<p><strong>ನವದೆಹಲಿ:</strong> ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ಸಮಾನತಾ ಸಮಿತಿ’ಗಳನ್ನು ರಚಿಸಲು ನಿರ್ದೇಶಿಸಿ, ರೂಪಿಸಿದ್ದ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.</p><p>ಈ ನಿಯಮಗಳು ಮೇಲ್ನೋಟಕ್ಕೆ ಅಸ್ಪಷ್ಟವಾಗಿದ್ದು, ದುರುಪಯೋಗಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ. </p>.<p>‘ಸಮಾಜದ ಮೇಲೆ ಅಪಾಯಕಾರಿ ಪರಿಣಾಮ ಬೀರುವ ಮತ್ತು ಸಮಾಜದಲ್ಲಿ ವಿಭಜನೆಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕಾದ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. </p><p>ಯುಜಿಸಿಯ ನೂತನ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ನಡೆಸಿತು. </p><p>ಯುಜಿಸಿ ನಿಯಮ– 2026ಕ್ಕೆ ತಡೆ ನೀಡಿದ ಪೀಠವು, ‘2012ರ ನಿಯಮಗಳು ಮುಂದುವರಿಯಲಿ’ ಎಂದು ಹೇಳಿತು. ತಜ್ಞರನ್ನು ಒಳಗೊಂಡ ಸಮಿತಿಯು ಈ ನಿಯಮಗಳನ್ನು ಪುನರ್ ಪರಿಶೀಲಿಸಬೇಕು ಎಂದೂ ಸೂಚಿಸಿತು. ಹೊಸ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿಗೊಳಿಸಿದ ಪೀಠವು, ಮಾರ್ಚ್ 19ರೊಳಗೆ ಉತ್ತರಿಸುವಂತೆ ನಿರ್ದೇಶಿಸಿತು.</p>.<h2><strong>ಹೊಸ ನಿಯಮದಲ್ಲೇನಿದೆ?</strong></h2><p>ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಜಾತಿ ತಾರತಮ್ಯದ ದೂರುಗಳನ್ನು ಪರಿಶೀಲಿಸಲು ಮತ್ತು ಸಮಾನತೆಯನ್ನು ಉತ್ತೇಜಿಸಲು ‘ಸಮಾನತೆ ಸಮಿತಿ’ಗಳನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಯುಜಿಸಿ ಜನವರಿ 13ರಂದು ಹೊರಡಿಸಿದ್ದ ಹೊಸ ನಿಯಮಗಳಲ್ಲಿ ತಿಳಿಸಿತ್ತು. </p><p>ಈ ಸಮಿತಿಗಳು ಇತರ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಅಂಗವಿಕಲ ಮತ್ತು ಮಹಿಳಾ ಸದಸ್ಯರನ್ನು ಒಳಗೊಂಡಿರಬೇಕು ಎಂದು ಹೇಳಲಾಗಿತ್ತು. </p><p>ಈ ನಿಯಮಗಳಲ್ಲಿನ ‘ಜಾತಿ ತಾರತಮ್ಯದ ವ್ಯಾಖ್ಯಾನ’ ಮತ್ತು ಅದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಮೃತ್ಯುಂಜಯ ತಿವಾರಿ, ವಿನೀತ್ ಜಿಂದಾಲ್, ರಾಹುಲ್ ದಿವಾನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. </p><p>ಜಾತಿ ತಾರತಮ್ಯವನ್ನು ಎಸ್ಸಿ, ಎಸ್ಟಿ ಮತ್ತು ಒಬಿಸಿಗೆ ಸೇರಿದವರ ವಿರುದ್ಧದ ತಾರತಮ್ಯ ಎಂದು ವ್ಯಾಖ್ಯಾನಿಸಲಾಗಿದೆ. ಉಳಿದಂತೆ ಮೀಸಲು ರಹಿತ ಅಥವಾ ಸಾಮಾನ್ಯ ವರ್ಗದವರಿಗೆ ಸಾಂಸ್ಥಿಕ ರಕ್ಷಣೆಯನ್ನು ಮತ್ತು ಅವರ ಕುಂದುಕೊರತೆಗಳಿಗೆ ಪರಿಹಾರವನ್ನು ನಿರಾಕರಿಸಿರುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ. </p><p>ಈ ನಿಯಮಗಳನ್ನು ವಿರೋಧಿಸಿ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ಅಲ್ಲದೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಈ ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ಸಮಾನತಾ ಸಮಿತಿ’ಗಳನ್ನು ರಚಿಸಲು ನಿರ್ದೇಶಿಸಿ, ರೂಪಿಸಿದ್ದ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.</p><p>ಈ ನಿಯಮಗಳು ಮೇಲ್ನೋಟಕ್ಕೆ ಅಸ್ಪಷ್ಟವಾಗಿದ್ದು, ದುರುಪಯೋಗಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ. </p>.<p>‘ಸಮಾಜದ ಮೇಲೆ ಅಪಾಯಕಾರಿ ಪರಿಣಾಮ ಬೀರುವ ಮತ್ತು ಸಮಾಜದಲ್ಲಿ ವಿಭಜನೆಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕಾದ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. </p><p>ಯುಜಿಸಿಯ ನೂತನ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ನಡೆಸಿತು. </p><p>ಯುಜಿಸಿ ನಿಯಮ– 2026ಕ್ಕೆ ತಡೆ ನೀಡಿದ ಪೀಠವು, ‘2012ರ ನಿಯಮಗಳು ಮುಂದುವರಿಯಲಿ’ ಎಂದು ಹೇಳಿತು. ತಜ್ಞರನ್ನು ಒಳಗೊಂಡ ಸಮಿತಿಯು ಈ ನಿಯಮಗಳನ್ನು ಪುನರ್ ಪರಿಶೀಲಿಸಬೇಕು ಎಂದೂ ಸೂಚಿಸಿತು. ಹೊಸ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿಗೊಳಿಸಿದ ಪೀಠವು, ಮಾರ್ಚ್ 19ರೊಳಗೆ ಉತ್ತರಿಸುವಂತೆ ನಿರ್ದೇಶಿಸಿತು.</p>.<h2><strong>ಹೊಸ ನಿಯಮದಲ್ಲೇನಿದೆ?</strong></h2><p>ದೇಶದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಜಾತಿ ತಾರತಮ್ಯದ ದೂರುಗಳನ್ನು ಪರಿಶೀಲಿಸಲು ಮತ್ತು ಸಮಾನತೆಯನ್ನು ಉತ್ತೇಜಿಸಲು ‘ಸಮಾನತೆ ಸಮಿತಿ’ಗಳನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಯುಜಿಸಿ ಜನವರಿ 13ರಂದು ಹೊರಡಿಸಿದ್ದ ಹೊಸ ನಿಯಮಗಳಲ್ಲಿ ತಿಳಿಸಿತ್ತು. </p><p>ಈ ಸಮಿತಿಗಳು ಇತರ ಹಿಂದುಳಿದ ವರ್ಗ (ಒಬಿಸಿ), ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಅಂಗವಿಕಲ ಮತ್ತು ಮಹಿಳಾ ಸದಸ್ಯರನ್ನು ಒಳಗೊಂಡಿರಬೇಕು ಎಂದು ಹೇಳಲಾಗಿತ್ತು. </p><p>ಈ ನಿಯಮಗಳಲ್ಲಿನ ‘ಜಾತಿ ತಾರತಮ್ಯದ ವ್ಯಾಖ್ಯಾನ’ ಮತ್ತು ಅದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಮೃತ್ಯುಂಜಯ ತಿವಾರಿ, ವಿನೀತ್ ಜಿಂದಾಲ್, ರಾಹುಲ್ ದಿವಾನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. </p><p>ಜಾತಿ ತಾರತಮ್ಯವನ್ನು ಎಸ್ಸಿ, ಎಸ್ಟಿ ಮತ್ತು ಒಬಿಸಿಗೆ ಸೇರಿದವರ ವಿರುದ್ಧದ ತಾರತಮ್ಯ ಎಂದು ವ್ಯಾಖ್ಯಾನಿಸಲಾಗಿದೆ. ಉಳಿದಂತೆ ಮೀಸಲು ರಹಿತ ಅಥವಾ ಸಾಮಾನ್ಯ ವರ್ಗದವರಿಗೆ ಸಾಂಸ್ಥಿಕ ರಕ್ಷಣೆಯನ್ನು ಮತ್ತು ಅವರ ಕುಂದುಕೊರತೆಗಳಿಗೆ ಪರಿಹಾರವನ್ನು ನಿರಾಕರಿಸಿರುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ. </p><p>ಈ ನಿಯಮಗಳನ್ನು ವಿರೋಧಿಸಿ ದೇಶದ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ಅಲ್ಲದೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಈ ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>