<p><strong>ನವದೆಹಲಿ:</strong> ಪ್ರಸ್ತುತ ಜೋಧಪುರ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.</p>.<p>ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ಪೀಠವು ಈ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p>.<p>‘ಅರಬ್ ವಸಂತದಂತೆ (ಅರಬ್ ಕ್ರಾಂತಿ) ಸರ್ಕಾರವನ್ನು ಉರುಳಿಸುವ ಹೇಳಿಕೆಯನ್ನು ನಾನು ನೀಡಿಲ್ಲ’ ಎಂದು ಜನವರಿ 29ರಂದು ಹೇಳಿದ್ದ ವಾಂಗ್ಚೂಕ್ ಅವರು, ಪ್ರಜಾಪ್ರಭುತ್ವದಲ್ಲಿ ತನಗೆ ಟೀಕಿಸುವ ಮತ್ತು ಪ್ರತಿಭಟಿಸುವ ಹಕ್ಕು ಇದೆ ಎಂದು ಒತ್ತಿ ಹೇಳಿದ್ದಾರೆ.</p>.<p>ಸೊನಮ್ ಅವರ ಪತ್ನಿಯ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಬಂಧನವನ್ನು ಸಮರ್ಥಿಸಲು ‘ಆಯ್ದ ವಿಡಿಯೊವನ್ನು’ ಅವಲಂಬಿಸಿದ್ದಾರೆ ಎಂದು ವಾದಿಸಿದ್ದಾರೆ.</p>.<p>ನವೆಂಬರ್ 24ರಂದು ಕೇಂದ್ರ ಸರ್ಕಾರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆಂಗ್ಮೋ ಸಲ್ಲಿಸಿದ್ದ ಪ್ರತಿವಾದಕ್ಕೆ ಪ್ರತಿಕ್ರಿಯಿಸಲು ಸಮಯಾವಕಾಶ ಕೋರಿದ್ದರು. ಹಾಗಾಗಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಸ್ತುತ ಜೋಧಪುರ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.</p>.<p>ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ಪೀಠವು ಈ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p>.<p>‘ಅರಬ್ ವಸಂತದಂತೆ (ಅರಬ್ ಕ್ರಾಂತಿ) ಸರ್ಕಾರವನ್ನು ಉರುಳಿಸುವ ಹೇಳಿಕೆಯನ್ನು ನಾನು ನೀಡಿಲ್ಲ’ ಎಂದು ಜನವರಿ 29ರಂದು ಹೇಳಿದ್ದ ವಾಂಗ್ಚೂಕ್ ಅವರು, ಪ್ರಜಾಪ್ರಭುತ್ವದಲ್ಲಿ ತನಗೆ ಟೀಕಿಸುವ ಮತ್ತು ಪ್ರತಿಭಟಿಸುವ ಹಕ್ಕು ಇದೆ ಎಂದು ಒತ್ತಿ ಹೇಳಿದ್ದಾರೆ.</p>.<p>ಸೊನಮ್ ಅವರ ಪತ್ನಿಯ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಬಂಧನವನ್ನು ಸಮರ್ಥಿಸಲು ‘ಆಯ್ದ ವಿಡಿಯೊವನ್ನು’ ಅವಲಂಬಿಸಿದ್ದಾರೆ ಎಂದು ವಾದಿಸಿದ್ದಾರೆ.</p>.<p>ನವೆಂಬರ್ 24ರಂದು ಕೇಂದ್ರ ಸರ್ಕಾರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆಂಗ್ಮೋ ಸಲ್ಲಿಸಿದ್ದ ಪ್ರತಿವಾದಕ್ಕೆ ಪ್ರತಿಕ್ರಿಯಿಸಲು ಸಮಯಾವಕಾಶ ಕೋರಿದ್ದರು. ಹಾಗಾಗಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>