<p><strong>ನವದೆಹಲಿ</strong>: ‘ಸಹಕಾರ ಸಂಘಗಳು ಮತ್ತು ಇತರ ಸಂಘ ಸಂಸ್ಥೆಗಳ ಆಡಳಿತದಲ್ಲಿ ‘ವಸಹಾತುಶಾಹಿ ಮನಸ್ಥಿತಿ’ ಮುಂದುವರಿದಿದೆ. ಜಿಲ್ಲಾಧಿಕಾರಿಗಳಂತಹ ಅಧಿಕಾರಿಗಳ ಸಂಗಾತಿಗಳನ್ನು ಅಧಿಕಾರೇತರ ಪಧಾದಿಕಾರಿಗಳನ್ನಾಗಿ ನೇಮಿಸಲಾಗುತ್ತಿದೆ’ ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತು.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, ಎರಡು ತಿಂಗಳ ಒಳಗಾಗಿ ಇದಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತು.</p>.<p>‘ಉತ್ತರ ಪ್ರದೇಶದ ಹಲವು ಸಹಕಾರ ಸಂಘಗಳ ಪ್ರಮುಖ ಹುದ್ದೆಗಳನ್ನು ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿಗಳ ಪತ್ನಿಯರಿಗೆ ನೀಡಲಾಗಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದ ನಡೆ’ ಎಂದು ಕೋರ್ಟ್ ಹೇಳಿತು.</p>.<p>ಬುಲಂದ್ಶಹರ್ ಜಿಲ್ಲೆಯ ಸಿಎಂ ಜಿಲ್ಲಾ ಮಹಿಳಾ ಸಮಿತಿ ಎಂಬ ಮಹಿಳಾ ಸ್ವಸಹಾಯ ಸಂಘಗಳ ಸಮಿತಿಯ ಅಧ್ಯಕ್ಷ ಹುದ್ದೆಗೆ ಜಿಲ್ಲಾಧಿಕಾರಿಯ ಪತ್ನಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ ಸಮಿತಿಯು ಕೋರ್ಟ್ ಮೆಟ್ಟಿಲೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸಹಕಾರ ಸಂಘಗಳು ಮತ್ತು ಇತರ ಸಂಘ ಸಂಸ್ಥೆಗಳ ಆಡಳಿತದಲ್ಲಿ ‘ವಸಹಾತುಶಾಹಿ ಮನಸ್ಥಿತಿ’ ಮುಂದುವರಿದಿದೆ. ಜಿಲ್ಲಾಧಿಕಾರಿಗಳಂತಹ ಅಧಿಕಾರಿಗಳ ಸಂಗಾತಿಗಳನ್ನು ಅಧಿಕಾರೇತರ ಪಧಾದಿಕಾರಿಗಳನ್ನಾಗಿ ನೇಮಿಸಲಾಗುತ್ತಿದೆ’ ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿತು.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, ಎರಡು ತಿಂಗಳ ಒಳಗಾಗಿ ಇದಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತು.</p>.<p>‘ಉತ್ತರ ಪ್ರದೇಶದ ಹಲವು ಸಹಕಾರ ಸಂಘಗಳ ಪ್ರಮುಖ ಹುದ್ದೆಗಳನ್ನು ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿಗಳ ಪತ್ನಿಯರಿಗೆ ನೀಡಲಾಗಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧವಾದ ನಡೆ’ ಎಂದು ಕೋರ್ಟ್ ಹೇಳಿತು.</p>.<p>ಬುಲಂದ್ಶಹರ್ ಜಿಲ್ಲೆಯ ಸಿಎಂ ಜಿಲ್ಲಾ ಮಹಿಳಾ ಸಮಿತಿ ಎಂಬ ಮಹಿಳಾ ಸ್ವಸಹಾಯ ಸಂಘಗಳ ಸಮಿತಿಯ ಅಧ್ಯಕ್ಷ ಹುದ್ದೆಗೆ ಜಿಲ್ಲಾಧಿಕಾರಿಯ ಪತ್ನಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ ಸಮಿತಿಯು ಕೋರ್ಟ್ ಮೆಟ್ಟಿಲೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>