<p><strong>ನವದೆಹಲಿ:</strong> ಹುದ್ದೆಗೆ ಅನರ್ಹ ಎಂಬ ಕಾರಣದ ಮೇಲೆ ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ (ಎನ್ಸಿಐಎಸ್ಎಂಸಿ) ಮುಖ್ಯಸ್ಥರ ನೇಮಕಾತಿಯನ್ನು ರದ್ದು ಮಾಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. </p>.<p>ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನ್ಮೋಹನ್ ಅವರು ಇದ್ದ ಪೀಠವು ವೈದ್ಯ ಜಯಂತ್ ಯಶವಂತ್ ದೇವ್ ಪೂಜಾರಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಎನ್ಸಿಐಎಸ್ಎಂಸಿಗೆ ನೋಟಿಸ್ ಜಾರಿ ಮಾಡಿದೆ.</p>.<p>ದೇವ್ ಪೂಜಾರಿ ಅವರನ್ನು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಜೂನ್ 6ರಂದು ಆದೇಶ ನೀಡಿತ್ತು.</p>.<p>ಎನ್ಸಿಐಎಸ್ಎಂ ಕಾಯ್ದೆಯ ಪ್ರಕಾರ, ಆಯೋಗದ ಅಧ್ಯಕ್ಷ ಹುದ್ದೆಗೆ ಅರ್ಹತೆ ಪಡೆಯಲು ಸ್ನಾತಕೋತ್ತರ ಪದವಿ ಹೊಂದಿರುವುದು ಕಡ್ಡಾಯ ಎಂಬ ನಿಯಮ ಇದೆ. ದೇವ್ ಪೂಜಾರಿ ಈ ಅರ್ಹತೆ ಹೊಂದಿಲ್ಲ. ಆಯೋಗದ ನಿಯಮಗಳಿಗೆ ವಿರುದ್ಧವಾಗಿ ದೇವ್ ಪೂಜಾರಿ ನೇಮಕ ನಡೆದಿದೆ ಎಂದು ವೇದ ಪ್ರಕಾಶ್ ತ್ಯಾಗಿ, ಡಾ.ರಘುನಂದನ್ ಶರ್ಮಾ ಎಂಬುವರು ಅರ್ಜಿ ಸಲ್ಲಿಸಿದ್ದರು.</p>.<p>ಸ್ನಾತಕೋತ್ತರ ಪದವಿ ಪಡೆಯದೇ ಆಯುರ್ವೇದ ಪದವಿ ನಂತರ ಪಿಹೆಚ್ಡಿ ಮಾಡಿರುವುದನ್ನು ದೇವ್ಪೂಜಾರಿ ಹೈಕೋರ್ಟ್ಗೆ ತಿಳಿಸಿದ್ದರು. ಹೀಗಾಗಿ ದೇವ್ ಪೂಜಾರಿ ಅವರ ನೇಮಕಾತಿ ಆದೇಶವನ್ನು ದೆಹಲಿ ಹೈಕೋರ್ಟ್ ವಜಾ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹುದ್ದೆಗೆ ಅನರ್ಹ ಎಂಬ ಕಾರಣದ ಮೇಲೆ ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ (ಎನ್ಸಿಐಎಸ್ಎಂಸಿ) ಮುಖ್ಯಸ್ಥರ ನೇಮಕಾತಿಯನ್ನು ರದ್ದು ಮಾಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. </p>.<p>ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಮನ್ಮೋಹನ್ ಅವರು ಇದ್ದ ಪೀಠವು ವೈದ್ಯ ಜಯಂತ್ ಯಶವಂತ್ ದೇವ್ ಪೂಜಾರಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಎನ್ಸಿಐಎಸ್ಎಂಸಿಗೆ ನೋಟಿಸ್ ಜಾರಿ ಮಾಡಿದೆ.</p>.<p>ದೇವ್ ಪೂಜಾರಿ ಅವರನ್ನು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಜೂನ್ 6ರಂದು ಆದೇಶ ನೀಡಿತ್ತು.</p>.<p>ಎನ್ಸಿಐಎಸ್ಎಂ ಕಾಯ್ದೆಯ ಪ್ರಕಾರ, ಆಯೋಗದ ಅಧ್ಯಕ್ಷ ಹುದ್ದೆಗೆ ಅರ್ಹತೆ ಪಡೆಯಲು ಸ್ನಾತಕೋತ್ತರ ಪದವಿ ಹೊಂದಿರುವುದು ಕಡ್ಡಾಯ ಎಂಬ ನಿಯಮ ಇದೆ. ದೇವ್ ಪೂಜಾರಿ ಈ ಅರ್ಹತೆ ಹೊಂದಿಲ್ಲ. ಆಯೋಗದ ನಿಯಮಗಳಿಗೆ ವಿರುದ್ಧವಾಗಿ ದೇವ್ ಪೂಜಾರಿ ನೇಮಕ ನಡೆದಿದೆ ಎಂದು ವೇದ ಪ್ರಕಾಶ್ ತ್ಯಾಗಿ, ಡಾ.ರಘುನಂದನ್ ಶರ್ಮಾ ಎಂಬುವರು ಅರ್ಜಿ ಸಲ್ಲಿಸಿದ್ದರು.</p>.<p>ಸ್ನಾತಕೋತ್ತರ ಪದವಿ ಪಡೆಯದೇ ಆಯುರ್ವೇದ ಪದವಿ ನಂತರ ಪಿಹೆಚ್ಡಿ ಮಾಡಿರುವುದನ್ನು ದೇವ್ಪೂಜಾರಿ ಹೈಕೋರ್ಟ್ಗೆ ತಿಳಿಸಿದ್ದರು. ಹೀಗಾಗಿ ದೇವ್ ಪೂಜಾರಿ ಅವರ ನೇಮಕಾತಿ ಆದೇಶವನ್ನು ದೆಹಲಿ ಹೈಕೋರ್ಟ್ ವಜಾ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>