<p><strong>ನವದೆಹಲಿ:</strong> ರಾಜ್ಯಗಳ ವಿಧಾನಸಭೆ ಒಪ್ಪಿಗೆ ನೀಡಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಸಮಯ ನಿಗದಿಪಡಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ ನೀಡುವುದನ್ನೂ ಕೋರ್ಟ್ ನಿಷೇಧಿಸಿದೆ.</p>.ಮಸೂದೆಗಳ ಒಪ್ಪಿಗೆಗೆ SC ಗಡುವು: 14 ಸಾಂವಿಧಾನಿಕ ಪ್ರಶ್ನೆ ಕೇಳಿದ ರಾಷ್ಟ್ರಪತಿ. <p>ಈ ಬಗ್ಗೆ ಸರ್ವಾನುಮತದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ, ಸಂವಿಧಾನದ 200ನೇ ವಿಧಿಯಡಿ ನೀಡಿರುವ ಅಧಿಕಾರವನ್ನು ಮೀರಿ ರಾಜ್ಯಪಾಲರು ವರ್ತಿಸುವಂತಿಲ್ಲ ಎಂದೂ ಹೇಳಿದೆ.</p><p>‘ರಾಜ್ಯ ವಿಧಾನಸಭೆಗಳು ಒಪ್ಪಿಗೆ ನೀಡಿರುವ ಮೂಸೂದೆಗಳ ಮೇಲೆ ಕುಳಿತುಕೊಳ್ಳುವ ಮುಕ್ತ ಅಧಿಕಾರ ರಾಜ್ಯಪಾಲರಿಗೆ ಇಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು. </p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಂ ನಾಥ್, ಪಿ.ಎಸ್ ನರಸಿಂಹ ಹಾಗೂ ಎ.ಎಸ್ ಚಂದೂರ್ಕರ್ ಅವರೂ ಪೀಠದಲ್ಲಿದ್ದರು.</p><p>ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜ್ಯಪಾಲರಿಗೆ ಸಮಯಾವಕಾಶ ನಿಗದಿ ಮಾಡುವುದು ಸಂವಿಧಾನದಲ್ಲಿ ನೀಡಲಾಗಿರುವ ಹೊಂದಿಕೊಳ್ಳುವ ಗುಣಕ್ಕೆ ವಿರುದ್ಧ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.</p>.ರಾಜ್ಯಪಾಲರ ವಿಳಂಬ ಧೋರಣೆ| ನ್ಯಾಯಾಂಗ ನಿಂದನೆ ಆಗುವುದೇ: ಸುಪ್ರೀಂ ಕೋರ್ಟ್ ಪ್ರಶ್ನೆ.<p>ತೀರ್ಪಿನ ಒಂದು ಭಾಗವನ್ನು ಓದಿದ ಸಿಜೆಐ, 200ನೇ ವಿಧಿಯಡಿ ರಾಜ್ಯಪಾಲರಿಗೆ ಮೂರು ಅವಕಾಶಗಳಿವೆ– ಮಸೂದೆಗೆ ಸಹಿ ಹಾಕುವುದು, ಅದನ್ನು ರಾಷ್ಟ್ರಪತಿಗೆ ಶಿಫಾರಸು ಮಾಡುವುದು ಅಥವಾ ಒಪ್ಪಿಗೆಯನ್ನು ತಡೆಹಿಡಿದು ಉಲ್ಲೇಖಗಳೊಂದಿಗೆ ವಿಧಾನಸಭೆಗೆ ಮರಳಿಸುವುದು.</p><p>ಈ ಮೂರು ಸಾಂವಿಧಾನಿಕ ಅವಕಾಶಗಳನ್ನು ಬಳಸಿಕೊಳ್ಳುವ ವಿವೇಚನೆ ರಾಜ್ಯಪಾಲರಿಗೆ ಬಿಟ್ಟಿದ್ದು. 200ನೇ ವಿಧಿಯಡಿ ಯಾವುದೇ ಅಧಿಕಾರ ಚಲಾಯಿಸುವಾಗ ಮಂತ್ರಿ ಪರಿಷತ್ತಿನ ಅಭಿಪ್ರಾಯವೂ ತೆಗೆದುಕೊಳ್ಳಬೇಕಾಗಿಲ್ಲ ಎಂದೂ ಕೋರ್ಟ್ ಹೇಳಿದೆ.</p><p>200ನೇ ವಿಧಿಯಡಿ ರಾಜ್ಯಪಾಲರ ಕರ್ತವ್ಯ ನಿರ್ವಹಣೆಯು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡುವುದಿಲ್ಲ. ಅವರ ನಿರ್ಧಾರಕ್ಕೆ ನ್ಯಾಯಾಲಯ ಮಧ್ಯಪ್ರವೇಶಿಸಲೂ ಅಸಾಧ್ಯ ಎಂದು ಹೇಳಿದೆ.</p><p>‘ಯಾವುದೇ ಸಮಯ ನಿಗದಿ ಮಾಡುವ ಹಾಗೂ ರಾಜ್ಯಪಾಲರು ಅಧಿಕಾರಗಳನ್ನು ಚಲಾಯಿಸುವ ರೀತಿಯ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖ ಇಲ್ಲದಿರುವಾಗ, 200ನೇ ವಿಧಿಯಡಿ ಅಧಿಕಾರವನ್ನು ಚಲಾಯಿಸಲು ನ್ಯಾಯಾಂಗದ ಮೂಲಕ ಸಮಯ ನಿಗದಿ ಮಾಡುವುದು ಈ ಕೋರ್ಟ್ಗೆ ಸೂಕ್ತವಲ್ಲ’ ಎಂದು ಪೀಠ ಹೇಳಿದೆ.</p>.ಮಸೂದೆಗಳ ಅಂಕಿತಕ್ಕೆ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ನೋಟಿಸ್.<p>ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಅವರ ನೇತೃತ್ವದ ಪೀಠ, ರಾಜ್ಯಗಳ ವಿಧಾನಸಭೆ ಒಪ್ಪಿಗೆ ನೀಡಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರ ಹಾಗೂ ರಾಷ್ಟ್ರಪತಿಗೆ ಮೂರು ತಿಂಗಳ ಗಡುವು ವಿಧಿಸಿತ್ತು.</p><p>2025 ಏಪ್ರಿಲ್ 8ರ ಈ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ಗೆ ರಾಷ್ಟ್ರಪತಿ 14 ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳ ಬಗ್ಗೆ ಚರ್ಚಿಸಲು ಐವರು ಸದಸ್ಯರ ಪೀಠ ಒಪ್ಪಿಕೊಂಡಿತ್ತು.</p><p>ಸಂವಿಧಾನದ 143 (1)ನೇ ವಿಧಿಯಡಿ ಇರುವ ಅಧಿಕಾರ ಉಪಯೋಗಿಸಿಕೊಂಡು ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶ್ನೆಗಳನ್ನು ಎತ್ತಿದ್ದರು.</p><p>‘ಸಂವಿಧಾನದಲ್ಲಿ, ಅದರಲ್ಲಿಯೂ ವಿಶೇಷವಾಗಿ 142ನೇ ವಿಧಿಯಡಿ ‘ಪರಿಗಣಿತ ಸಮ್ಮತಿ’ಗೆ ಅವಕಾಶ ಇಲ್ಲ ಎನ್ನುವುದನ್ನು ನಾವು ಈ ಮೂಲಕ ಸ್ಪಷ್ಟೀಕರಿಸುತ್ತೇವೆ’ ಎಂದೂ ಕೋರ್ಟ್ ಹೇಳಿದೆ.</p>.ಆಳ–ಅಗಲ | ರಾಜ್ಯ–ರಾಜ್ಯಪಾಲರ ಸಂಘರ್ಷ: ‘ಸುಪ್ರೀಂ’ ದಿಕ್ಸೂಚಿ.<p>ಸಂವಿಧಾನದ 142ನೇ ವಿಧಿಯು, ಯಾವುದೇ ವಿಷಯದಲ್ಲಿ ಸಂಪೂರ್ಣ ನ್ಯಾಯ ನೀಡಲು ಯಾವುದೇ ತೀರ್ಪು ನೀಡುವ ಅವಕಾಶ ಸುಪ್ರೀಂ ಕೋರ್ಟ್ಗೆ ನೀಡುತ್ತದೆ.</p><p>ಅಲ್ಲದೆ, ಯಾವುದೇ ಕಾರಣ ನೀಡದೆ ಮಸೂದೆಗಳಿಗೆ ಒಪ್ಪಿಗೆ ನೀಡದೆ ಅನಿರ್ದಿಷ್ಟ ಅವಧಿಗೆ ಇಟ್ಟುಕೊಂಡಲ್ಲಿ, ನಿಗದಿತ ಸಮಯದೊಳಗೆ ಸಂವಿಧಾನದ ಅಡಿಯಲ್ಲಿ ಕರ್ತವ್ಯವನ್ನು ನಿರ್ವಹಿಸಲು ರಾಜ್ಯಪಾಲರಿಗೆ ನ್ಯಾಯಾಲಯವು ಸೀಮಿತ ಆದೇಶವನ್ನು ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p><p>ರಾಜ್ಯಪಾಲರನ್ನು ವೈಯಕ್ತಿಕವಾಗಿ ನ್ಯಾಯಾಂಗ ಪ್ರಕ್ರಿಯೆಗಳಿಗೆ ಒಳಪಡಿಸಲು ಸಂಪೂರ್ಣ ನಿರ್ಬಂಧವಿದೆ ಎಂದು ಎಂದು 361ನೇ ವಿಧಿಯನ್ನು ಉಲ್ಲೇಖಿಸಿ ಕೋರ್ಟ್ ಹೇಳಿದೆ. ರಾಜ್ಯಪಾಲರು ಕಾನೂನು ಪ್ರಕ್ರಿಯೆಗಳಿಂದ ವೈಯಕ್ತಿಕವಾಗಿ ವಿನಾಯಿತಿ ಪಡೆದರೂ, ಅವರ ಕಚೇರಿಯು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ಕೋರ್ಟ್ ಹೇಳಿದೆ.</p>.ಮಸೂದೆಗಳಿಗೆ ಅಂಕಿತ ಹಾಕಲು ಗಡುವು: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಗಳ ವಿಧಾನಸಭೆ ಒಪ್ಪಿಗೆ ನೀಡಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಸಮಯ ನಿಗದಿಪಡಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಮಸೂದೆಗಳಿಗೆ ‘ಪರಿಗಣಿತ ಒಪ್ಪಿಗೆ’ ನೀಡುವುದನ್ನೂ ಕೋರ್ಟ್ ನಿಷೇಧಿಸಿದೆ.</p>.ಮಸೂದೆಗಳ ಒಪ್ಪಿಗೆಗೆ SC ಗಡುವು: 14 ಸಾಂವಿಧಾನಿಕ ಪ್ರಶ್ನೆ ಕೇಳಿದ ರಾಷ್ಟ್ರಪತಿ. <p>ಈ ಬಗ್ಗೆ ಸರ್ವಾನುಮತದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ, ಸಂವಿಧಾನದ 200ನೇ ವಿಧಿಯಡಿ ನೀಡಿರುವ ಅಧಿಕಾರವನ್ನು ಮೀರಿ ರಾಜ್ಯಪಾಲರು ವರ್ತಿಸುವಂತಿಲ್ಲ ಎಂದೂ ಹೇಳಿದೆ.</p><p>‘ರಾಜ್ಯ ವಿಧಾನಸಭೆಗಳು ಒಪ್ಪಿಗೆ ನೀಡಿರುವ ಮೂಸೂದೆಗಳ ಮೇಲೆ ಕುಳಿತುಕೊಳ್ಳುವ ಮುಕ್ತ ಅಧಿಕಾರ ರಾಜ್ಯಪಾಲರಿಗೆ ಇಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು. </p><p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಂ ನಾಥ್, ಪಿ.ಎಸ್ ನರಸಿಂಹ ಹಾಗೂ ಎ.ಎಸ್ ಚಂದೂರ್ಕರ್ ಅವರೂ ಪೀಠದಲ್ಲಿದ್ದರು.</p><p>ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜ್ಯಪಾಲರಿಗೆ ಸಮಯಾವಕಾಶ ನಿಗದಿ ಮಾಡುವುದು ಸಂವಿಧಾನದಲ್ಲಿ ನೀಡಲಾಗಿರುವ ಹೊಂದಿಕೊಳ್ಳುವ ಗುಣಕ್ಕೆ ವಿರುದ್ಧ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.</p>.ರಾಜ್ಯಪಾಲರ ವಿಳಂಬ ಧೋರಣೆ| ನ್ಯಾಯಾಂಗ ನಿಂದನೆ ಆಗುವುದೇ: ಸುಪ್ರೀಂ ಕೋರ್ಟ್ ಪ್ರಶ್ನೆ.<p>ತೀರ್ಪಿನ ಒಂದು ಭಾಗವನ್ನು ಓದಿದ ಸಿಜೆಐ, 200ನೇ ವಿಧಿಯಡಿ ರಾಜ್ಯಪಾಲರಿಗೆ ಮೂರು ಅವಕಾಶಗಳಿವೆ– ಮಸೂದೆಗೆ ಸಹಿ ಹಾಕುವುದು, ಅದನ್ನು ರಾಷ್ಟ್ರಪತಿಗೆ ಶಿಫಾರಸು ಮಾಡುವುದು ಅಥವಾ ಒಪ್ಪಿಗೆಯನ್ನು ತಡೆಹಿಡಿದು ಉಲ್ಲೇಖಗಳೊಂದಿಗೆ ವಿಧಾನಸಭೆಗೆ ಮರಳಿಸುವುದು.</p><p>ಈ ಮೂರು ಸಾಂವಿಧಾನಿಕ ಅವಕಾಶಗಳನ್ನು ಬಳಸಿಕೊಳ್ಳುವ ವಿವೇಚನೆ ರಾಜ್ಯಪಾಲರಿಗೆ ಬಿಟ್ಟಿದ್ದು. 200ನೇ ವಿಧಿಯಡಿ ಯಾವುದೇ ಅಧಿಕಾರ ಚಲಾಯಿಸುವಾಗ ಮಂತ್ರಿ ಪರಿಷತ್ತಿನ ಅಭಿಪ್ರಾಯವೂ ತೆಗೆದುಕೊಳ್ಳಬೇಕಾಗಿಲ್ಲ ಎಂದೂ ಕೋರ್ಟ್ ಹೇಳಿದೆ.</p><p>200ನೇ ವಿಧಿಯಡಿ ರಾಜ್ಯಪಾಲರ ಕರ್ತವ್ಯ ನಿರ್ವಹಣೆಯು ನ್ಯಾಯಾಂಗ ಪ್ರಕ್ರಿಯೆಗೆ ಒಳಪಡುವುದಿಲ್ಲ. ಅವರ ನಿರ್ಧಾರಕ್ಕೆ ನ್ಯಾಯಾಲಯ ಮಧ್ಯಪ್ರವೇಶಿಸಲೂ ಅಸಾಧ್ಯ ಎಂದು ಹೇಳಿದೆ.</p><p>‘ಯಾವುದೇ ಸಮಯ ನಿಗದಿ ಮಾಡುವ ಹಾಗೂ ರಾಜ್ಯಪಾಲರು ಅಧಿಕಾರಗಳನ್ನು ಚಲಾಯಿಸುವ ರೀತಿಯ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖ ಇಲ್ಲದಿರುವಾಗ, 200ನೇ ವಿಧಿಯಡಿ ಅಧಿಕಾರವನ್ನು ಚಲಾಯಿಸಲು ನ್ಯಾಯಾಂಗದ ಮೂಲಕ ಸಮಯ ನಿಗದಿ ಮಾಡುವುದು ಈ ಕೋರ್ಟ್ಗೆ ಸೂಕ್ತವಲ್ಲ’ ಎಂದು ಪೀಠ ಹೇಳಿದೆ.</p>.ಮಸೂದೆಗಳ ಅಂಕಿತಕ್ಕೆ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ನೋಟಿಸ್.<p>ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದ, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಅವರ ನೇತೃತ್ವದ ಪೀಠ, ರಾಜ್ಯಗಳ ವಿಧಾನಸಭೆ ಒಪ್ಪಿಗೆ ನೀಡಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲರ ಹಾಗೂ ರಾಷ್ಟ್ರಪತಿಗೆ ಮೂರು ತಿಂಗಳ ಗಡುವು ವಿಧಿಸಿತ್ತು.</p><p>2025 ಏಪ್ರಿಲ್ 8ರ ಈ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ಗೆ ರಾಷ್ಟ್ರಪತಿ 14 ಪ್ರಶ್ನೆಗಳನ್ನು ಕೇಳಿದ್ದರು. ಈ ಪ್ರಶ್ನೆಗಳ ಬಗ್ಗೆ ಚರ್ಚಿಸಲು ಐವರು ಸದಸ್ಯರ ಪೀಠ ಒಪ್ಪಿಕೊಂಡಿತ್ತು.</p><p>ಸಂವಿಧಾನದ 143 (1)ನೇ ವಿಧಿಯಡಿ ಇರುವ ಅಧಿಕಾರ ಉಪಯೋಗಿಸಿಕೊಂಡು ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶ್ನೆಗಳನ್ನು ಎತ್ತಿದ್ದರು.</p><p>‘ಸಂವಿಧಾನದಲ್ಲಿ, ಅದರಲ್ಲಿಯೂ ವಿಶೇಷವಾಗಿ 142ನೇ ವಿಧಿಯಡಿ ‘ಪರಿಗಣಿತ ಸಮ್ಮತಿ’ಗೆ ಅವಕಾಶ ಇಲ್ಲ ಎನ್ನುವುದನ್ನು ನಾವು ಈ ಮೂಲಕ ಸ್ಪಷ್ಟೀಕರಿಸುತ್ತೇವೆ’ ಎಂದೂ ಕೋರ್ಟ್ ಹೇಳಿದೆ.</p>.ಆಳ–ಅಗಲ | ರಾಜ್ಯ–ರಾಜ್ಯಪಾಲರ ಸಂಘರ್ಷ: ‘ಸುಪ್ರೀಂ’ ದಿಕ್ಸೂಚಿ.<p>ಸಂವಿಧಾನದ 142ನೇ ವಿಧಿಯು, ಯಾವುದೇ ವಿಷಯದಲ್ಲಿ ಸಂಪೂರ್ಣ ನ್ಯಾಯ ನೀಡಲು ಯಾವುದೇ ತೀರ್ಪು ನೀಡುವ ಅವಕಾಶ ಸುಪ್ರೀಂ ಕೋರ್ಟ್ಗೆ ನೀಡುತ್ತದೆ.</p><p>ಅಲ್ಲದೆ, ಯಾವುದೇ ಕಾರಣ ನೀಡದೆ ಮಸೂದೆಗಳಿಗೆ ಒಪ್ಪಿಗೆ ನೀಡದೆ ಅನಿರ್ದಿಷ್ಟ ಅವಧಿಗೆ ಇಟ್ಟುಕೊಂಡಲ್ಲಿ, ನಿಗದಿತ ಸಮಯದೊಳಗೆ ಸಂವಿಧಾನದ ಅಡಿಯಲ್ಲಿ ಕರ್ತವ್ಯವನ್ನು ನಿರ್ವಹಿಸಲು ರಾಜ್ಯಪಾಲರಿಗೆ ನ್ಯಾಯಾಲಯವು ಸೀಮಿತ ಆದೇಶವನ್ನು ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p><p>ರಾಜ್ಯಪಾಲರನ್ನು ವೈಯಕ್ತಿಕವಾಗಿ ನ್ಯಾಯಾಂಗ ಪ್ರಕ್ರಿಯೆಗಳಿಗೆ ಒಳಪಡಿಸಲು ಸಂಪೂರ್ಣ ನಿರ್ಬಂಧವಿದೆ ಎಂದು ಎಂದು 361ನೇ ವಿಧಿಯನ್ನು ಉಲ್ಲೇಖಿಸಿ ಕೋರ್ಟ್ ಹೇಳಿದೆ. ರಾಜ್ಯಪಾಲರು ಕಾನೂನು ಪ್ರಕ್ರಿಯೆಗಳಿಂದ ವೈಯಕ್ತಿಕವಾಗಿ ವಿನಾಯಿತಿ ಪಡೆದರೂ, ಅವರ ಕಚೇರಿಯು ನ್ಯಾಯಾಂಗ ಪರಿಶೀಲನೆಗೆ ಒಳಪಡುತ್ತದೆ ಎಂದು ಕೋರ್ಟ್ ಹೇಳಿದೆ.</p>.ಮಸೂದೆಗಳಿಗೆ ಅಂಕಿತ ಹಾಕಲು ಗಡುವು: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>