯಿಂದ ನೋಡಬೇಕು ಎಂದು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಟಿಡಿಪಿ ಸೋಮವಾರ ಹೇಳಿದೆ. </p><p>ಸಿಜೆಪಿ ವಿಚಾರವನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಪ್ರಜಾಪ್ರಭುತ್ವ ಸರ್ಕಾರಗಳು ಯುವಜನರ ಭಾವನೆಗಳನ್ನು ಸ್ವೀಕರಿಸಬೇಕು ಎಂದು ಟಿಡಿಪಿ ರಾಜ್ಯ ಘಟಕದ ಅಧ್ಯಕ್ಷ ಪಲ್ಲ ಶ್ರೀನಿವಾಸ್ ರಾವ್ ಅವರು ಹೇಳಿದ್ದಾರೆ.</p> .ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮನೆಗೆ ಪೊಲೀಸ್ ಕಾವಲು: ಕಾರಣವೇನು?.ಕಾಕ್ರೋಚ್ ಪಾರ್ಟಿಯ ಎಕ್ಸ್, ಇನ್ಸ್ಟಾ, ವೆಬ್ಸೈಟ್ಗೆ ತಡೆ: ಅಭಿಜೀತ್ ದಿಪ್ಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜೊತೆ ನಕಲಿ ವಕೀಲರು ಮತ್ತು ಕಾರ್ಯಕರ್ತರು ನಂಟು ಹೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p><p>‘ಈ ವಿಚಾರವನ್ನು ಭಾವನಾತ್ಮಕವಾಗಿ ಪರಿಗಣಿಸಬೇಡಿ’ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಕೀಲರಾದ ಎನ್.ಕೆ. ಗೋಸ್ವಾಮಿ ಅವರಿಗೆ ಸೂಚಿಸಿದೆ.</p><p>ನಕಲಿ ಕಾನೂನು ಪದವಿ ವಿಚಾರವಾಗಿ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಮತ್ತೊಬ್ಬ ವಕೀಲರು, ‘ನ್ಯಾಯಾಲಯದ ವಿಚಾರಗಳು ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗಬಾರದು’ ಎಂದು ಹೇಳಿದರು.</p><p>‘ಮುಖ್ಯನ್ಯಾಯಮೂರ್ತಿಗಳ ಸ್ಪಷ್ಟನೆಯ ಹೊರತಾಗಿಯೂ, ವಿಕೃತ ಮತ್ತು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುವುದು ಮುಂದುವರಿದಿದೆ’ ಎಂದು ಗೋಸ್ವಾಮಿ ನ್ಯಾಯಾಲಯಕ್ಕೆ ತಿಳಿಸಿದರು.</p><p>‘ಈ ಅರ್ಜಿ ವಿಚಾರಣೆಗೆ ಅಂಥ ತುರ್ತು ಏನಿಲ್ಲ. ನಾವು ಪರಿಶೀಲಿಸುತ್ತೇವೆ’ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ತಿಳಿಸಿದರು.</p><p>ನ್ಯಾಯಾಲಯದ ವಿಚಾರಣೆ ಸಂದರ್ಭ ಮಾಡಲಾದ ಮೌಖಿಕ ಅವಲೋಕನಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ನಕಲಿ ಪದವಿ ಪಡೆದಿರುವವರು ವಕೀಲಿ ವೃತ್ತಿಯನ್ನು ಮಾಡುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆ ಮಾಡುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.</p><p>ಮೇ 15ರಂದು ವಕೀಲರೊಬ್ಬರ ಪದೋನ್ನತಿ ಕುರಿತ ಅರ್ಜಿಯ ವಿಚಾರಣೆ ವೇಳೆ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ‘ಜಿರಳೆಗಳು’ ಮತ್ತು ‘ಪರಾವಲಂಬಿಗಳು’ ಎಂಬ ಪದ ಬಳಸಿದ್ದರು. ಈ ಬಳಿಕ ‘ಜಿರಳೆ’ ಹೆಸರಿನಲ್ಲಿ ಸಿಜೆಪಿ ಹುಟ್ಟಿಕೊಂಡಿತ್ತು. </p><p>ತಮ್ಮ ಹೇಳಿಕೆಯು ನಕಲಿ ಪದವಿಗಳ ಮೂಲಕ ವಕೀಲ ವೃತ್ತಿಗೆ ಪ್ರವೇಶಿಸುವವರ ಕುರಿತು ಹೇಳಿಕೆ ನೀಡಿದ್ದೆ. ಆದರೆ ಕೆಲವು ಮಾಧ್ಯಮಗಳು ಅದನ್ನು ತಪ್ಪಾಗಿ ವರದಿ ಮಾಡಿವೆ ಎಂದು ಸಿಜೆಐ ಸ್ಪಷ್ಟನೆ ನೀಡಿದ್ದರು.</p>.<p><strong>‘ಸಿಜೆಪಿ: ರಾಜಕೀಯ ದೃಷ್ಟಿಕೋನದಿಂದ ನೋಡಬೇಡಿ’ </strong></p><p><strong>ಅಮರಾವತಿ:</strong> ಸಿಜೆಪಿ ದೇಶದ ಯುವಜನರ ನಿರಾಶೆಯ ಪ್ರತಿಫಲವಾಗಿದೆ. ಅದನ್ನು ಯುವಜನರ ಸಮಸ್ಯೆಗಳ ದೃಷ್ಟಿಯಿಂದ ನೋಡಬೇಕು ಎಂದು ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಟಿಡಿಪಿ ಸೋಮವಾರ ಹೇಳಿದೆ. </p><p>ಸಿಜೆಪಿ ವಿಚಾರವನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಪ್ರಜಾಪ್ರಭುತ್ವ ಸರ್ಕಾರಗಳು ಯುವಜನರ ಭಾವನೆಗಳನ್ನು ಸ್ವೀಕರಿಸಬೇಕು ಎಂದು ಟಿಡಿಪಿ ರಾಜ್ಯ ಘಟಕದ ಅಧ್ಯಕ್ಷ ಪಲ್ಲ ಶ್ರೀನಿವಾಸ್ ರಾವ್ ಅವರು ಹೇಳಿದ್ದಾರೆ.</p> .ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮನೆಗೆ ಪೊಲೀಸ್ ಕಾವಲು: ಕಾರಣವೇನು?.ಕಾಕ್ರೋಚ್ ಪಾರ್ಟಿಯ ಎಕ್ಸ್, ಇನ್ಸ್ಟಾ, ವೆಬ್ಸೈಟ್ಗೆ ತಡೆ: ಅಭಿಜೀತ್ ದಿಪ್ಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>