<p><strong>ನವದೆಹಲಿ</strong>: ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 31 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಂತ್ಯಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿತು.</p>.<p>ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ಪೆಟ್ಟಾಗಿ ಹರೀಶ್ ರಾಣಾ ಅವರು ಕೋಮಾಗೆ ಹೋಗಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿತ್ತು.</p>. <p>ಇದೇ ಜನವರಿ 13ರಂದು ನ್ಯಾಯಮೂರ್ತಿಗಳು ಖುದ್ದಾಗಿ ಯುವಕನ ಕುಟುಂಬವನ್ನು ಭೇಟಿ ಮಾಡಿತ್ತು. ಈ ವೇಳೆ ‘ಅವನು ಅನುಭವಿಸಿದ್ದು ಸಾಕು. ಇನ್ನಷ್ಟು ಅನುಭವಿಸುವುದು ನಮಗೆ ಇಷ್ಟವಿಲ್ಲ’ ಎಂದು ಕುಟುಂಬವು ತಿಳಿಸಿದ್ದರು. ‘ಕುಟುಂಬದ ಸ್ಥಿರವಾದ ಮತ್ತು ಎಲ್ಲ ರೀತಿಯಿಂದಲೂ ಯೋಚಿಸಿ ತೆಗೆದುಕೊಳ್ಳುವ ನಿರ್ಧಾರವೇ ಬಹಳ ಮುಖ್ಯವಾಗುತ್ತದೆ’ ಎಂದು ಪೀಠವು ವಿಚಾರಣೆ ವೇಳೆ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 31 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಂತ್ಯಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿತು.</p>.<p>ವಸತಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ಪೆಟ್ಟಾಗಿ ಹರೀಶ್ ರಾಣಾ ಅವರು ಕೋಮಾಗೆ ಹೋಗಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿತ್ತು.</p>. <p>ಇದೇ ಜನವರಿ 13ರಂದು ನ್ಯಾಯಮೂರ್ತಿಗಳು ಖುದ್ದಾಗಿ ಯುವಕನ ಕುಟುಂಬವನ್ನು ಭೇಟಿ ಮಾಡಿತ್ತು. ಈ ವೇಳೆ ‘ಅವನು ಅನುಭವಿಸಿದ್ದು ಸಾಕು. ಇನ್ನಷ್ಟು ಅನುಭವಿಸುವುದು ನಮಗೆ ಇಷ್ಟವಿಲ್ಲ’ ಎಂದು ಕುಟುಂಬವು ತಿಳಿಸಿದ್ದರು. ‘ಕುಟುಂಬದ ಸ್ಥಿರವಾದ ಮತ್ತು ಎಲ್ಲ ರೀತಿಯಿಂದಲೂ ಯೋಚಿಸಿ ತೆಗೆದುಕೊಳ್ಳುವ ನಿರ್ಧಾರವೇ ಬಹಳ ಮುಖ್ಯವಾಗುತ್ತದೆ’ ಎಂದು ಪೀಠವು ವಿಚಾರಣೆ ವೇಳೆ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>