<p><strong>ನವದೆಹಲಿ</strong>: ‘ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳದೇ ಇದ್ದರೆ ಅಥವಾ ಗೌರವಯುತ ವೇತನ ನೀಡದೇ ಇದ್ದರೆ ಅದು ದೇಶವು ಜ್ಞಾನಕ್ಕೆ ನೀಡುವ ಮೌಲ್ಯವನ್ನು ಕಡಿಮೆಗೊಳಿಸಿದಂತೆ ಆಗುತ್ತದೆ. ಅಲ್ಲದೆ ಅದು ಬೌದ್ಧಿಕ ಬಂಡವಾಳ ನಿರ್ಮಿಸುವ ಜವಾಬ್ದಾರಿ ಹೊಂದಿರುವವರ ಪ್ರೇರಣೆಯನ್ನೂ ಹಾಳುಗೆಡವುತ್ತದೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುಬ್ರಹ್ಮ ಗುರುವಿಷ್ಣು, ಗುರುದೇವೋ ಮಹೇಶ್ವರಃ ಎಂದು ಪಠಿಸುವುದು ಸಾಕಾಗುವುದಿಲ್ಲ. ಈ ಘೋಷಣೆಗೆ ತಕ್ಕಂತೆ ದೇಶವು ಶಿಕ್ಷಕರನ್ನು ನಡೆಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೊಯಮಲ್ಯ ಬಾಗ್ಚಿ ಅವರ ಪೀಠ ಕಿವಿಮಾತು ಹೇಳಿತು.</p>.<p>ಗುಜರಾತಿನ ವಿವಿಧ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರಿಗೆ ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ಸಹಾಯಕ ಪ್ರಾಧ್ಯಾಪಕರು ತಿಂಗಳಿಗೆ ₹30,000 ವೇತನ ಪಡೆಯುತ್ತಿದ್ದಾರೆ ಎಂಬುದು ಬೇಸರದ ವಿಷಯ. ಅವರು ನಿರ್ವಹಿಸುವ ಕಾರ್ಯಗಳ ಆಧಾರದ ಮೇಲೆ ವೇತನ ರಚನೆಯನ್ನು ತರ್ಕಬದ್ಧಗೊಳಿಸಲು ಇದು ಸಕಾಲ ಎಂದು ಪೀಠ ಇದೇ ವೇಳೆ ತಿಳಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಶಿಕ್ಷಕರನ್ನು ಗೌರವದಿಂದ ನಡೆಸಿಕೊಳ್ಳದೇ ಇದ್ದರೆ ಅಥವಾ ಗೌರವಯುತ ವೇತನ ನೀಡದೇ ಇದ್ದರೆ ಅದು ದೇಶವು ಜ್ಞಾನಕ್ಕೆ ನೀಡುವ ಮೌಲ್ಯವನ್ನು ಕಡಿಮೆಗೊಳಿಸಿದಂತೆ ಆಗುತ್ತದೆ. ಅಲ್ಲದೆ ಅದು ಬೌದ್ಧಿಕ ಬಂಡವಾಳ ನಿರ್ಮಿಸುವ ಜವಾಬ್ದಾರಿ ಹೊಂದಿರುವವರ ಪ್ರೇರಣೆಯನ್ನೂ ಹಾಳುಗೆಡವುತ್ತದೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುಬ್ರಹ್ಮ ಗುರುವಿಷ್ಣು, ಗುರುದೇವೋ ಮಹೇಶ್ವರಃ ಎಂದು ಪಠಿಸುವುದು ಸಾಕಾಗುವುದಿಲ್ಲ. ಈ ಘೋಷಣೆಗೆ ತಕ್ಕಂತೆ ದೇಶವು ಶಿಕ್ಷಕರನ್ನು ನಡೆಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೊಯಮಲ್ಯ ಬಾಗ್ಚಿ ಅವರ ಪೀಠ ಕಿವಿಮಾತು ಹೇಳಿತು.</p>.<p>ಗುಜರಾತಿನ ವಿವಿಧ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರಿಗೆ ಕಡಿಮೆ ವೇತನ ನೀಡುತ್ತಿರುವ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ಸಹಾಯಕ ಪ್ರಾಧ್ಯಾಪಕರು ತಿಂಗಳಿಗೆ ₹30,000 ವೇತನ ಪಡೆಯುತ್ತಿದ್ದಾರೆ ಎಂಬುದು ಬೇಸರದ ವಿಷಯ. ಅವರು ನಿರ್ವಹಿಸುವ ಕಾರ್ಯಗಳ ಆಧಾರದ ಮೇಲೆ ವೇತನ ರಚನೆಯನ್ನು ತರ್ಕಬದ್ಧಗೊಳಿಸಲು ಇದು ಸಕಾಲ ಎಂದು ಪೀಠ ಇದೇ ವೇಳೆ ತಿಳಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>