<p><strong>ನವದೆಹಲಿ</strong>: ವಂಚನೆ ಹಾಗೂ ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ, ಎನ್ಸಿಪಿ ಶಾಸಕ ಮಾಣಿಕರಾವ್ ಕೊಕಾಟೆ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಇದರಿಂದ, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದರಿಂದ ಅವರು ಸದ್ಯ ಪಾರಾಗಿದ್ದಾರೆ.</p>.<p>ಕೊಕಾಟೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. </p>.<p class="title">ಕೊಕಾಟೆ ಪರ ವಕೀಲರ ವಾದ ಆಲಿಸಿದ ಪೀಠ, ‘ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ. ಅದೇ ವೇಳೆ, ಅರ್ಜಿದಾರರ ಶಿಕ್ಷೆಗೆ ತಡೆ ನೀಡಲಾಗಿದೆ. ಆದರೆ ಅವರು ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ’ ಎಂದಿತು. </p>.<p class="title">ರಾಜ್ಯ ಸರ್ಕಾರದ ವಸತಿ ಯೋಜನೆಯೊಂದರಲ್ಲಿ 1995ರಲ್ಲಿ ನಡೆಸಿದ ವಂಚನೆ ಪ್ರಕರಣದಲ್ಲಿ ಕೊಕಾಟೆ ಅವರಿಗೆ ನಾಸಿಕ್ ನ್ಯಾಯಾಲಯವು ಈ ವರ್ಷದ ಫೆಬ್ರುವರಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಡಿಸೆಂಬರ್ 19ರಂದು ಬಾಂಬೆ ಹೈಕೋರ್ಟ್ ಕೊಕಾಟೆ ಅವರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಆದರೆ ಅವರನ್ನು ಅಪರಾಧಿ ಎಂದು ನಿರ್ಣಯಿಸಿದ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಂಚನೆ ಹಾಗೂ ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ, ಎನ್ಸಿಪಿ ಶಾಸಕ ಮಾಣಿಕರಾವ್ ಕೊಕಾಟೆ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಇದರಿಂದ, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದರಿಂದ ಅವರು ಸದ್ಯ ಪಾರಾಗಿದ್ದಾರೆ.</p>.<p>ಕೊಕಾಟೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. </p>.<p class="title">ಕೊಕಾಟೆ ಪರ ವಕೀಲರ ವಾದ ಆಲಿಸಿದ ಪೀಠ, ‘ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ. ಅದೇ ವೇಳೆ, ಅರ್ಜಿದಾರರ ಶಿಕ್ಷೆಗೆ ತಡೆ ನೀಡಲಾಗಿದೆ. ಆದರೆ ಅವರು ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ’ ಎಂದಿತು. </p>.<p class="title">ರಾಜ್ಯ ಸರ್ಕಾರದ ವಸತಿ ಯೋಜನೆಯೊಂದರಲ್ಲಿ 1995ರಲ್ಲಿ ನಡೆಸಿದ ವಂಚನೆ ಪ್ರಕರಣದಲ್ಲಿ ಕೊಕಾಟೆ ಅವರಿಗೆ ನಾಸಿಕ್ ನ್ಯಾಯಾಲಯವು ಈ ವರ್ಷದ ಫೆಬ್ರುವರಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಡಿಸೆಂಬರ್ 19ರಂದು ಬಾಂಬೆ ಹೈಕೋರ್ಟ್ ಕೊಕಾಟೆ ಅವರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಆದರೆ ಅವರನ್ನು ಅಪರಾಧಿ ಎಂದು ನಿರ್ಣಯಿಸಿದ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>