<p><strong>ನವದೆಹಲಿ:</strong> 'ದೇಗುಲದ ಹಣ ದೇವರಿಗೆ ಸೇರಿದ್ದಾಗಿದೆ. ಆ ಹಣವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್ಗಳನ್ನು ಉಳಿಸಲು ಬಳಕೆ ಮಾಡುವಂತಿಲ್ಲ' ಎಂದು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಹೇಳಿದೆ. </p><p>ತಿರುನೆಲ್ಲಿ ದೇವಸ್ಥಾನ ದೇವಸ್ವಂಗೆ ಠೇವಣಿ ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಕೆಲವು ಸಹಕಾರಿ ಬ್ಯಾಂಕ್ಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು. </p>.SIR | ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ತೊಂದರೆ ನಿವಾರಿಸಿ: ಸುಪ್ರೀಂ ಕೋರ್ಟ್.ಅಧಿಕಾರಿಗಳ ಸಂಗಾತಿಗೆ ಹುದ್ದೆ: ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<p>'ದೇಗುಲದ ಹಣದಿಂದ ಬ್ಯಾಂಕ್ ಉಳಿಸಲು ಬಳಸಬೇಕೇ? ಬ್ಯಾಂಕ್ಗಳು ಜನರ ವಿಶ್ವಾಸವನ್ನು ಗಳಿಸಬೇಕು. ಗ್ರಾಹಕರನ್ನು ಹಾಗೂ ಠೇವಣಿಗಳನ್ನು ಆಕರ್ಷಿಸಲು ಸಾಧ್ಯವಾಗದಿದ್ದರೆ ಅದು ನಿಮ್ಮ ಸಮಸ್ಯೆ' ಎಂದು ಅರ್ಜಿಯನ್ನು ತಿರಸ್ಕರಿಸಿದೆ. </p><p>'ದೇಗುಲದ ಹಣ ದೇವರಿಗೆ ಸೇರಿದ್ದಾಗಿದೆ. ಸಹಕಾರಿ ಬ್ಯಾಂಕ್ಗಳ ಆದಾಯ ಅಥವಾ ರಕ್ಷಣೆಗೆ ಮೂಲವಾಗಲು ಸಾಧ್ಯವಿಲ್ಲ. ಅದರ ಹಣವನ್ನು ದೇವಾಲಯದ ಹಿತಾಸಕ್ತಿಗಾಗಿ ಮಾತ್ರ ಉಳಿತಾಯ ಮಾಡಬೇಕು ಮತ್ತು ಬಳಸಬೇಕು' ಎಂದು ಅಭಿಪ್ರಾಯಪಟ್ಟಿತು. </p><p>ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾನಂತವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ತಿರುನೆಲ್ಲಿ ಸರ್ವಿಸ್ ಕೋ-ಆಪರೇಟಿಂಗ್ ಬ್ಯಾಂಕ್ ಲಿಮಿಟೆಡ್ ಮೇಲ್ಮನವಿಯನ್ನು ಸಲ್ಲಿಸಿತ್ತು. </p><p>ದೇವಸ್ಥಾನದ ಸ್ಥಿರ ಠೇವಣಿ ಮರುಪಾವತಿಸಲು ಸಹಕಾರಿ ಬ್ಯಾಂಕ್ಗಳು ನಿರಾಕರಿಸಿದ ಕಾರಣ ತಿರುನೆಲ್ಲಿ ದೇವಸ್ವಂ ಕೋರ್ಟ್ ಮೆಟ್ಟಿಲೇರಿತ್ತು. ಅಲ್ಲದೆ ಎರಡು ತಿಂಗಳೊಳಗೆ ಹಣ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ದೇಗುಲದ ಹಣ ದೇವರಿಗೆ ಸೇರಿದ್ದಾಗಿದೆ. ಆ ಹಣವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್ಗಳನ್ನು ಉಳಿಸಲು ಬಳಕೆ ಮಾಡುವಂತಿಲ್ಲ' ಎಂದು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಹೇಳಿದೆ. </p><p>ತಿರುನೆಲ್ಲಿ ದೇವಸ್ಥಾನ ದೇವಸ್ವಂಗೆ ಠೇವಣಿ ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಕೆಲವು ಸಹಕಾರಿ ಬ್ಯಾಂಕ್ಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು. </p>.SIR | ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ತೊಂದರೆ ನಿವಾರಿಸಿ: ಸುಪ್ರೀಂ ಕೋರ್ಟ್.ಅಧಿಕಾರಿಗಳ ಸಂಗಾತಿಗೆ ಹುದ್ದೆ: ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ.<p>'ದೇಗುಲದ ಹಣದಿಂದ ಬ್ಯಾಂಕ್ ಉಳಿಸಲು ಬಳಸಬೇಕೇ? ಬ್ಯಾಂಕ್ಗಳು ಜನರ ವಿಶ್ವಾಸವನ್ನು ಗಳಿಸಬೇಕು. ಗ್ರಾಹಕರನ್ನು ಹಾಗೂ ಠೇವಣಿಗಳನ್ನು ಆಕರ್ಷಿಸಲು ಸಾಧ್ಯವಾಗದಿದ್ದರೆ ಅದು ನಿಮ್ಮ ಸಮಸ್ಯೆ' ಎಂದು ಅರ್ಜಿಯನ್ನು ತಿರಸ್ಕರಿಸಿದೆ. </p><p>'ದೇಗುಲದ ಹಣ ದೇವರಿಗೆ ಸೇರಿದ್ದಾಗಿದೆ. ಸಹಕಾರಿ ಬ್ಯಾಂಕ್ಗಳ ಆದಾಯ ಅಥವಾ ರಕ್ಷಣೆಗೆ ಮೂಲವಾಗಲು ಸಾಧ್ಯವಿಲ್ಲ. ಅದರ ಹಣವನ್ನು ದೇವಾಲಯದ ಹಿತಾಸಕ್ತಿಗಾಗಿ ಮಾತ್ರ ಉಳಿತಾಯ ಮಾಡಬೇಕು ಮತ್ತು ಬಳಸಬೇಕು' ಎಂದು ಅಭಿಪ್ರಾಯಪಟ್ಟಿತು. </p><p>ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾನಂತವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ತಿರುನೆಲ್ಲಿ ಸರ್ವಿಸ್ ಕೋ-ಆಪರೇಟಿಂಗ್ ಬ್ಯಾಂಕ್ ಲಿಮಿಟೆಡ್ ಮೇಲ್ಮನವಿಯನ್ನು ಸಲ್ಲಿಸಿತ್ತು. </p><p>ದೇವಸ್ಥಾನದ ಸ್ಥಿರ ಠೇವಣಿ ಮರುಪಾವತಿಸಲು ಸಹಕಾರಿ ಬ್ಯಾಂಕ್ಗಳು ನಿರಾಕರಿಸಿದ ಕಾರಣ ತಿರುನೆಲ್ಲಿ ದೇವಸ್ವಂ ಕೋರ್ಟ್ ಮೆಟ್ಟಿಲೇರಿತ್ತು. ಅಲ್ಲದೆ ಎರಡು ತಿಂಗಳೊಳಗೆ ಹಣ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>