<p><strong>ನವದೆಹಲಿ:</strong> ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್ಟಿಎ) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಇಂತಹ ಗಂಭೀರ ಲೋಪಗಳಿಗೆ ಉತ್ತರದಾಯಿತ್ವ ಮತ್ತು ಹೊಣೆಗಾರಿಕೆ ಅತ್ಯಗತ್ಯ ಎಂದು ಪ್ರತಿಪಾದಿಸಿದೆ.</p><p>ಲೋಪದೋಷ ಮುಕ್ತವಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಎನ್ಟಿಎ ಸಂಸ್ಥೆಯನ್ನು ಪುನರ್ರಚಿಸಬೇಕು ಅಥವಾ ಅದರ ಬದಲಿಗೆ ಸ್ವಾಯತ್ತ ಸಂಸ್ಥೆಯನ್ನು ನೇಮಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠ ನಡೆಸಿತು. </p>.ಪ್ರಜಾವಾಣಿ ಪಾಡ್ಕಾಸ್ಟ್: ಅವಧಿಗೂ ಮುನ್ನ ರಾಜೀನಾಮೆ ಸಲ್ಲಿಸಿದ ಸಿಎಂಗಳು.ಮಗ ಯತೀಂದ್ರರನ್ನು ರಾಹುಲ್ಗೆ ಪರಿಚಯಿಸಿದ ಸಿದ್ದರಾಮಯ್ಯ: ಸಂಪುಟದಲ್ಲಿ ಸ್ಥಾನ?. <p>ವಿಚಾರಣೆ ವೇಳೆ ಪರೀಕ್ಷಾ ಅಕ್ರಮಗಳ ಕುರಿತು ಪ್ರಸ್ತಾಪಿಸಿದ ನ್ಯಾಯಪೀಠ, ಇಂತಹ ಘಟನೆಗಳು ಸಂಭವಿಸಿದಾಗ ಅದು ಕೇವಲ ವಿದ್ಯಾರ್ಥಿಗಳ ಮೇಲಷ್ಟೇ ಅಲ್ಲ, ಅವರ ಇಡೀ ಕುಟುಂಬದ ಮೇಲೆಯೂ ತೀವ್ರ ಮಾನಸಿಕ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ಪರೀಕ್ಷೆಗಾಗಿ ಮಾನಸಿಕವಾಗಿಯೂ ಒತ್ತಡದಲ್ಲಿರುತ್ತಾರೆ. ಜತೆಗೆ ಸಮಯವನ್ನು ಮೀಸಲಿಟ್ಟಿರುತ್ತಾರೆ. ನಾವು ಯಾವುದೇ ಕಾರಣಕ್ಕೂ ದೇಶದ ಯುವ ಸಮೂಹವನ್ನು ನಿರಾಶೆಗೊಳಿಸಬಾರದು ಎಂದು ಕಳವಳ ವ್ಯಕ್ತಪಡಿಸಿತು.</p><p>ಇದೇ ವೇಳೆ ಯುಪಿಎಸ್ಸಿ ಪರೀಕ್ಷೆಗಳ ಪಾರದರ್ಶಕತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಯುಪಿಎಸ್ಸಿ ಪರೀಕ್ಷೆಗಳಲ್ಲಿ ಎಂದಿಗೂ ಇಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಎನ್ಟಿಎ ಸಂಸ್ಥೆಯು ಅವರನ್ನು ನೋಡಿ ಕಲಿಯಬೇಕಾದ ಅಗತ್ಯವಿದೆ. ನಿಜವಾದ ಹೊಣೆಗಾರಿಕೆಯನ್ನು ನಿಗದಿಪಡಿಸದ ಹೊರತು ಈ ಮೂಲಭೂತ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.ಮಹಾರಾಷ್ಟ್ರ: ನಕಲಿ ಮದ್ಯ ಸೇವಿಸಿ 7 ಮಂದಿ ಸಾವು, ತನಿಖೆ ಆರಂಭಿಸಿದ ಪೊಲೀಸರು.ತಕ್ಷಣಕ್ಕೆ ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆ ನಿರ್ಬಂಧ ತೆರವಿಗೆ ಕೋರ್ಟ್ ನಕಾರ. <p>ಮೇ 3 ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವ್ಯಾಪಕ ಆರೋಪಗಳ ಹಿನ್ನೆಲೆಯಲ್ಲಿ, ಮೇ 12 ರಂದು ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪ್ರಸ್ತುತ ಈ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಜೂನ್ 21 ರಂದು ಮರುಪರೀಕ್ಷೆ ನಿಗದಿಯಾಗಿದೆ.</p><p>ಇಡೀ ಪ್ರಕರಣದ ಕುರಿತು ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್ಟಿಎ) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಇಂತಹ ಗಂಭೀರ ಲೋಪಗಳಿಗೆ ಉತ್ತರದಾಯಿತ್ವ ಮತ್ತು ಹೊಣೆಗಾರಿಕೆ ಅತ್ಯಗತ್ಯ ಎಂದು ಪ್ರತಿಪಾದಿಸಿದೆ.</p><p>ಲೋಪದೋಷ ಮುಕ್ತವಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಎನ್ಟಿಎ ಸಂಸ್ಥೆಯನ್ನು ಪುನರ್ರಚಿಸಬೇಕು ಅಥವಾ ಅದರ ಬದಲಿಗೆ ಸ್ವಾಯತ್ತ ಸಂಸ್ಥೆಯನ್ನು ನೇಮಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠ ನಡೆಸಿತು. </p>.ಪ್ರಜಾವಾಣಿ ಪಾಡ್ಕಾಸ್ಟ್: ಅವಧಿಗೂ ಮುನ್ನ ರಾಜೀನಾಮೆ ಸಲ್ಲಿಸಿದ ಸಿಎಂಗಳು.ಮಗ ಯತೀಂದ್ರರನ್ನು ರಾಹುಲ್ಗೆ ಪರಿಚಯಿಸಿದ ಸಿದ್ದರಾಮಯ್ಯ: ಸಂಪುಟದಲ್ಲಿ ಸ್ಥಾನ?. <p>ವಿಚಾರಣೆ ವೇಳೆ ಪರೀಕ್ಷಾ ಅಕ್ರಮಗಳ ಕುರಿತು ಪ್ರಸ್ತಾಪಿಸಿದ ನ್ಯಾಯಪೀಠ, ಇಂತಹ ಘಟನೆಗಳು ಸಂಭವಿಸಿದಾಗ ಅದು ಕೇವಲ ವಿದ್ಯಾರ್ಥಿಗಳ ಮೇಲಷ್ಟೇ ಅಲ್ಲ, ಅವರ ಇಡೀ ಕುಟುಂಬದ ಮೇಲೆಯೂ ತೀವ್ರ ಮಾನಸಿಕ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ಪರೀಕ್ಷೆಗಾಗಿ ಮಾನಸಿಕವಾಗಿಯೂ ಒತ್ತಡದಲ್ಲಿರುತ್ತಾರೆ. ಜತೆಗೆ ಸಮಯವನ್ನು ಮೀಸಲಿಟ್ಟಿರುತ್ತಾರೆ. ನಾವು ಯಾವುದೇ ಕಾರಣಕ್ಕೂ ದೇಶದ ಯುವ ಸಮೂಹವನ್ನು ನಿರಾಶೆಗೊಳಿಸಬಾರದು ಎಂದು ಕಳವಳ ವ್ಯಕ್ತಪಡಿಸಿತು.</p><p>ಇದೇ ವೇಳೆ ಯುಪಿಎಸ್ಸಿ ಪರೀಕ್ಷೆಗಳ ಪಾರದರ್ಶಕತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಯುಪಿಎಸ್ಸಿ ಪರೀಕ್ಷೆಗಳಲ್ಲಿ ಎಂದಿಗೂ ಇಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಎನ್ಟಿಎ ಸಂಸ್ಥೆಯು ಅವರನ್ನು ನೋಡಿ ಕಲಿಯಬೇಕಾದ ಅಗತ್ಯವಿದೆ. ನಿಜವಾದ ಹೊಣೆಗಾರಿಕೆಯನ್ನು ನಿಗದಿಪಡಿಸದ ಹೊರತು ಈ ಮೂಲಭೂತ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿತು.</p>.ಮಹಾರಾಷ್ಟ್ರ: ನಕಲಿ ಮದ್ಯ ಸೇವಿಸಿ 7 ಮಂದಿ ಸಾವು, ತನಿಖೆ ಆರಂಭಿಸಿದ ಪೊಲೀಸರು.ತಕ್ಷಣಕ್ಕೆ ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆ ನಿರ್ಬಂಧ ತೆರವಿಗೆ ಕೋರ್ಟ್ ನಕಾರ. <p>ಮೇ 3 ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವ್ಯಾಪಕ ಆರೋಪಗಳ ಹಿನ್ನೆಲೆಯಲ್ಲಿ, ಮೇ 12 ರಂದು ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪ್ರಸ್ತುತ ಈ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಜೂನ್ 21 ರಂದು ಮರುಪರೀಕ್ಷೆ ನಿಗದಿಯಾಗಿದೆ.</p><p>ಇಡೀ ಪ್ರಕರಣದ ಕುರಿತು ಸಮಗ್ರ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>