<p>ನವದೆಹಲಿ: ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿದ ಸ್ವಯಂಪ್ರೇರಿತ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 18ಕ್ಕೆ ನಡೆಸಲಿದೆ.</p>.ಪ್ರಜಾತಂತ್ರಕ್ಕೆ ಅಡ್ಡಿಯಾಗಲು ಅವಕಾಶ ಇಲ್ಲ: ಸುಪ್ರೀಂ ಕೋರ್ಟ್.<p>ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ ಹಾಗೂ ಅಭಯ್ ಎಸ್.ಓಕಾ ಅವರಿದ್ದ ವಿಶೇಷ ಪೀಠ, ಈ ಅರ್ಜಿಯ ವಿಚಾರಣೆ ನಡೆಸಲಿದೆ.</p><p>ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p><p>ಫೆಬ್ರುವರಿ 20ರಂದು ಲೋಕಪಾಲ ಆದೇಶಕ್ಕೆ ತಡೆ ನೀಡಿತ್ತು.</p><p>‘ಇಂಥ ನಡೆ ಆತಂಕ ಮೂಡಿಸುವಂಥದು ಹಾಗೂ ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಚಿಂತೆಗೀಡು ಮಾಡುವಂತಹವುದಾಗಿದೆ’ ಎಂದೂ ಹೇಳಿದೆ.</p><p>ಈ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ, ಲೋಕಪಾಲ ರಿಜಿಸ್ಟ್ರಾರ್ ಹಾಗೂ ಹೈಕೋರ್ಟ್ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೆ ಪೀಠವು ನೋಟಿಸ್ ಜಾರಿ ಮಾಡಿತ್ತು.</p>.ಪರೀಕ್ಷೆಯ ಪಾವಿತ್ರ್ಯ ಹಾಳು: ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<p>ಅಲ್ಲದೇ, ದೂರು ನೀಡಿರುವ ವ್ಯಕ್ತಿಯು ಹೆಚ್ಚುವರಿ ನ್ಯಾಯಮೂರ್ತಿಯ ಹೆಸರು ಬಹಿರಂಗಪಡಿಸುವುದನ್ನು ನಿರ್ಬಂಧಿಸಿ ಮಧ್ಯಂತರ ತಡೆಯಾಜ್ಞೆ ನೀಡಿದ ಪೀಠವು, ದೂರನ್ನು ಗೌಪ್ಯವಾಗಿಡುವಂತೆಯೂ ದೂರುದಾರನಿಗೆ ನಿರ್ದೇಶನ ನೀಡಿತ್ತು.</p><p>ವಿಚಾರಣೆ ವೇಳೆ, ‘ಹೈಕೋರ್ಟ್ ನ್ಯಾಯಮೂರ್ತಿಗಳು, ‘ಲೋಕಪಾಲ ಹಾಗೂ ಲೋಕಾಯುಕ್ತರ ಕಾಯ್ದೆ–2013’ರ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪೀಠಕ್ಕೆ ತಿಳಿಸಿದ್ದರು,</p><p>‘ಈ ವಿಚಾರ ಕುರಿತು ಸಿಜೆಐ ನೀಡುವ ನಿರ್ದೇಶನಗಳಿಗೆ ಕಾಯೋಣ’ ಎಂದ ಪೀಠವು, ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿತ್ತು.</p>.ಅಪಘಾತ ವಿಮೆ ದುರ್ಬಳಕೆ: ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ . <h2>ಪ್ರಕರಣವೇನು?</h2><p>ದೂರುದಾರನ ವಿರುದ್ಧ ಖಾಸಗಿ ಕಂಪನಿಯೊಂದು ಪ್ರಕರಣ ದಾಖಲಿಸಿತ್ತು. ಹೈಕೋರ್ಟ್ವೊಂದರ ನ್ಯಾಯಮೂರ್ತಿಯೊಬ್ಬರು ಈ ಅರ್ಜಿ ವಿಚಾರಣೆ ನಡೆಸಬೇಕಿತ್ತು.</p><p>ಕಂಪನಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ, ಹೈಕೋರ್ಟ್ವೊಂದರ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಯೊಬ್ಬರು, ಜಿಲ್ಲಾ ನ್ಯಾಯಾಲಯವೊಂದರ ಹೆಚ್ಚುವರಿ ನ್ಯಾಯಾಧೀಶ ಹಾಗೂ ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್ನ ನ್ಯಾಯಮೂರ್ತಿ ಮೇಲೆ ಪ್ರಭಾವ ಬೀರಿದ್ದರು ಎಂದು ಅರ್ಜಿದಾರ ಎರಡು ಪ್ರತ್ಯೇಕ ದೂರು ದಾಖಲಿಸಿದ್ದರು.</p><p>ಈ ದೂರುಗಳನ್ನು ಪರಿಗಣಿಸಿದ್ದ ಲೋಕಪಾಲ, ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜ.27ರಂದು ಆದೇಶ ಹೊರಡಿಸಿತ್ತು.</p> .ಆಸ್ಪತ್ರೆಗಳಲ್ಲಿ ಸುಲಿಗೆ | ನೀತಿ ರೂಪಿಸುವ ಹೊಣೆ ರಾಜ್ಯಗಳದ್ದು: ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿದ ಸ್ವಯಂಪ್ರೇರಿತ ದೂರಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 18ಕ್ಕೆ ನಡೆಸಲಿದೆ.</p>.ಪ್ರಜಾತಂತ್ರಕ್ಕೆ ಅಡ್ಡಿಯಾಗಲು ಅವಕಾಶ ಇಲ್ಲ: ಸುಪ್ರೀಂ ಕೋರ್ಟ್.<p>ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ ಹಾಗೂ ಅಭಯ್ ಎಸ್.ಓಕಾ ಅವರಿದ್ದ ವಿಶೇಷ ಪೀಠ, ಈ ಅರ್ಜಿಯ ವಿಚಾರಣೆ ನಡೆಸಲಿದೆ.</p><p>ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p><p>ಫೆಬ್ರುವರಿ 20ರಂದು ಲೋಕಪಾಲ ಆದೇಶಕ್ಕೆ ತಡೆ ನೀಡಿತ್ತು.</p><p>‘ಇಂಥ ನಡೆ ಆತಂಕ ಮೂಡಿಸುವಂಥದು ಹಾಗೂ ನ್ಯಾಯಾಂಗದ ಸ್ವಾತಂತ್ರ್ಯದ ಕುರಿತು ಚಿಂತೆಗೀಡು ಮಾಡುವಂತಹವುದಾಗಿದೆ’ ಎಂದೂ ಹೇಳಿದೆ.</p><p>ಈ ವಿಚಾರವಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ, ಲೋಕಪಾಲ ರಿಜಿಸ್ಟ್ರಾರ್ ಹಾಗೂ ಹೈಕೋರ್ಟ್ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೆ ಪೀಠವು ನೋಟಿಸ್ ಜಾರಿ ಮಾಡಿತ್ತು.</p>.ಪರೀಕ್ಷೆಯ ಪಾವಿತ್ರ್ಯ ಹಾಳು: ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್.<p>ಅಲ್ಲದೇ, ದೂರು ನೀಡಿರುವ ವ್ಯಕ್ತಿಯು ಹೆಚ್ಚುವರಿ ನ್ಯಾಯಮೂರ್ತಿಯ ಹೆಸರು ಬಹಿರಂಗಪಡಿಸುವುದನ್ನು ನಿರ್ಬಂಧಿಸಿ ಮಧ್ಯಂತರ ತಡೆಯಾಜ್ಞೆ ನೀಡಿದ ಪೀಠವು, ದೂರನ್ನು ಗೌಪ್ಯವಾಗಿಡುವಂತೆಯೂ ದೂರುದಾರನಿಗೆ ನಿರ್ದೇಶನ ನೀಡಿತ್ತು.</p><p>ವಿಚಾರಣೆ ವೇಳೆ, ‘ಹೈಕೋರ್ಟ್ ನ್ಯಾಯಮೂರ್ತಿಗಳು, ‘ಲೋಕಪಾಲ ಹಾಗೂ ಲೋಕಾಯುಕ್ತರ ಕಾಯ್ದೆ–2013’ರ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪೀಠಕ್ಕೆ ತಿಳಿಸಿದ್ದರು,</p><p>‘ಈ ವಿಚಾರ ಕುರಿತು ಸಿಜೆಐ ನೀಡುವ ನಿರ್ದೇಶನಗಳಿಗೆ ಕಾಯೋಣ’ ಎಂದ ಪೀಠವು, ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಿತ್ತು.</p>.ಅಪಘಾತ ವಿಮೆ ದುರ್ಬಳಕೆ: ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ . <h2>ಪ್ರಕರಣವೇನು?</h2><p>ದೂರುದಾರನ ವಿರುದ್ಧ ಖಾಸಗಿ ಕಂಪನಿಯೊಂದು ಪ್ರಕರಣ ದಾಖಲಿಸಿತ್ತು. ಹೈಕೋರ್ಟ್ವೊಂದರ ನ್ಯಾಯಮೂರ್ತಿಯೊಬ್ಬರು ಈ ಅರ್ಜಿ ವಿಚಾರಣೆ ನಡೆಸಬೇಕಿತ್ತು.</p><p>ಕಂಪನಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ, ಹೈಕೋರ್ಟ್ವೊಂದರ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಯೊಬ್ಬರು, ಜಿಲ್ಲಾ ನ್ಯಾಯಾಲಯವೊಂದರ ಹೆಚ್ಚುವರಿ ನ್ಯಾಯಾಧೀಶ ಹಾಗೂ ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್ನ ನ್ಯಾಯಮೂರ್ತಿ ಮೇಲೆ ಪ್ರಭಾವ ಬೀರಿದ್ದರು ಎಂದು ಅರ್ಜಿದಾರ ಎರಡು ಪ್ರತ್ಯೇಕ ದೂರು ದಾಖಲಿಸಿದ್ದರು.</p><p>ಈ ದೂರುಗಳನ್ನು ಪರಿಗಣಿಸಿದ್ದ ಲೋಕಪಾಲ, ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜ.27ರಂದು ಆದೇಶ ಹೊರಡಿಸಿತ್ತು.</p> .ಆಸ್ಪತ್ರೆಗಳಲ್ಲಿ ಸುಲಿಗೆ | ನೀತಿ ರೂಪಿಸುವ ಹೊಣೆ ರಾಜ್ಯಗಳದ್ದು: ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>