ಆಗ ಜ್ಞಾನವಾಪಿ ಮಸೀದಿ ನಿರ್ವಹಣಾ ಸಮಿತಿ ಪರ ವಕೀಲ ಹುಜೇಫಾ ಅಹ್ಮದಿ ಅವರು, ‘ವಿಚಾರಣೆ ಮುಂದೂಡಲು ನಮ್ಮಿಂದ ಯಾವುದೇ ಆಕ್ಷೇಪವಿಲ್ಲ. ಆದರೆ, ಇದೇ ಮೊಕದ್ದಮೆಗೆ ಸಂಬಂಧಿಸಿದಂತೆ ವಾರಾಣಸಿ ಜಿಲ್ಲಾ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಜತೆಗೆ ಮಸೀದಿಯ ಗೋಡೆಯನ್ನು ಕೆಡವಲು ಅನುಮತಿ ಕೋರಿ ಹೊಸ ಅರ್ಜಿ ಸಲ್ಲಿಸಲಾಗಿದೆ. ಗೋಡೆ ಕೆಡವಿದರೆ, ಇಡೀ ಮಸೀದಿ ನೆಲಸಮವಾಗುತ್ತದೆ. ಈ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗುವವರೆಗೂ, ವಾರಾಣಸಿ ಜಿಲ್ಲಾ ಸಿವಿಲ್ ನ್ಯಾಯಾಲಯದಲ್ಲಿ ಯಾವುದೇ ಪ್ರಕ್ರಿಯೆ ನಡೆಸದಂತೆ ನಿರ್ದೇಶನ ನೀಡಿ’ ಎಂದು ಕೋರಿದರು.