<p>ನವದೆಹಲಿ: ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 124ಎ ಕುರಿತು ಆರೋಪಿಗೆ ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ನ್ಯಾಯಾಲಯಗಳು ವಿಚಾರಣೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 17 ವರ್ಷಗಳಿಂದ ಜೈಲಿನಲ್ಲಿರುವ ಆರೋಪಿಯೊಬ್ಬರ ಅರ್ಜಿ ಆಲಿಸುವಾಗ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಈ ಕುರಿತು ಸ್ಪಷ್ಟೀಕರಣ ನೀಡಿತು.</p>.<p>ಅರ್ಜಿದಾರರು ಸೆಕ್ಷನ್ 124ಎ ಅಡಿಯಲ್ಲಿನ ಆರೋಪಗಳು ಸೇರಿದಂತೆ ತನ್ನ ಮೇಲಿನ ಕ್ರಿಮಿನಲ್ ಮೇಲ್ಮನವಿಯನ್ನುಪೂರ್ಣವಾಗಿ ಆಲಿಸಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೀಠ ಹೇಳಿದೆ.</p>.<p>ಆರೋಪಿಗೆ ಯಾವುದೇ ಆಕ್ಷೇಪಣೆ ಇಲ್ಲದಿರುವಾಗ, ನ್ಯಾಯಾಲಯಗಳು ಅರ್ಹತೆಗಳ ಆಧಾರದ ಮೇಲೆ ಮತ್ತು ಕಾನೂನಿನ ಪ್ರಕಾರ ಇಂತಹ ವಿಷಯಗಳನ್ನು ನಿರ್ಧರಿಸಲು ಯಾವುದೇ ಅಡ್ಡಿ ಇರುವುದಿಲ್ಲ ಪೀಠ ಹೇಳಿದೆ.</p>.<p>ಆರೋಪಿಯ ಮೇಲ್ಮನವಿ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಬಾಕಿಯಿದೆ. ಅದನ್ನು ಅರ್ಹತೆ ಆಧಾರದ ಮೇಲೆ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರದೇಶ ಹೈಕೋರ್ಟ್ಗೆ ಸೂಚಿಸಿದೆ.</p>.<p>ವಸಾಹತುಶಾಹಿ ಅವಧಿಯ ದೇಶದ್ರೋಹ ಕಾಯ್ದೆ ಕುರಿತು ಕೇಂದ್ರ ಸರ್ಕಾರವು ತನ್ನ ಭರವಸೆಯ ಪರಿಶೀಲನೆ ಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಮೇಲಿನ ದಂಡದ ನಿಬಂಧನೆಯನ್ನು ಸುಪ್ರೀಂ ಕೋರ್ಟ್ 2022ರ ಮೇ ತಿಂಗಳಲ್ಲಿ ತಡೆಹಿಡಿದಿತ್ತು. ಈ ಅಪರಾಧವನ್ನು ಪ್ರಚೋದಿಸುವ ಯಾವುದೇ ಹೊಸ ಪ್ರಕರಣವನ್ನು ದಾಖಲಿಸದಂತೆ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-331292285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 124ಎ ಕುರಿತು ಆರೋಪಿಗೆ ಯಾವುದೇ ಆಕ್ಷೇಪಣೆ ಇಲ್ಲದಿದ್ದರೆ ನ್ಯಾಯಾಲಯಗಳು ವಿಚಾರಣೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 17 ವರ್ಷಗಳಿಂದ ಜೈಲಿನಲ್ಲಿರುವ ಆರೋಪಿಯೊಬ್ಬರ ಅರ್ಜಿ ಆಲಿಸುವಾಗ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಈ ಕುರಿತು ಸ್ಪಷ್ಟೀಕರಣ ನೀಡಿತು.</p>.<p>ಅರ್ಜಿದಾರರು ಸೆಕ್ಷನ್ 124ಎ ಅಡಿಯಲ್ಲಿನ ಆರೋಪಗಳು ಸೇರಿದಂತೆ ತನ್ನ ಮೇಲಿನ ಕ್ರಿಮಿನಲ್ ಮೇಲ್ಮನವಿಯನ್ನುಪೂರ್ಣವಾಗಿ ಆಲಿಸಿದರೆ ಯಾವುದೇ ಅಭ್ಯಂತರವಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೀಠ ಹೇಳಿದೆ.</p>.<p>ಆರೋಪಿಗೆ ಯಾವುದೇ ಆಕ್ಷೇಪಣೆ ಇಲ್ಲದಿರುವಾಗ, ನ್ಯಾಯಾಲಯಗಳು ಅರ್ಹತೆಗಳ ಆಧಾರದ ಮೇಲೆ ಮತ್ತು ಕಾನೂನಿನ ಪ್ರಕಾರ ಇಂತಹ ವಿಷಯಗಳನ್ನು ನಿರ್ಧರಿಸಲು ಯಾವುದೇ ಅಡ್ಡಿ ಇರುವುದಿಲ್ಲ ಪೀಠ ಹೇಳಿದೆ.</p>.<p>ಆರೋಪಿಯ ಮೇಲ್ಮನವಿ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಬಾಕಿಯಿದೆ. ಅದನ್ನು ಅರ್ಹತೆ ಆಧಾರದ ಮೇಲೆ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಮಧ್ಯ ಪ್ರದೇಶ ಹೈಕೋರ್ಟ್ಗೆ ಸೂಚಿಸಿದೆ.</p>.<p>ವಸಾಹತುಶಾಹಿ ಅವಧಿಯ ದೇಶದ್ರೋಹ ಕಾಯ್ದೆ ಕುರಿತು ಕೇಂದ್ರ ಸರ್ಕಾರವು ತನ್ನ ಭರವಸೆಯ ಪರಿಶೀಲನೆ ಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಮೇಲಿನ ದಂಡದ ನಿಬಂಧನೆಯನ್ನು ಸುಪ್ರೀಂ ಕೋರ್ಟ್ 2022ರ ಮೇ ತಿಂಗಳಲ್ಲಿ ತಡೆಹಿಡಿದಿತ್ತು. ಈ ಅಪರಾಧವನ್ನು ಪ್ರಚೋದಿಸುವ ಯಾವುದೇ ಹೊಸ ಪ್ರಕರಣವನ್ನು ದಾಖಲಿಸದಂತೆ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-331292285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>