<p><strong>ನವದೆಹಲಿ</strong>: ‘ಭೂ ಸ್ವಾಧೀನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲೂ ಭೂ ಮಾಲೀಕರಿಗೆ ಆರ್ಥಿಕ ಪರಿಹಾರದ ಜತೆಗೆ ಪುನರ್ವಸತಿಯನ್ನೂ ಕಲ್ಪಿಸಬೇಕೆಂಬ ಅಗತ್ಯವಿಲ್ಲ. ಅಪರೂಪದ ಪ್ರಕರಣಗಳಲ್ಲಿ ಮಾತ್ರ ಸರ್ಕಾರಗಳು ಪುನರ್ವಸತಿ ಯೋಜನೆಗಳನ್ನು ಘೋಷಿಸುವುದು ಸೂಕ್ತ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. </p><p>ಹರಿಯಾಣದ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಭೂ ಮಾಲೀಕರ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪಿ. ಪಾರ್ದೀವಾಲಾ, ನ್ಯಾಯಮೂರ್ತಿ ಆರ್.ಮಹದೇವನ್ ಅವರನ್ನು ಒಳಗೊಂಡ ಪೀಠವು, ‘ವಿರಳಾತಿ ವಿರಳ ಪ್ರಕರಣಗಳಲ್ಲಷ್ಟೇ ರಾಜ್ಯ ಸರ್ಕಾರವು ಪರಿಹಾರದ ಜೊತೆ ಪುನರ್ವಸತಿ ಯೋಜನೆಯನ್ನೂ ಜಾರಿಗೊಳಿಸಬಹುದು. ಅಲ್ಲದೇ, ಈ ಪ್ರಕರಣಗಳು ದೇಶದ ಇತರೆ ರಾಜ್ಯಗಳೂ ಗಮನಹರಿಸುವಂಥದ್ದು’ ಎಂದಿದೆ. </p><p>‘ಯಾವುದೇ ಸಾರ್ವಜನಿಕ ಉದ್ದೇಶಕ್ಕೆ ಭೂ ಸ್ವಾಧೀನ ಕಾಯ್ದೆಯಡಿ ರಾಜ್ಯ ಸರ್ಕಾರಗಳು ಅಥವಾ ಸಂಬಂಧಿಸಿದ ಪ್ರಾಧಿಕಾರಗಳು ಜಮೀನನ್ನು ಸ್ವಾಧೀನ ಪಡಿಸಿಕೊಂಡರೆ, ಭೂ ಮಾಲೀಕರಿಗೆ ಕಾನೂನು ಬದ್ಧವಾಗಿ ಪರಿಹಾರ ನೀಡುವುದು ನ್ಯಾಯಸಮ್ಮತ ’ ಎಂದು ನ್ಯಾಯಪೀಠ ಹೇಳಿದೆ. </p><p>ಅಲ್ಲದೇ, ‘ಭೂ ಮಾಲೀಕರಿಗೆ ಪರಿಹಾರ ನೀಡುವಾಗ ಸಮಾನತೆ ಮತ್ತು ಮಾನವೀಯ ದೃಷ್ಟಿಕೋನಗಳನ್ನಷ್ಟೇ ಹೊಂದಿರಬೇಕು. ವಶಪಡಿಸಿಕೊಂಡ ಜಮೀನನ್ನು ಕಳೆದುಕೊಂಡರೆ ಮಾಲೀಕನ ಜೀವನದ ಮೂಲಭೂತ ಅವಶ್ಯಕತೆಗೆ ತೊಂದರೆಯಾಗುತ್ತದೆ ಎನ್ನುವ ಸ್ಥಿತಿ ಇದ್ದರೆ ಅಂಥ ವಿರಳ ಪ್ರಕರಣಗಳಲ್ಲಿ ಮಾತ್ರ ಪುನರ್ವಸತಿ ಕಲ್ಪಿಸಿಕೊಡಬೇಕಾಗುತ್ತದೆ’ ಎಂದೂ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭೂ ಸ್ವಾಧೀನಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲೂ ಭೂ ಮಾಲೀಕರಿಗೆ ಆರ್ಥಿಕ ಪರಿಹಾರದ ಜತೆಗೆ ಪುನರ್ವಸತಿಯನ್ನೂ ಕಲ್ಪಿಸಬೇಕೆಂಬ ಅಗತ್ಯವಿಲ್ಲ. ಅಪರೂಪದ ಪ್ರಕರಣಗಳಲ್ಲಿ ಮಾತ್ರ ಸರ್ಕಾರಗಳು ಪುನರ್ವಸತಿ ಯೋಜನೆಗಳನ್ನು ಘೋಷಿಸುವುದು ಸೂಕ್ತ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. </p><p>ಹರಿಯಾಣದ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಭೂ ಮಾಲೀಕರ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪಿ. ಪಾರ್ದೀವಾಲಾ, ನ್ಯಾಯಮೂರ್ತಿ ಆರ್.ಮಹದೇವನ್ ಅವರನ್ನು ಒಳಗೊಂಡ ಪೀಠವು, ‘ವಿರಳಾತಿ ವಿರಳ ಪ್ರಕರಣಗಳಲ್ಲಷ್ಟೇ ರಾಜ್ಯ ಸರ್ಕಾರವು ಪರಿಹಾರದ ಜೊತೆ ಪುನರ್ವಸತಿ ಯೋಜನೆಯನ್ನೂ ಜಾರಿಗೊಳಿಸಬಹುದು. ಅಲ್ಲದೇ, ಈ ಪ್ರಕರಣಗಳು ದೇಶದ ಇತರೆ ರಾಜ್ಯಗಳೂ ಗಮನಹರಿಸುವಂಥದ್ದು’ ಎಂದಿದೆ. </p><p>‘ಯಾವುದೇ ಸಾರ್ವಜನಿಕ ಉದ್ದೇಶಕ್ಕೆ ಭೂ ಸ್ವಾಧೀನ ಕಾಯ್ದೆಯಡಿ ರಾಜ್ಯ ಸರ್ಕಾರಗಳು ಅಥವಾ ಸಂಬಂಧಿಸಿದ ಪ್ರಾಧಿಕಾರಗಳು ಜಮೀನನ್ನು ಸ್ವಾಧೀನ ಪಡಿಸಿಕೊಂಡರೆ, ಭೂ ಮಾಲೀಕರಿಗೆ ಕಾನೂನು ಬದ್ಧವಾಗಿ ಪರಿಹಾರ ನೀಡುವುದು ನ್ಯಾಯಸಮ್ಮತ ’ ಎಂದು ನ್ಯಾಯಪೀಠ ಹೇಳಿದೆ. </p><p>ಅಲ್ಲದೇ, ‘ಭೂ ಮಾಲೀಕರಿಗೆ ಪರಿಹಾರ ನೀಡುವಾಗ ಸಮಾನತೆ ಮತ್ತು ಮಾನವೀಯ ದೃಷ್ಟಿಕೋನಗಳನ್ನಷ್ಟೇ ಹೊಂದಿರಬೇಕು. ವಶಪಡಿಸಿಕೊಂಡ ಜಮೀನನ್ನು ಕಳೆದುಕೊಂಡರೆ ಮಾಲೀಕನ ಜೀವನದ ಮೂಲಭೂತ ಅವಶ್ಯಕತೆಗೆ ತೊಂದರೆಯಾಗುತ್ತದೆ ಎನ್ನುವ ಸ್ಥಿತಿ ಇದ್ದರೆ ಅಂಥ ವಿರಳ ಪ್ರಕರಣಗಳಲ್ಲಿ ಮಾತ್ರ ಪುನರ್ವಸತಿ ಕಲ್ಪಿಸಿಕೊಡಬೇಕಾಗುತ್ತದೆ’ ಎಂದೂ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>