<p><strong>ನವದೆಹಲಿ</strong>: ‘ರಾಜಕೀಯ ನಾಯಕರು ದೇಶದ ಭ್ರಾತೃತ್ವ ಬೆಳೆಸಬೇಕು’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ರಾಜಕೀಯ ಭಾಷಣಗಳ ಕುರಿತು ಹೊಸ ಮಾರ್ಗಸೂಚಿ ಕುರಿತು ಶಿಕ್ಷಣ ತಜ್ಞೆ ರೂಪ್ ರೇಖಾ ವರ್ಮಾ ಸೇರಿದಂತೆ 12 ಮಂದಿಗೆ ಹೊಸತಾಗಿ ಅರ್ಜಿ ದಾಖಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p class="title">ಭ್ರಾತೃತ್ವ ಹಾಗೂ ಸಾಂವಿಧಾನಿಕ ಮೌಲ್ಯಗಳ ಪರಿಣಾಮ ಬೀರುವ ರಾಜಕಾರಣಿಗಳ ಭಾಷಣದ ಕುರಿತಂತೆ ಹೊಸ ಮಾರ್ಗಸೂಚಿ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜಾಯ್ಮಾಲ್ಯ ಬಾಗ್ಚಿ, ನ್ಯಾ. ಬಿ.ವಿ.ನಾಗರತ್ನ ಅವರಿದ್ದ ಪೀಠವು ನಿರಾಕರಿಸಿತು.</p>.<p class="title">ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಇತ್ತೀಚಿಗಿನ ದ್ವೇಷ ಭಾಷಣ ಉಲ್ಲೇಖಿಸಿ ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿದಾರರ ಪರ ವಾದ ಮಂಡಿಸಿದರು.</p>.<p class="title">‘ವಾತಾವರಣವು ತುಂಬಾ ಕಲುಷಿತವಾಗಿದೆ. ಹೀಗಾಗಿ, ದೇಶದ ಭ್ರಾತೃತ್ವ ಕೆಡಿಸುವ ಭಾಷಣಗಳ ಕುರಿತಂತೆ ಮಾರ್ಗಸೂಚಿ ಸಿದ್ದಪಡಿಸುವ ಅಗತ್ಯವಿದೆ, ಯಾವುದೇ ನಿರ್ದಿಷ್ಟ ನಾಯಕರನ್ನು ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡುತ್ತಿಲ್ಲ’ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.</p>.<p class="title">ಈ ಬೇಡಿಕೆಗೆ ನ್ಯಾಯಪೀಠ ಸಮ್ಮತಿಸಲಿಲ್ಲ.</p>.<p class="title">‘ಅರ್ಜಿಯು ನಿರ್ದಿಷ್ಟ ರಾಜಕೀಯ ಪಕ್ಷವನ್ನು ಗುರಿಯಾಗಿರಿಸಿಕೊಂಡಂತಿದೆ. ಇಂತಹ ಅರ್ಜಿಯನ್ನು ಮಾನ್ಯ ಮಾಡುವುದಿಲ್ಲ. ವಸ್ತುನಿಷ್ಠತೆ ಹೊಂದಿರುವ ಯಾವುದಾದರೂ ಒಂದು ನಿರ್ದಿಷ್ಟ ಅರ್ಜಿಯನ್ನು ಸಲ್ಲಿಸಲು ಎದುರು ನೋಡುತ್ತಿದ್ದೇನೆ’ ಎಂದು ಸಿಜೆಐ ತಿಳಿಸಿದರು.</p>.<p class="title">ಈ ಕುರಿತಾಗಿ ಹೊಸತಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ರಾಜಕೀಯ ನಾಯಕರು ದೇಶದ ಭ್ರಾತೃತ್ವ ಬೆಳೆಸಬೇಕು’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ರಾಜಕೀಯ ಭಾಷಣಗಳ ಕುರಿತು ಹೊಸ ಮಾರ್ಗಸೂಚಿ ಕುರಿತು ಶಿಕ್ಷಣ ತಜ್ಞೆ ರೂಪ್ ರೇಖಾ ವರ್ಮಾ ಸೇರಿದಂತೆ 12 ಮಂದಿಗೆ ಹೊಸತಾಗಿ ಅರ್ಜಿ ದಾಖಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.</p>.<p class="title">ಭ್ರಾತೃತ್ವ ಹಾಗೂ ಸಾಂವಿಧಾನಿಕ ಮೌಲ್ಯಗಳ ಪರಿಣಾಮ ಬೀರುವ ರಾಜಕಾರಣಿಗಳ ಭಾಷಣದ ಕುರಿತಂತೆ ಹೊಸ ಮಾರ್ಗಸೂಚಿ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜಾಯ್ಮಾಲ್ಯ ಬಾಗ್ಚಿ, ನ್ಯಾ. ಬಿ.ವಿ.ನಾಗರತ್ನ ಅವರಿದ್ದ ಪೀಠವು ನಿರಾಕರಿಸಿತು.</p>.<p class="title">ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಇತ್ತೀಚಿಗಿನ ದ್ವೇಷ ಭಾಷಣ ಉಲ್ಲೇಖಿಸಿ ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅರ್ಜಿದಾರರ ಪರ ವಾದ ಮಂಡಿಸಿದರು.</p>.<p class="title">‘ವಾತಾವರಣವು ತುಂಬಾ ಕಲುಷಿತವಾಗಿದೆ. ಹೀಗಾಗಿ, ದೇಶದ ಭ್ರಾತೃತ್ವ ಕೆಡಿಸುವ ಭಾಷಣಗಳ ಕುರಿತಂತೆ ಮಾರ್ಗಸೂಚಿ ಸಿದ್ದಪಡಿಸುವ ಅಗತ್ಯವಿದೆ, ಯಾವುದೇ ನಿರ್ದಿಷ್ಟ ನಾಯಕರನ್ನು ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡುತ್ತಿಲ್ಲ’ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.</p>.<p class="title">ಈ ಬೇಡಿಕೆಗೆ ನ್ಯಾಯಪೀಠ ಸಮ್ಮತಿಸಲಿಲ್ಲ.</p>.<p class="title">‘ಅರ್ಜಿಯು ನಿರ್ದಿಷ್ಟ ರಾಜಕೀಯ ಪಕ್ಷವನ್ನು ಗುರಿಯಾಗಿರಿಸಿಕೊಂಡಂತಿದೆ. ಇಂತಹ ಅರ್ಜಿಯನ್ನು ಮಾನ್ಯ ಮಾಡುವುದಿಲ್ಲ. ವಸ್ತುನಿಷ್ಠತೆ ಹೊಂದಿರುವ ಯಾವುದಾದರೂ ಒಂದು ನಿರ್ದಿಷ್ಟ ಅರ್ಜಿಯನ್ನು ಸಲ್ಲಿಸಲು ಎದುರು ನೋಡುತ್ತಿದ್ದೇನೆ’ ಎಂದು ಸಿಜೆಐ ತಿಳಿಸಿದರು.</p>.<p class="title">ಈ ಕುರಿತಾಗಿ ಹೊಸತಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>