<p><strong>ನವದೆಹಲಿ</strong>: ಪೌರತ್ವ ತಿದ್ಡುಪಡಿ ಕಾಯ್ದೆ-2019 (ಸಿಎಎ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸೇರಿದಂತೆ 200 ಅರ್ಜಿಗಳ ಅಂತಿಮ ವಿಚಾರಣೆಯನ್ನು ಮೇ 5ರಿಂದ ಆರಂಭಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>2014ರ ಡಿಸೆಂಬರ್ 31ಕ್ಕೂ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಹಿಂದೂ, ಸಿಖ್, ಬೌದ್ಧರು, ಕ್ರೈಸ್ತರು, ಜೈನ್ ಹಾಗೂ ಪಾರ್ಸಿ ಸಮುದಾಯಗಳಿಗೆ ಸಿಎಎ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಭಾರತದ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.</p>.<p>2019–2020ರಿಂದ ಬಾಕಿ ಉಳಿದಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಮೇ 5ರಿಂದ ಆರಂಭಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿಪುಲ್ ಎಂ.ಪಾಂಚೋಲಿ ಪೀಠವು ತಿಳಿಸಿದೆ. </p>.<p class="bodytext">ಐಯುಎಂಎಲ್ ಅರ್ಜಿದಾರರ ಅರ್ಜಿ ವಿಚಾರಣೆಯನ್ನು ಒಂದೂವರೆ ದಿನಗಳ ನಡೆಸುವುದಾಗಿ ತಿಳಿಸಿದ ನ್ಯಾಯಪೀಠ, ಈ ವಿಚಾರದ ಕುರಿತು ಕೇಂದ್ರಕ್ಕೆ ವಾದ ಮಂಡಿಸಲು ಒಂದು ದಿನ ಕಾಲಾವಕಾಶ ನೀಡುವುದಾಗಿ ತಿಳಿಸಿದೆ. ಎರಡು ಕಡೆಗಳ ಅರ್ಜಿಯನ್ನು ಪೀಠವು ಮೇ 12ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.</p>.<p class="bodytext">ಹೆಚ್ಚುವರಿ ದಾಖಲೆಗಳನ್ನು ನಾಲ್ಕು ವಾರಗಳ ಒಳಗಾಗಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ನ್ಯಾಯಾಲಯವು ಸೂಚಿಸಿದೆ. </p>.<p class="bodytext">ಇಡೀ ದೇಶಕ್ಕೆ ಅನ್ವಯಿಸುವ ಅರ್ಜಿಯನ್ನು ಮೊದಲು ಆಲಿಸುವುದಾಗಿ ತಿಳಿಸಿದ ನ್ಯಾಯಪೀಠ, ಇದಾದ ಬಳಿಕ ಅಸ್ಸಾಂ ಹಾಗೂ ತ್ರಿಪುರಾಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುವುದಾಗಿ ತಿಳಿಸಿತು.</p>.<p class="bodytext">ಅಸ್ಸಾಂನ ಸಮಸ್ಯೆ ದೇಶದ ಉಳಿದ ಭಾಗಗಳಿಗೆ ಹೋಲಿಸಿದರೆ, ಭಿನ್ನವಾಗಿದೆ. ಪೌರತ್ವ ಪಡೆಯಲು ಇಲ್ಲಿ 1971ರ ಮಾರ್ಚ್ 24 ಕಟ್–ಆಫ್ ದಿನಾಂಕ ನಿಗದಿಪಡಿಸಲಾಗಿತ್ತು, ಸಿಎಎನ ಅಡಿಯಲ್ಲಿ 2014ರ ಮಾರ್ಚ್ 31ರವರೆಗೆ ಕಟ್–ಆಫ್ ದಿನಾಂಕ ವಿಸ್ತರಿಸಲಾಗಿದೆ. </p>.<p class="bodytext">ಸಿಎಎ ಪೌರತ್ವ ನಿಯಮಗಳಿಗೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಪೀಠವು 2024ರ ಮಾರ್ಚ್ 19ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಆ ಸಂದರ್ಭದಲ್ಲಿ ಈ ಅರ್ಜಿಯನ್ನು ಕೊನೆಯದಾಗಿ ವಿಚಾರಣೆ ನಡೆಸಲಾಗಿತ್ತು. ಆದಾಗ್ಯೂ, ಅರ್ಜಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲರ ಅರ್ಜಿಯ ಕೋರಿಕೆಯಂತೆ, ಸಿಎಎಗೆ ಪರಿಣಾಮ ಬೀರುವ ನಿಯಮಗಳ ಮೇಲಿನ ಕಾರ್ಯಾಚರಣೆಯನ್ನು ತಡೆಹಿಡಿಯಲು ನ್ಯಾಯಪೀಠ ನಿರಾಕರಿಸಿತು.</p>.<p class="bodytext">ರಾಷ್ಟ್ರಪತಿಯವರು 2019ರ ಡಿಸೆಂಬರ್ 12ರಂದು ಸಿಎಎ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ನೀಡಿದ ನಂತರ ಕಾಯ್ದೆಯಾಗಿ ಮಾರ್ಪಟ್ಟಿದೆ. </p>.<p class="bodytext">ಸಿಎಎ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ 200 ಅರ್ಜಿಗಳು ಸಲ್ಲಿಕೆಯಾಗಿವೆ.</p>.<p class="bodytext">ಇದರಲ್ಲಿ ಐಯುಎಂಎಲ್ ಮಾತ್ರವಲ್ಲದೇ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಆರ್ಜೆಡಿ ನಾಯಕ ಮನೋಜ್ ಜಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಾಗೂ ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಅರ್ಜಿ ಸಲ್ಲಿಸಿದ ಪ್ರಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೌರತ್ವ ತಿದ್ಡುಪಡಿ ಕಾಯ್ದೆ-2019 (ಸಿಎಎ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸೇರಿದಂತೆ 200 ಅರ್ಜಿಗಳ ಅಂತಿಮ ವಿಚಾರಣೆಯನ್ನು ಮೇ 5ರಿಂದ ಆರಂಭಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>2014ರ ಡಿಸೆಂಬರ್ 31ಕ್ಕೂ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಹಿಂದೂ, ಸಿಖ್, ಬೌದ್ಧರು, ಕ್ರೈಸ್ತರು, ಜೈನ್ ಹಾಗೂ ಪಾರ್ಸಿ ಸಮುದಾಯಗಳಿಗೆ ಸಿಎಎ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಭಾರತದ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ.</p>.<p>2019–2020ರಿಂದ ಬಾಕಿ ಉಳಿದಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಮೇ 5ರಿಂದ ಆರಂಭಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿಪುಲ್ ಎಂ.ಪಾಂಚೋಲಿ ಪೀಠವು ತಿಳಿಸಿದೆ. </p>.<p class="bodytext">ಐಯುಎಂಎಲ್ ಅರ್ಜಿದಾರರ ಅರ್ಜಿ ವಿಚಾರಣೆಯನ್ನು ಒಂದೂವರೆ ದಿನಗಳ ನಡೆಸುವುದಾಗಿ ತಿಳಿಸಿದ ನ್ಯಾಯಪೀಠ, ಈ ವಿಚಾರದ ಕುರಿತು ಕೇಂದ್ರಕ್ಕೆ ವಾದ ಮಂಡಿಸಲು ಒಂದು ದಿನ ಕಾಲಾವಕಾಶ ನೀಡುವುದಾಗಿ ತಿಳಿಸಿದೆ. ಎರಡು ಕಡೆಗಳ ಅರ್ಜಿಯನ್ನು ಪೀಠವು ಮೇ 12ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.</p>.<p class="bodytext">ಹೆಚ್ಚುವರಿ ದಾಖಲೆಗಳನ್ನು ನಾಲ್ಕು ವಾರಗಳ ಒಳಗಾಗಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ನ್ಯಾಯಾಲಯವು ಸೂಚಿಸಿದೆ. </p>.<p class="bodytext">ಇಡೀ ದೇಶಕ್ಕೆ ಅನ್ವಯಿಸುವ ಅರ್ಜಿಯನ್ನು ಮೊದಲು ಆಲಿಸುವುದಾಗಿ ತಿಳಿಸಿದ ನ್ಯಾಯಪೀಠ, ಇದಾದ ಬಳಿಕ ಅಸ್ಸಾಂ ಹಾಗೂ ತ್ರಿಪುರಾಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುವುದಾಗಿ ತಿಳಿಸಿತು.</p>.<p class="bodytext">ಅಸ್ಸಾಂನ ಸಮಸ್ಯೆ ದೇಶದ ಉಳಿದ ಭಾಗಗಳಿಗೆ ಹೋಲಿಸಿದರೆ, ಭಿನ್ನವಾಗಿದೆ. ಪೌರತ್ವ ಪಡೆಯಲು ಇಲ್ಲಿ 1971ರ ಮಾರ್ಚ್ 24 ಕಟ್–ಆಫ್ ದಿನಾಂಕ ನಿಗದಿಪಡಿಸಲಾಗಿತ್ತು, ಸಿಎಎನ ಅಡಿಯಲ್ಲಿ 2014ರ ಮಾರ್ಚ್ 31ರವರೆಗೆ ಕಟ್–ಆಫ್ ದಿನಾಂಕ ವಿಸ್ತರಿಸಲಾಗಿದೆ. </p>.<p class="bodytext">ಸಿಎಎ ಪೌರತ್ವ ನಿಯಮಗಳಿಗೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಪೀಠವು 2024ರ ಮಾರ್ಚ್ 19ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಆ ಸಂದರ್ಭದಲ್ಲಿ ಈ ಅರ್ಜಿಯನ್ನು ಕೊನೆಯದಾಗಿ ವಿಚಾರಣೆ ನಡೆಸಲಾಗಿತ್ತು. ಆದಾಗ್ಯೂ, ಅರ್ಜಿಗಳನ್ನು ಪ್ರತಿನಿಧಿಸುವ ಹಿರಿಯ ವಕೀಲರ ಅರ್ಜಿಯ ಕೋರಿಕೆಯಂತೆ, ಸಿಎಎಗೆ ಪರಿಣಾಮ ಬೀರುವ ನಿಯಮಗಳ ಮೇಲಿನ ಕಾರ್ಯಾಚರಣೆಯನ್ನು ತಡೆಹಿಡಿಯಲು ನ್ಯಾಯಪೀಠ ನಿರಾಕರಿಸಿತು.</p>.<p class="bodytext">ರಾಷ್ಟ್ರಪತಿಯವರು 2019ರ ಡಿಸೆಂಬರ್ 12ರಂದು ಸಿಎಎ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ನೀಡಿದ ನಂತರ ಕಾಯ್ದೆಯಾಗಿ ಮಾರ್ಪಟ್ಟಿದೆ. </p>.<p class="bodytext">ಸಿಎಎ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ 200 ಅರ್ಜಿಗಳು ಸಲ್ಲಿಕೆಯಾಗಿವೆ.</p>.<p class="bodytext">ಇದರಲ್ಲಿ ಐಯುಎಂಎಲ್ ಮಾತ್ರವಲ್ಲದೇ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಆರ್ಜೆಡಿ ನಾಯಕ ಮನೋಜ್ ಜಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಾಗೂ ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಅರ್ಜಿ ಸಲ್ಲಿಸಿದ ಪ್ರಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>