ಅರ್ಜಿಯ ವಿಚಾರಣೆಯನ್ನು ಶೀಘ್ರವೇ ನಡೆಸಬೇಕೆಂದು ಉದ್ಧವ್ ಬಣದ ಪರ ವಕೀಲ ಕಪಿಲ್ ಸಿಬಲ್ ಅವರುಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದರು. ಅವರ ಮನವಿ ಪುರಸ್ಕರಿಸಿದ ಪೀಠವುಉದ್ಧವ್ ಬಣದ ಅರ್ಜಿ ಹಾಗೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 1ರಂದು ನಡೆಸಲು ಒಪ್ಪಿತು.