<p><strong>ನವದೆಹಲಿ:</strong> ದಂಪತಿ ನಡುವಿನ ಕಲಹ ಪ್ರಕರಣವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಮಗುವಿನ ಪ್ರಯಾಣವನ್ನು ನಿರ್ಬಂಧಿಸುವ ದುಬೈ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಟೀಕಿಸಿದ್ದು, ಅದನ್ನು ‘ಅತಿ ಕ್ರೂರ’ ಮತ್ತು ‘ಮಾನವ ಹಕ್ಕುಗಳ ಉಲ್ಲಂಘನೆ’ ಎಂದು ಹೇಳಿದೆ.</p>.<p>ಘಾನಾ ಪ್ರಜೆಯಾಗಿರುವ ಮತ್ತು ಯುಎಇಯ ದುಬೈನಲ್ಲಿ ವಾಸಿಸುವ ಮಗುವಿನ ತಂದೆಯು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. </p>.<p>ದಾಂಪತ್ಯ ಕಲಹ ಪ್ರಕರಣದಲ್ಲಿ ನ್ಯಾಯಾಲಯವು ಪ್ರಯಾಣ ನಿಷೇಧವನ್ನು ವಿಧಿಸುವುದು ವಾಸ್ತವಿಕವಾಗಿ ‘ಗೃಹಬಂಧನ’ಕ್ಕೆ ಸಮಾನವಾಗಿರುತ್ತದೆ ಎಂದು ಪೀಠವು ಹೇಳಿತು.</p>.<p>ಬೆಂಗಳೂರಿನ ನಿವಾಸಿಯಾಗಿರುವ ತನ್ನ ಪರಿತ್ಯಕ್ತ ಪತ್ನಿ ದುಬೈ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಮ್ಮ ಮಗನನ್ನು ದುಬೈನಿಂದ ಭಾರತಕ್ಕೆ ಕರೆದುಕೊಂಡು ಹೋಗಿದ್ದಾರೆ ತಂದೆ ಅರ್ಜಿಯಲ್ಲಿ ಆರೋಪಿಸಿದ್ದಾರೆ. </p>.<p>ವಾಸ್ತವಾಂಶಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ‘ದಾಂಪತ್ಯ ಕಲಹ ಪ್ರಕರಣದಲ್ಲಿ ನ್ಯಾಯಾಲಯವು ಮಗುವಿನ ಮೇಲೆ ಪ್ರಯಾಣ ನಿಷೇಧವನ್ನು ಹೊರಡಿಸಿದ್ದು ಹೇಗೆ’ ಎಂದು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ನಿಖಿಲ್ ಗೋಯೆಲ್ ಅವರನ್ನು ಪ್ರಶ್ನಿಸಿದರು.</p>.<p>‘ಮಾನವ ಹಕ್ಕುಗಳಲ್ಲಿ ನಂಬಿಕೆ ಇಡುವ ಯಾವುದೇ ನ್ಯಾಯಾಲಯವು ಇಂತಹ ಆದೇಶ ಹೊರಡಿಸಲು ಸಾಧ್ಯವಿಲ್ಲ. ಏಕೆಂದರೆ, ಅದು ತಪ್ಪಿತಸ್ಥರೆಂದು ಸಾಬೀತಾಗದವರನ್ನು ಗೃಹಬಂಧನದಲ್ಲಿ ಇರಿಸುವುದಕ್ಕೆ ಸಮನಾಗುತ್ತದೆ’ ಎಂದು ಪೀಠ ಹೇಳಿದೆ.</p>.<p>ಈ ವಿವಾದವನ್ನು ಬಗೆಹರಿಸಲು ಸ್ಥಳೀಯ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗುವಂತೆ ಕರ್ನಾಟಕ ಹೈಕೋರ್ಟ್ ತಿಳಿಸಿರುವುದು ಸರಿಯಾಗಿಯೇ ಇದೆ ಎಂದು ಪೀಠ ಹೇಳಿತು. ಕಳೆದ ವರ್ಷ ಡಿ.10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪತಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಂಪತಿ ನಡುವಿನ ಕಲಹ ಪ್ರಕರಣವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಮಗುವಿನ ಪ್ರಯಾಣವನ್ನು ನಿರ್ಬಂಧಿಸುವ ದುಬೈ ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಟೀಕಿಸಿದ್ದು, ಅದನ್ನು ‘ಅತಿ ಕ್ರೂರ’ ಮತ್ತು ‘ಮಾನವ ಹಕ್ಕುಗಳ ಉಲ್ಲಂಘನೆ’ ಎಂದು ಹೇಳಿದೆ.</p>.<p>ಘಾನಾ ಪ್ರಜೆಯಾಗಿರುವ ಮತ್ತು ಯುಎಇಯ ದುಬೈನಲ್ಲಿ ವಾಸಿಸುವ ಮಗುವಿನ ತಂದೆಯು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. </p>.<p>ದಾಂಪತ್ಯ ಕಲಹ ಪ್ರಕರಣದಲ್ಲಿ ನ್ಯಾಯಾಲಯವು ಪ್ರಯಾಣ ನಿಷೇಧವನ್ನು ವಿಧಿಸುವುದು ವಾಸ್ತವಿಕವಾಗಿ ‘ಗೃಹಬಂಧನ’ಕ್ಕೆ ಸಮಾನವಾಗಿರುತ್ತದೆ ಎಂದು ಪೀಠವು ಹೇಳಿತು.</p>.<p>ಬೆಂಗಳೂರಿನ ನಿವಾಸಿಯಾಗಿರುವ ತನ್ನ ಪರಿತ್ಯಕ್ತ ಪತ್ನಿ ದುಬೈ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಮ್ಮ ಮಗನನ್ನು ದುಬೈನಿಂದ ಭಾರತಕ್ಕೆ ಕರೆದುಕೊಂಡು ಹೋಗಿದ್ದಾರೆ ತಂದೆ ಅರ್ಜಿಯಲ್ಲಿ ಆರೋಪಿಸಿದ್ದಾರೆ. </p>.<p>ವಾಸ್ತವಾಂಶಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ‘ದಾಂಪತ್ಯ ಕಲಹ ಪ್ರಕರಣದಲ್ಲಿ ನ್ಯಾಯಾಲಯವು ಮಗುವಿನ ಮೇಲೆ ಪ್ರಯಾಣ ನಿಷೇಧವನ್ನು ಹೊರಡಿಸಿದ್ದು ಹೇಗೆ’ ಎಂದು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ನಿಖಿಲ್ ಗೋಯೆಲ್ ಅವರನ್ನು ಪ್ರಶ್ನಿಸಿದರು.</p>.<p>‘ಮಾನವ ಹಕ್ಕುಗಳಲ್ಲಿ ನಂಬಿಕೆ ಇಡುವ ಯಾವುದೇ ನ್ಯಾಯಾಲಯವು ಇಂತಹ ಆದೇಶ ಹೊರಡಿಸಲು ಸಾಧ್ಯವಿಲ್ಲ. ಏಕೆಂದರೆ, ಅದು ತಪ್ಪಿತಸ್ಥರೆಂದು ಸಾಬೀತಾಗದವರನ್ನು ಗೃಹಬಂಧನದಲ್ಲಿ ಇರಿಸುವುದಕ್ಕೆ ಸಮನಾಗುತ್ತದೆ’ ಎಂದು ಪೀಠ ಹೇಳಿದೆ.</p>.<p>ಈ ವಿವಾದವನ್ನು ಬಗೆಹರಿಸಲು ಸ್ಥಳೀಯ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗುವಂತೆ ಕರ್ನಾಟಕ ಹೈಕೋರ್ಟ್ ತಿಳಿಸಿರುವುದು ಸರಿಯಾಗಿಯೇ ಇದೆ ಎಂದು ಪೀಠ ಹೇಳಿತು. ಕಳೆದ ವರ್ಷ ಡಿ.10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪತಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>