<p><strong>ನವದೆಹಲಿ</strong>: ₹1.9 ಕೋಟಿ ವಂಚನೆ ಪ್ರಕರಣದ ಜಾಮೀನು ಆದೇಶಗಳಲ್ಲಿ ‘ಗಂಭೀರ ಲೋಪ’ ಎಸಗಿದ್ದಕ್ಕಾಗಿ ಇಬ್ಬರು ನ್ಯಾಯಾಧೀಶರಿಗೆ ಏಳು ದಿನಗಳ ಕಡ್ಡಾಯ ತರಬೇತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಅಪರೂಪದ ಘಟನೆ ನಡೆದಿದೆ.</p>.<p>ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಮತ್ತು ಸೆಷನ್ಸ್ ನ್ಯಾಯಾಧೀಶರು ದೆಹಲಿ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.</p>.<p>ಆರೋಪಿ ದಂಪತಿಯಾದ ಶಿಕ್ಷಾ ರಾಥೋಡ್ ಮತ್ತು ಅವರ ಪತಿ ಪರವಾಗಿ ಬಂದಿರುವ ಸರಣಿ ಜಾಮೀನು ಆದೇಶಗಳ ವಿರುದ್ಧ ಮೆರ್ಸಸ್ ನೆಟ್ಸಿಟಿ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ನ ಮೇಲ್ಮನವಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.</p>.<p>‘2023ರ ನವೆಂಬರ್ 10 ಮತ್ತು 2024ರ ಆಗಸ್ಟ್ 16ರಂದು ಈ ಆದೇಶಗಳನ್ನು ಹೊರಡಿಸಿದ್ದ ನ್ಯಾಯಾಧೀಶರು ಕನಿಷ್ಠ 7 ದಿನಗಳ ಅವಧಿಗೆ ವಿಶೇಷ ನ್ಯಾಯಾಂಗ ತರಬೇತಿಗೆ ಒಳಗಾಗಬೇಕು’ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. </p>.<p class="title">ಅವರಿಗೆ ನ್ಯಾಯಾಂಗ ಪ್ರಕ್ರಿಯೆಗಳನ್ನು ಹೇಗೆ ನಡೆಸುವುದು ಎಂಬುದರ ಕುರಿತು ತರಬೇತಿ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ‘ಸುಪ್ರೀಂ’ ಕೇಳಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ₹1.9 ಕೋಟಿ ವಂಚನೆ ಪ್ರಕರಣದ ಜಾಮೀನು ಆದೇಶಗಳಲ್ಲಿ ‘ಗಂಭೀರ ಲೋಪ’ ಎಸಗಿದ್ದಕ್ಕಾಗಿ ಇಬ್ಬರು ನ್ಯಾಯಾಧೀಶರಿಗೆ ಏಳು ದಿನಗಳ ಕಡ್ಡಾಯ ತರಬೇತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಅಪರೂಪದ ಘಟನೆ ನಡೆದಿದೆ.</p>.<p>ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಮತ್ತು ಸೆಷನ್ಸ್ ನ್ಯಾಯಾಧೀಶರು ದೆಹಲಿ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.</p>.<p>ಆರೋಪಿ ದಂಪತಿಯಾದ ಶಿಕ್ಷಾ ರಾಥೋಡ್ ಮತ್ತು ಅವರ ಪತಿ ಪರವಾಗಿ ಬಂದಿರುವ ಸರಣಿ ಜಾಮೀನು ಆದೇಶಗಳ ವಿರುದ್ಧ ಮೆರ್ಸಸ್ ನೆಟ್ಸಿಟಿ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ನ ಮೇಲ್ಮನವಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.</p>.<p>‘2023ರ ನವೆಂಬರ್ 10 ಮತ್ತು 2024ರ ಆಗಸ್ಟ್ 16ರಂದು ಈ ಆದೇಶಗಳನ್ನು ಹೊರಡಿಸಿದ್ದ ನ್ಯಾಯಾಧೀಶರು ಕನಿಷ್ಠ 7 ದಿನಗಳ ಅವಧಿಗೆ ವಿಶೇಷ ನ್ಯಾಯಾಂಗ ತರಬೇತಿಗೆ ಒಳಗಾಗಬೇಕು’ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. </p>.<p class="title">ಅವರಿಗೆ ನ್ಯಾಯಾಂಗ ಪ್ರಕ್ರಿಯೆಗಳನ್ನು ಹೇಗೆ ನಡೆಸುವುದು ಎಂಬುದರ ಕುರಿತು ತರಬೇತಿ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ‘ಸುಪ್ರೀಂ’ ಕೇಳಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>