<p><strong>ನವದೆಹಲಿ:</strong> ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿರಿಸಿಕೊಂಡು ದ್ವೇಷ ಭಾಷಣ ಮಾಡುವುದನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಂತನ ಬೆಳವಣಿಗೆಯನ್ನು ‘ಬ್ರಾಹ್ಮಣಫೋಬಿಯಾ’ ಎಂದು ಬಣ್ಣಿಸಿದೆ.</p>.<p>ಮಹಾಲಿಂಗಂ ಬಾಲಾಜಿ ಅವರು ವಾದ ಮಂಡಿಸಿದ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ನೇತೃತ್ವದ ನ್ಯಾಯಪೀಠವು, ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಬಾರದು ಎಂದು ತಿಳಿಸಿದೆ.</p>.<p class="bodytext">‘ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡುವುದನ್ನು ಒಪ್ಪುವುದಿಲ್ಲ. ಇದು ಶಿಕ್ಷಣ, ಬೌದ್ಧಿಕ ಬೆಳವಣಿಗೆ ಹಾಗೂ ಸಹಿಷ್ಣುತೆಯನ್ನು ಒಳಗೊಂಡಿದೆ. ಎಲ್ಲರೂ ಭ್ರಾತೃತ್ವವನ್ನು ಪಾಲಿಸಿದರೆ, ಎಲ್ಲಿಯೂ ದ್ವೇಷ ಭಾಷಣ ಇರುವುದಿಲ್ಲ’ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ.</p>.<p class="bodytext">ದ್ವೇಷ ಭಾಷಣದ ವಿಚಾರದಲ್ಲಿ ಒಂದು ಸಮುದಾಯಕ್ಕೆ ಮಾತ್ರ ಏಕೆ ರಕ್ಷಣೆ ಕೋರಲಾಗಿದೆ ಎಂದು ಈ ವೇಳೆ ಅರ್ಜಿದಾರರನ್ನು ಪ್ರಶ್ನಿಸಿದರು.</p>.<p class="bodytext">ಅರ್ಜಿದಾರರು ಸ್ವತಃ ಅರ್ಜಿ ಹಿಂಪಡೆಯಲು ಮಾಡಿದ ಮನವಿಗೆ ನ್ಯಾಯಾಲಯವು ಸಮ್ಮತಿ ನೀಡಿತು.</p>.<p class="bodytext">‘ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆಯಲು ಒಪ್ಪಿದ್ದಾರೆ. ಅವರು ಸಲ್ಲಿಕೆಯನ್ನು ದಾಖಲೆಯಲ್ಲಿ ಇರಿಸಲಾಗಿದೆ. ಅರ್ಜಿ ಹಿಂದಕ್ಕೆ ಪಡೆದಿರುವ ಕಾರಣ, ಅರ್ಜಿ ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿರಿಸಿಕೊಂಡು ದ್ವೇಷ ಭಾಷಣ ಮಾಡುವುದನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಂತನ ಬೆಳವಣಿಗೆಯನ್ನು ‘ಬ್ರಾಹ್ಮಣಫೋಬಿಯಾ’ ಎಂದು ಬಣ್ಣಿಸಿದೆ.</p>.<p>ಮಹಾಲಿಂಗಂ ಬಾಲಾಜಿ ಅವರು ವಾದ ಮಂಡಿಸಿದ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ನೇತೃತ್ವದ ನ್ಯಾಯಪೀಠವು, ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಬಾರದು ಎಂದು ತಿಳಿಸಿದೆ.</p>.<p class="bodytext">‘ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡುವುದನ್ನು ಒಪ್ಪುವುದಿಲ್ಲ. ಇದು ಶಿಕ್ಷಣ, ಬೌದ್ಧಿಕ ಬೆಳವಣಿಗೆ ಹಾಗೂ ಸಹಿಷ್ಣುತೆಯನ್ನು ಒಳಗೊಂಡಿದೆ. ಎಲ್ಲರೂ ಭ್ರಾತೃತ್ವವನ್ನು ಪಾಲಿಸಿದರೆ, ಎಲ್ಲಿಯೂ ದ್ವೇಷ ಭಾಷಣ ಇರುವುದಿಲ್ಲ’ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ.</p>.<p class="bodytext">ದ್ವೇಷ ಭಾಷಣದ ವಿಚಾರದಲ್ಲಿ ಒಂದು ಸಮುದಾಯಕ್ಕೆ ಮಾತ್ರ ಏಕೆ ರಕ್ಷಣೆ ಕೋರಲಾಗಿದೆ ಎಂದು ಈ ವೇಳೆ ಅರ್ಜಿದಾರರನ್ನು ಪ್ರಶ್ನಿಸಿದರು.</p>.<p class="bodytext">ಅರ್ಜಿದಾರರು ಸ್ವತಃ ಅರ್ಜಿ ಹಿಂಪಡೆಯಲು ಮಾಡಿದ ಮನವಿಗೆ ನ್ಯಾಯಾಲಯವು ಸಮ್ಮತಿ ನೀಡಿತು.</p>.<p class="bodytext">‘ಅರ್ಜಿದಾರರು ಅರ್ಜಿಯನ್ನು ಹಿಂದಕ್ಕೆ ಪಡೆಯಲು ಒಪ್ಪಿದ್ದಾರೆ. ಅವರು ಸಲ್ಲಿಕೆಯನ್ನು ದಾಖಲೆಯಲ್ಲಿ ಇರಿಸಲಾಗಿದೆ. ಅರ್ಜಿ ಹಿಂದಕ್ಕೆ ಪಡೆದಿರುವ ಕಾರಣ, ಅರ್ಜಿ ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>