<p><strong>ನವದೆಹಲಿ</strong>: ಶಿಕ್ಷೆ ಪೂರ್ಣಗೊಂಡ ನಂತರವೂ ಜೈಲಿನಲ್ಲಿ ಕೊಳೆಯುತ್ತಿರುವ ಕೈದಿಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು, ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ಅಂತಹ ಕೈದಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.</p><p>2002ರ ನಿತೀಶ್ ಕಟಾರಾ ಕೊಲೆ ಪ್ರಕರಣದಲ್ಲಿ ಸುಖದೇವ್ ಯಾದವ್ ಅಲಿಯಾಸ್ ಪೆಹಲ್ವಾನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ನಿರ್ದೇಶನ ನೀಡಿದೆ. ಈ ವರ್ಷದ ಮಾರ್ಚ್ಗೆ ಯಾದವ್ ಅವರ 20 ವರ್ಷಗಳ ಶಿಕ್ಷೆ ಪೂರ್ಣಗೊಂಡಿದೆ ಎಂದು ಅದು ಗಮನಿಸಿದೆ.</p><p>ಯಾವುದೇ ಆರೋಪಿ ಅಥವಾ ಅಪರಾಧಿ ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿ ಉಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಈ ಆದೇಶದ ಪ್ರತಿಯನ್ನು ರಿಜಿಸ್ಟ್ರಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಬೇಕು ಎಂದು ಪೀಠ ಹೇಳಿದೆ.</p><p>ತಮ್ಮ ಶಿಕ್ಷೆ ಅವಧಿ ಮುಗಿದ ಕೂಡಲೇ ಯಾದವ್ ಬಿಡುಗಡೆ ಆಗಬೇಕಿತ್ತು ಎಂದು ಪೀಠ ಹೇಳಿದೆ.</p><p>ಯಾದವ್ 20 ವರ್ಷಗಳ ಸೆರೆವಾಸ ಅನುಭವಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಈ ಹಿಂದೆ ಅವರಿಗೆ 3 ತಿಂಗಳ ಫರ್ಲೊ ನೀಡಿತ್ತು.</p><p>ಫರ್ಲೊ ಎಂಬುದು ಜೈಲಿನಿಂದ ತಾತ್ಕಾಲಿಕ ಬಿಡುಗಡೆಯಾಗಿದೆ. ಸಂಪೂರ್ಣ ಶಿಕ್ಷೆಯ ಅಮಾನತು ಅಥವಾ ವಿನಾಯಿತಿ ಅಲ್ಲ.ಸಾಮಾನ್ಯವಾಗಿ ದೀರ್ಘಾವಧಿಯ ಜೈಲು ಶಿಕ್ಷೆ ಅನುಭವಿಸಿದವರಿಗೆ ನೀಡಲಾಗುತ್ತದೆ.</p><p> ಮೂರು ವಾರಗಳ ಕಾಲ ಫರ್ಲೋ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದ ತಮ್ಮ ಮನವಿಯನ್ನು ರದ್ದು ಮಾಡಿದ್ದ ದೆಹಲಿ ಹೈಕೋರ್ಟ್ನ 2024 ನವೆಂಬರ್ ತಿಂಗಳ ಆದೇಶವನ್ನು ಪ್ರಶ್ನಿಸಿ ಯಾದವ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶಿಕ್ಷೆ ಪೂರ್ಣಗೊಂಡ ನಂತರವೂ ಜೈಲಿನಲ್ಲಿ ಕೊಳೆಯುತ್ತಿರುವ ಕೈದಿಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿದ್ದು, ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ಅಂತಹ ಕೈದಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.</p><p>2002ರ ನಿತೀಶ್ ಕಟಾರಾ ಕೊಲೆ ಪ್ರಕರಣದಲ್ಲಿ ಸುಖದೇವ್ ಯಾದವ್ ಅಲಿಯಾಸ್ ಪೆಹಲ್ವಾನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ನಿರ್ದೇಶನ ನೀಡಿದೆ. ಈ ವರ್ಷದ ಮಾರ್ಚ್ಗೆ ಯಾದವ್ ಅವರ 20 ವರ್ಷಗಳ ಶಿಕ್ಷೆ ಪೂರ್ಣಗೊಂಡಿದೆ ಎಂದು ಅದು ಗಮನಿಸಿದೆ.</p><p>ಯಾವುದೇ ಆರೋಪಿ ಅಥವಾ ಅಪರಾಧಿ ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿ ಉಳಿದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಈ ಆದೇಶದ ಪ್ರತಿಯನ್ನು ರಿಜಿಸ್ಟ್ರಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಬೇಕು ಎಂದು ಪೀಠ ಹೇಳಿದೆ.</p><p>ತಮ್ಮ ಶಿಕ್ಷೆ ಅವಧಿ ಮುಗಿದ ಕೂಡಲೇ ಯಾದವ್ ಬಿಡುಗಡೆ ಆಗಬೇಕಿತ್ತು ಎಂದು ಪೀಠ ಹೇಳಿದೆ.</p><p>ಯಾದವ್ 20 ವರ್ಷಗಳ ಸೆರೆವಾಸ ಅನುಭವಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಈ ಹಿಂದೆ ಅವರಿಗೆ 3 ತಿಂಗಳ ಫರ್ಲೊ ನೀಡಿತ್ತು.</p><p>ಫರ್ಲೊ ಎಂಬುದು ಜೈಲಿನಿಂದ ತಾತ್ಕಾಲಿಕ ಬಿಡುಗಡೆಯಾಗಿದೆ. ಸಂಪೂರ್ಣ ಶಿಕ್ಷೆಯ ಅಮಾನತು ಅಥವಾ ವಿನಾಯಿತಿ ಅಲ್ಲ.ಸಾಮಾನ್ಯವಾಗಿ ದೀರ್ಘಾವಧಿಯ ಜೈಲು ಶಿಕ್ಷೆ ಅನುಭವಿಸಿದವರಿಗೆ ನೀಡಲಾಗುತ್ತದೆ.</p><p> ಮೂರು ವಾರಗಳ ಕಾಲ ಫರ್ಲೋ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದ ತಮ್ಮ ಮನವಿಯನ್ನು ರದ್ದು ಮಾಡಿದ್ದ ದೆಹಲಿ ಹೈಕೋರ್ಟ್ನ 2024 ನವೆಂಬರ್ ತಿಂಗಳ ಆದೇಶವನ್ನು ಪ್ರಶ್ನಿಸಿ ಯಾದವ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>