<p><strong>ನವದೆಹಲಿ:</strong> ಭಾರತದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಕಾನೂನು ಸ್ಥಿತಿ ಕುರಿತು ಮಂಗಳವಾರ ಪ್ರಶ್ನಿಸಿದ ಸುಪ್ರೀಂ ಕೋರ್ಟ್, ‘ದೇಶದ ಸ್ವಂತ ನಾಗರಿಕರು ಬಡತನದಿಂದ ಬಳಲುತ್ತಿರುವಾಗ ನುಸುಳುಕೋರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ’ ಎಂದು ಕೇಳಿದೆ.</p>.<p>ಅಧಿಕಾರಿಗಳ ವಶದಲ್ಲಿದ್ದ ಕೆಲ ರೋಹಿಂಗ್ಯಾಗಳು ಕಣ್ಮರೆಯಾಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಅವರಿಗೆ ಭಾರತದಲ್ಲಿ ಉಳಿಯಲು ಕಾನೂನಿನ ಮಾನ್ಯತೆಯಿಲ್ಲ. ಉತ್ತರ ಭಾರತದಲ್ಲಿ ಬಹಳ ಸೂಕ್ಷ್ಮವಾದ ಗಡಿಗಳಿವೆ. ಅಲ್ಲಿಂದ ನುಸುಳಿ ಬರುವವರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ’ ಎಂದು ಸಿಜೆಐ ಕೇಳಿದರು. ‘ಅವರನ್ನು ವಾಪಸ್ ಕಳುಹಿಸಲು ಸಮಸ್ಯೆ ಏನು’ ಎಂದು ಕೇಳಿದರು. </p>.<p>‘ಭಾರತ ಬಹಳಷ್ಟು ಬಡವರನ್ನು ಹೊಂದಿರುವ ದೇಶ. ನಾವು ಇಲ್ಲಿ ಅವರ ಏಳಿಗೆಗೆ ಗಮನ ಹರಿಸಬೇಕೇ ಹೊರತು ನುಸುಳುಕೋರರ ಬಗ್ಗೆಯಲ್ಲ’ ಎಂದು ಹೇಳಿದ ಪೀಠ, ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಕಾನೂನು ಸ್ಥಿತಿ ಕುರಿತು ಮಂಗಳವಾರ ಪ್ರಶ್ನಿಸಿದ ಸುಪ್ರೀಂ ಕೋರ್ಟ್, ‘ದೇಶದ ಸ್ವಂತ ನಾಗರಿಕರು ಬಡತನದಿಂದ ಬಳಲುತ್ತಿರುವಾಗ ನುಸುಳುಕೋರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ’ ಎಂದು ಕೇಳಿದೆ.</p>.<p>ಅಧಿಕಾರಿಗಳ ವಶದಲ್ಲಿದ್ದ ಕೆಲ ರೋಹಿಂಗ್ಯಾಗಳು ಕಣ್ಮರೆಯಾಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ಅವರಿಗೆ ಭಾರತದಲ್ಲಿ ಉಳಿಯಲು ಕಾನೂನಿನ ಮಾನ್ಯತೆಯಿಲ್ಲ. ಉತ್ತರ ಭಾರತದಲ್ಲಿ ಬಹಳ ಸೂಕ್ಷ್ಮವಾದ ಗಡಿಗಳಿವೆ. ಅಲ್ಲಿಂದ ನುಸುಳಿ ಬರುವವರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ’ ಎಂದು ಸಿಜೆಐ ಕೇಳಿದರು. ‘ಅವರನ್ನು ವಾಪಸ್ ಕಳುಹಿಸಲು ಸಮಸ್ಯೆ ಏನು’ ಎಂದು ಕೇಳಿದರು. </p>.<p>‘ಭಾರತ ಬಹಳಷ್ಟು ಬಡವರನ್ನು ಹೊಂದಿರುವ ದೇಶ. ನಾವು ಇಲ್ಲಿ ಅವರ ಏಳಿಗೆಗೆ ಗಮನ ಹರಿಸಬೇಕೇ ಹೊರತು ನುಸುಳುಕೋರರ ಬಗ್ಗೆಯಲ್ಲ’ ಎಂದು ಹೇಳಿದ ಪೀಠ, ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>