ಸುಪ್ರೀಂ ಕೋರ್ಟ್ನ ನಿರ್ಧಾರಕ್ಕೆ ಸಂತಸ ಪಡುತ್ತಿರುವವರು ಒಂದು ರೀತಿಯಲ್ಲಿ ಭ್ರಮೆಯಲ್ಲಿ ಇದ್ದಾರೆ. ಏಕೆಂದರೆ ಸಂಸತ್ ಇತ್ತೀಚೆಗೆ ಜಾರಿಗೊಳಿಸಿದ್ದ ಸಿವಿಸಿ ಕಾಯ್ದೆಯ ತಿದ್ದುಪಡಿಯನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಭ್ರಷ್ಟರು ಮತ್ತು ತಪ್ಪು ಕೆಲಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ನಿರ್ದೇಶನಾಲಯದ ಅಧಿಕಾರ ವ್ಯಾಪ್ತಿಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಇ.ಡಿ. ಒಂದು ಸಂಸ್ಥೆಯಾಗಿದ್ದು ಅದು ಯಾವುದೇ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ ಮತ್ತು ತನ್ನ ಮೂಲ ಉದ್ದೇಶದತ್ತ ಗಮನ ಕೇಂದ್ರೀಕರಿಸಿದೆ.
– ಅಮಿತ್ ಶಾ, ಕೇಂದ್ರ ಗೃಹ ಸಚಿವ
ಇ.ಡಿ. ಮುಖ್ಯಸ್ಥರ ಅಧಿಕಾರ ಅವಧಿಯನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರಾದ ಜಯಾ ಠಾಕೂರ್, ರಣದೀಪ್ ಸಿಂಗ್ ಸುರ್ಜೆವಾಲಾ, ಟಿಎಂಸಿ ಮುಖಂಡರಾದ ಸಾಕೇತ್ ಗೋಖಲೆ, ಮಹುವಾ ಮೊಯಿತ್ರಾ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಈ ತೀರ್ಪು ನೀಡಿದೆ. ಇದು ನ್ಯಾಯದ ಗೆಲುವು. ಇ.ಡಿ.ಯನ್ನು ರಾಜಕೀಯ ಉದ್ದೇಶಕ್ಕೆ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ನಮ್ಮ ಪಕ್ಷ ಮೊದಲಿನಿಂದಲೂ ಆರೋಪಿಸುತ್ತಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಅದು ಈಗ ಸ್ಪಷ್ಟವಾಗಿದೆ. ಮಿಶ್ರಾ ಅವರ ಅವಧಿ ಮೂರನೇ ಬಾರಿಗೆ ವಿಸ್ತರಣೆಯಾದ ಬಳಿಕ (2021ರ ನವೆಂಬರ್ 17) ನಿರ್ದೇಶನಾಲಯವು ಕೈಗೊಂಡ ಎಲ್ಲ ಕ್ರಮಗಳ ಪರಿಶೀಲನೆಗೆ ಸ್ವತಂತ್ರ ತನಿಖೆ ನಡೆಸಬೇಕು.
– ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್