<p><strong>ನವದೆಹಲಿ</strong>: ಅಪರಾಧದ ಸ್ವರೂಪ ಮತ್ತು ಕಾನೂನಿನ ಸ್ವರೂಪವನ್ನು ಲೆಕ್ಕಿಸದೆ, ಬಂಧನಕ್ಕೊಳಗಾದ ಪ್ರತಿಯೊಬ್ಬ ವ್ಯಕ್ತಿಗೂ ಬಂಧನದ ಕಾರಣಗಳನ್ನು ಲಿಖಿತವಾಗಿ ಮತ್ತು ಅವರು ಅರ್ಥ ಮಾಡಿಕೊಳ್ಳುವ ಭಾಷೆಯಲ್ಲಿ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನೀಡಿದ ತನ್ನ ಮಹತ್ವದ ತೀರ್ಪಿನಲ್ಲಿ ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸೀಹ್ ಅವರ ಪೀಠವು ಈ ಆದೇಶವನ್ನು ನೀಡಿದೆ.</p>.<p>ಅದಾಗ್ಯೂ, ಬಂಧನಕ್ಕೆ ಮೊದಲು ಅಥವಾ ನಂತರ ತಕ್ಷಣವೆ ಬಂಧನಕ್ಕೆ ಕಾರಣಗಳನ್ನು ಲಿಖಿತವಾಗಿ ಒದಗಿಸದಿದ್ದರೆ, ಸರಿಯಾದ ಸಮಯದೊಳಗೆ ಮತ್ತು ಬಂಧನಕ್ಕೊಳಗಾದ ವ್ಯಕ್ತಿಯನ್ನು ಯಾವುದೇ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಎರಡು ಗಂಟೆಗಳ ಮೊದಲು ಲಿಖಿತವಾಗಿ ಒದಗಿಸಿದರೆ ಆದೇಶದ ಉಲ್ಲಂಘನೆ ಮಾಡಿದಂತೆ ಆಗುವುದಿಲ್ಲ ಎಂದು ಹೇಳಿದೆ. </p>.<p>2024ರ ಜುಲೈನಲ್ಲಿ ಮುಂಬೈನಲ್ಲಿ ನಡೆದ ಬಿಎಂಡಬ್ಲ್ಯೂ ‘ಹಿಟ್ ಆ್ಯಂಡ್ ರನ್’ ಘಟನೆಗೆ ಸಂಬಂಧಿಸಿದ ಮಿಹಿರ್ ರಾಜೇಶ್ ಶಾ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಪರಾಧದ ಸ್ವರೂಪ ಮತ್ತು ಕಾನೂನಿನ ಸ್ವರೂಪವನ್ನು ಲೆಕ್ಕಿಸದೆ, ಬಂಧನಕ್ಕೊಳಗಾದ ಪ್ರತಿಯೊಬ್ಬ ವ್ಯಕ್ತಿಗೂ ಬಂಧನದ ಕಾರಣಗಳನ್ನು ಲಿಖಿತವಾಗಿ ಮತ್ತು ಅವರು ಅರ್ಥ ಮಾಡಿಕೊಳ್ಳುವ ಭಾಷೆಯಲ್ಲಿ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನೀಡಿದ ತನ್ನ ಮಹತ್ವದ ತೀರ್ಪಿನಲ್ಲಿ ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸೀಹ್ ಅವರ ಪೀಠವು ಈ ಆದೇಶವನ್ನು ನೀಡಿದೆ.</p>.<p>ಅದಾಗ್ಯೂ, ಬಂಧನಕ್ಕೆ ಮೊದಲು ಅಥವಾ ನಂತರ ತಕ್ಷಣವೆ ಬಂಧನಕ್ಕೆ ಕಾರಣಗಳನ್ನು ಲಿಖಿತವಾಗಿ ಒದಗಿಸದಿದ್ದರೆ, ಸರಿಯಾದ ಸಮಯದೊಳಗೆ ಮತ್ತು ಬಂಧನಕ್ಕೊಳಗಾದ ವ್ಯಕ್ತಿಯನ್ನು ಯಾವುದೇ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಎರಡು ಗಂಟೆಗಳ ಮೊದಲು ಲಿಖಿತವಾಗಿ ಒದಗಿಸಿದರೆ ಆದೇಶದ ಉಲ್ಲಂಘನೆ ಮಾಡಿದಂತೆ ಆಗುವುದಿಲ್ಲ ಎಂದು ಹೇಳಿದೆ. </p>.<p>2024ರ ಜುಲೈನಲ್ಲಿ ಮುಂಬೈನಲ್ಲಿ ನಡೆದ ಬಿಎಂಡಬ್ಲ್ಯೂ ‘ಹಿಟ್ ಆ್ಯಂಡ್ ರನ್’ ಘಟನೆಗೆ ಸಂಬಂಧಿಸಿದ ಮಿಹಿರ್ ರಾಜೇಶ್ ಶಾ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>