<p><strong>ನವದೆಹಲಿ</strong>: ಪರಿಶೀಲನೆಗಾಗಿ ರಾಜ್ಯಪಾಲರಿಂದ ಬಂದ ಮಸೂದೆಗಳ ವಿಚಾರವಾಗಿ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಯವರಿಗೆ ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿ ಮಾಡಿದೆ.</p><p>ರಾಷ್ಟ್ರಪತಿಯವರ ಪರಿಶೀಲನೆಗಾಗಿ ಯಾವ ದಿನಾಂಕಕ್ಕೆ ಮಸೂದೆಯನ್ನು ಕಳುಹಿಸಲಾಗಿತ್ತೋ, ಆ ದಿನಾಂಕದಿಂದ ಅನ್ವಯವಾಗುವಂತೆ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೋರ್ಟ್ ರಾಷ್ಟ್ರಪತಿಯವರಿಗೆ ಹೇಳಿರುವುದು ಇದೇ ಮೊದಲು.</p><p>ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ತಡೆಹಿಡಿದಿದ್ದ 10 ಮಸೂದೆಗಳಿಗೆ ಅಂಕಿತ ದೊರೆತಿದೆ ಎಂದು ಭಾವಿಸಬೇಕು ಎನ್ನುವ ತೀರ್ಪು ನೀಡಿದ ನಾಲ್ಕು ದಿನಗಳ ನಂತರ ಸುಪ್ರೀಂ ಕೋರ್ಟ್ ಆ ತೀರ್ಪಿನ ಪ್ರತಿಯನ್ನು ವೆಬ್ಸೈಟ್ನಲ್ಲಿ ಶುಕ್ರವಾರ ಪ್ರಕಟಿಸಿದೆ.</p><p>‘ಕೇಂದ್ರ ಗೃಹ ಸಚಿವಾಲಯವು ಸೂಚಿಸಿದ ಕಾಲಮಿತಿಯನ್ನು ಅಳವಡಿಸಿಕೊಳ್ಳುವುದು ಸೂಕ್ತ ಎಂದು ನಾವು ಭಾವಿಸಿದ್ದೇವೆ. ರಾಜ್ಯಪಾಲರು ಪರಿಶೀಲನೆಗೆ ರವಾನಿಸಿದ ಮಸೂದೆಯ ಬಗ್ಗೆ ರಾಷ್ಟ್ರಪತಿಯವರು ಮೂರು ತಿಂಗಳಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ತೀರ್ಪಿನಲ್ಲಿ ಹೇಳಲಾಗಿದೆ.</p><p>‘ವಿಳಂಬ ಆದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ದಾಖಲಿಸಬೇಕು, ಸಂಬಂಧಿಸಿದ ರಾಜ್ಯಕ್ಕೆ ಅದನ್ನು ತಿಳಿಸಬೇಕು. ರಾಜ್ಯಗಳು ಕೂಡ ಜೊತೆಯಾಗಿ ಕೆಲಸ ಮಾಡಬೇಕು, ತಮ್ಮ ಮುಂದೆ ಇರಿಸಬಹುದಾದ ಪ್ರಶ್ನೆಗಳಿಗೆ ಉತ್ತರ ಒದಗಿಸಬೇಕು, ಕೇಂದ್ರ ಸರ್ಕಾರ ನೀಡುವ ಸಲಹೆಗಳನ್ನು ತ್ವರಿತವಾಗಿ ಪರಿಗಣಿಸಬೇಕು’ ಎಂದು ಕೋರ್ಟ್ ಹೇಳಿದೆ.</p><p>ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರು ಇರುವ ವಿಭಾಗೀಯ ನ್ಯಾಯಪೀಠವು ಈ ತೀರ್ಪನ್ನು ಏಪ್ರಿಲ್ 8ರಂದು ನೀಡಿದೆ.</p><p>‘ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗಾಗಿ ಮಸೂದೆಯೊಂದನ್ನು ಇರಿಸಿಕೊಂಡಾಗ, ರಾಷ್ಟ್ರಪತಿಯವರು ಆ ಮಸೂದೆಗೆ ಅಂಕಿತ ತಡೆಹಿಡಿದಾಗ, ಅಂತಹ ಕ್ರಮವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ಮುಕ್ತ ಅವಕಾಶ ರಾಜ್ಯ ಸರ್ಕಾರಗಳಿಗೆ ಇರುತ್ತದೆ’ ಎಂದು ಪೀಠವು ಸ್ಪಷ್ಟವಾಗಿ ಹೇಳಿದೆ.</p>.ರಾಜ್ಯಪಾಲರ ಕೆಲಸಕ್ಕೆ ಕಾಲಮಿತಿ: ಸುಪ್ರೀಂ ಕೋರ್ಟ್ ‘ಐತಿಹಾಸಿಕ’ ತೀರ್ಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪರಿಶೀಲನೆಗಾಗಿ ರಾಜ್ಯಪಾಲರಿಂದ ಬಂದ ಮಸೂದೆಗಳ ವಿಚಾರವಾಗಿ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಯವರಿಗೆ ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿ ಮಾಡಿದೆ.</p><p>ರಾಷ್ಟ್ರಪತಿಯವರ ಪರಿಶೀಲನೆಗಾಗಿ ಯಾವ ದಿನಾಂಕಕ್ಕೆ ಮಸೂದೆಯನ್ನು ಕಳುಹಿಸಲಾಗಿತ್ತೋ, ಆ ದಿನಾಂಕದಿಂದ ಅನ್ವಯವಾಗುವಂತೆ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೋರ್ಟ್ ರಾಷ್ಟ್ರಪತಿಯವರಿಗೆ ಹೇಳಿರುವುದು ಇದೇ ಮೊದಲು.</p><p>ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ತಡೆಹಿಡಿದಿದ್ದ 10 ಮಸೂದೆಗಳಿಗೆ ಅಂಕಿತ ದೊರೆತಿದೆ ಎಂದು ಭಾವಿಸಬೇಕು ಎನ್ನುವ ತೀರ್ಪು ನೀಡಿದ ನಾಲ್ಕು ದಿನಗಳ ನಂತರ ಸುಪ್ರೀಂ ಕೋರ್ಟ್ ಆ ತೀರ್ಪಿನ ಪ್ರತಿಯನ್ನು ವೆಬ್ಸೈಟ್ನಲ್ಲಿ ಶುಕ್ರವಾರ ಪ್ರಕಟಿಸಿದೆ.</p><p>‘ಕೇಂದ್ರ ಗೃಹ ಸಚಿವಾಲಯವು ಸೂಚಿಸಿದ ಕಾಲಮಿತಿಯನ್ನು ಅಳವಡಿಸಿಕೊಳ್ಳುವುದು ಸೂಕ್ತ ಎಂದು ನಾವು ಭಾವಿಸಿದ್ದೇವೆ. ರಾಜ್ಯಪಾಲರು ಪರಿಶೀಲನೆಗೆ ರವಾನಿಸಿದ ಮಸೂದೆಯ ಬಗ್ಗೆ ರಾಷ್ಟ್ರಪತಿಯವರು ಮೂರು ತಿಂಗಳಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ತೀರ್ಪಿನಲ್ಲಿ ಹೇಳಲಾಗಿದೆ.</p><p>‘ವಿಳಂಬ ಆದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ದಾಖಲಿಸಬೇಕು, ಸಂಬಂಧಿಸಿದ ರಾಜ್ಯಕ್ಕೆ ಅದನ್ನು ತಿಳಿಸಬೇಕು. ರಾಜ್ಯಗಳು ಕೂಡ ಜೊತೆಯಾಗಿ ಕೆಲಸ ಮಾಡಬೇಕು, ತಮ್ಮ ಮುಂದೆ ಇರಿಸಬಹುದಾದ ಪ್ರಶ್ನೆಗಳಿಗೆ ಉತ್ತರ ಒದಗಿಸಬೇಕು, ಕೇಂದ್ರ ಸರ್ಕಾರ ನೀಡುವ ಸಲಹೆಗಳನ್ನು ತ್ವರಿತವಾಗಿ ಪರಿಗಣಿಸಬೇಕು’ ಎಂದು ಕೋರ್ಟ್ ಹೇಳಿದೆ.</p><p>ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರು ಇರುವ ವಿಭಾಗೀಯ ನ್ಯಾಯಪೀಠವು ಈ ತೀರ್ಪನ್ನು ಏಪ್ರಿಲ್ 8ರಂದು ನೀಡಿದೆ.</p><p>‘ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗಾಗಿ ಮಸೂದೆಯೊಂದನ್ನು ಇರಿಸಿಕೊಂಡಾಗ, ರಾಷ್ಟ್ರಪತಿಯವರು ಆ ಮಸೂದೆಗೆ ಅಂಕಿತ ತಡೆಹಿಡಿದಾಗ, ಅಂತಹ ಕ್ರಮವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ಮುಕ್ತ ಅವಕಾಶ ರಾಜ್ಯ ಸರ್ಕಾರಗಳಿಗೆ ಇರುತ್ತದೆ’ ಎಂದು ಪೀಠವು ಸ್ಪಷ್ಟವಾಗಿ ಹೇಳಿದೆ.</p>.ರಾಜ್ಯಪಾಲರ ಕೆಲಸಕ್ಕೆ ಕಾಲಮಿತಿ: ಸುಪ್ರೀಂ ಕೋರ್ಟ್ ‘ಐತಿಹಾಸಿಕ’ ತೀರ್ಪು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>