<p><strong>ನವದೆಹಲಿ</strong>: ‘ನ್ಯಾಯಾಲಯಗಳ ಆದೇಶಕ್ಕೆ ಗೌರವ ಇಲ್ಲವೇ?’ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಬೀದಿ ನಾಯಿಗಳ ಹಾವಳಿಗೆ ಸಂಬಂಧಿಸಿದಂತೆ ನವೆಂಬರ್ 3ರಂದು ನಡೆಯುವ ಪ್ರಕರಣದ ವಿಚಾರಣೆಗೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಿರಬೇಕು’ ಎಂದು ಶುಕ್ರವಾರ ಸೂಚಿಸಿದೆ.</p>.<p>ನವೆಂಬರ್ 3ರಂದು ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಹೊರತುಪಡಿಸಿ ಇತರ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ವಿನಾಯಿತಿ ನೀಡಲು ಈ ಹಿಂದೆಯೂ ನಿರಾಕರಿಸಿತ್ತು. ಈಗ, ಈ ಮಾತನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಸಂದೀಪ ಮೆಹ್ತಾ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿತು.</p>.<p>ಅಕ್ಟೋಬರ್ 22ರಂದು ನ್ಯಾಯಾಲಯ ನೀಡಿದ್ದ ಆದೇಶದನ್ವಯ ಕೆಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಆದೇಶ ಪಾಲನೆ ಮಾಡಿರುವ ಕುರಿತು ಅಕ್ಟೋಬರ್ 27ರ ಒಳಗಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಲಾಗಿತ್ತು. ಪಶ್ಚಿಮ ಬಂಗಾಳ, ತೆಲಂಗಾಣ ಹಾಗೂ ದೆಹಲಿ ನಗರ ಪಾಲಿಕೆ ಮಾತ್ರ ಪ್ರಮಾಣಪತ್ರ ಸಲ್ಲಿಸಿವೆ’ ಎಂದು ನ್ಯಾಯಪೀಠ ಹೇಳಿತು.</p>.<p>ವಿಚಾರಣೆ ವೇಳೆ, ‘ನವೆಂಬರ್ 3ರಂದು ನಡೆಯುವ ವಿಚಾರಣೆಗೆ ಮುಖ್ಯ ಕಾರ್ಯದರ್ಶಿಗಳು ವರ್ಚುವಲ್ ಆಗಿ ಹಾಜರಾಗುವುದಕ್ಕೆ ಅನುಮತಿ ನೀಡಬೇಕು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರಿದರು.</p>.<p>ಆಗ, ‘ಮುಖ್ಯ ಕಾರ್ಯದರ್ಶಿಗಳು ಖುದ್ದಾಗಿ ಹಾಜರಾಗಬೇಕು’ ಎಂದು ನ್ಯಾಯಮೂರ್ತಿ ವಿಕ್ರಮನಾಥ್ ಹೇಳಿದರು.</p>.<p>‘ನ್ಯಾಯಾಲಯದ ಆದೇಶಕ್ಕೆ ಗೌರವವೇ ಇಲ್ಲ. ಅವರು ಖುದ್ದು ಹಾಜರಾಗಿ, ಯಾಕೆ ಪ್ರಮಾಣಪತ್ರ ಸಲ್ಲಿಸಿಲ್ಲ ಎಂಬುದಕ್ಕೆ ವಿವರಣೆ ನೀಡಲಿ’ ಎಂದರು.</p>.<div><blockquote>ಬೀದಿ ನಾಯಿಗಳ ಸಮಸ್ಯೆಯನ್ನು ರಾಜ್ಯ ಸರ್ಕಾರಗಳು ಪಾಲಿಕೆಗಳು ಬಗೆಹರಿಸಬೇಕು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತನ್ನ ಸಮಯ ವ್ಯರ್ಥಮಾಡುತ್ತಿರುವುದು ದುರದೃಷ್ಟಕರ </blockquote><span class="attribution">ನ್ಯಾಯಮೂರ್ತಿ ವಿಕ್ರಮನಾಥ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನ್ಯಾಯಾಲಯಗಳ ಆದೇಶಕ್ಕೆ ಗೌರವ ಇಲ್ಲವೇ?’ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಬೀದಿ ನಾಯಿಗಳ ಹಾವಳಿಗೆ ಸಂಬಂಧಿಸಿದಂತೆ ನವೆಂಬರ್ 3ರಂದು ನಡೆಯುವ ಪ್ರಕರಣದ ವಿಚಾರಣೆಗೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಖುದ್ದು ಹಾಜರಿರಬೇಕು’ ಎಂದು ಶುಕ್ರವಾರ ಸೂಚಿಸಿದೆ.</p>.<p>ನವೆಂಬರ್ 3ರಂದು ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಹೊರತುಪಡಿಸಿ ಇತರ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ವಿನಾಯಿತಿ ನೀಡಲು ಈ ಹಿಂದೆಯೂ ನಿರಾಕರಿಸಿತ್ತು. ಈಗ, ಈ ಮಾತನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಸಂದೀಪ ಮೆಹ್ತಾ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿತು.</p>.<p>ಅಕ್ಟೋಬರ್ 22ರಂದು ನ್ಯಾಯಾಲಯ ನೀಡಿದ್ದ ಆದೇಶದನ್ವಯ ಕೆಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಆದೇಶ ಪಾಲನೆ ಮಾಡಿರುವ ಕುರಿತು ಅಕ್ಟೋಬರ್ 27ರ ಒಳಗಾಗಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಲಾಗಿತ್ತು. ಪಶ್ಚಿಮ ಬಂಗಾಳ, ತೆಲಂಗಾಣ ಹಾಗೂ ದೆಹಲಿ ನಗರ ಪಾಲಿಕೆ ಮಾತ್ರ ಪ್ರಮಾಣಪತ್ರ ಸಲ್ಲಿಸಿವೆ’ ಎಂದು ನ್ಯಾಯಪೀಠ ಹೇಳಿತು.</p>.<p>ವಿಚಾರಣೆ ವೇಳೆ, ‘ನವೆಂಬರ್ 3ರಂದು ನಡೆಯುವ ವಿಚಾರಣೆಗೆ ಮುಖ್ಯ ಕಾರ್ಯದರ್ಶಿಗಳು ವರ್ಚುವಲ್ ಆಗಿ ಹಾಜರಾಗುವುದಕ್ಕೆ ಅನುಮತಿ ನೀಡಬೇಕು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರಿದರು.</p>.<p>ಆಗ, ‘ಮುಖ್ಯ ಕಾರ್ಯದರ್ಶಿಗಳು ಖುದ್ದಾಗಿ ಹಾಜರಾಗಬೇಕು’ ಎಂದು ನ್ಯಾಯಮೂರ್ತಿ ವಿಕ್ರಮನಾಥ್ ಹೇಳಿದರು.</p>.<p>‘ನ್ಯಾಯಾಲಯದ ಆದೇಶಕ್ಕೆ ಗೌರವವೇ ಇಲ್ಲ. ಅವರು ಖುದ್ದು ಹಾಜರಾಗಿ, ಯಾಕೆ ಪ್ರಮಾಣಪತ್ರ ಸಲ್ಲಿಸಿಲ್ಲ ಎಂಬುದಕ್ಕೆ ವಿವರಣೆ ನೀಡಲಿ’ ಎಂದರು.</p>.<div><blockquote>ಬೀದಿ ನಾಯಿಗಳ ಸಮಸ್ಯೆಯನ್ನು ರಾಜ್ಯ ಸರ್ಕಾರಗಳು ಪಾಲಿಕೆಗಳು ಬಗೆಹರಿಸಬೇಕು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತನ್ನ ಸಮಯ ವ್ಯರ್ಥಮಾಡುತ್ತಿರುವುದು ದುರದೃಷ್ಟಕರ </blockquote><span class="attribution">ನ್ಯಾಯಮೂರ್ತಿ ವಿಕ್ರಮನಾಥ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>