‘ಚುನಾವಣೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ನೀಡಿ ಎಂದು ನಾವು ಆದೇಶಿಸಲಾಗುವುದಿಲ್ಲ. ಇದೊಂದು ಶುದ್ಧ ನೀತಿ ನಿರ್ಧಾರದ ವಿಷಯವಾಗಿದೆ. ಇದನ್ನು ತಳ್ಳಿ ಹಾಕುತ್ತಿದ್ದೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲ ಹಾಗೂ ಮನೋಶ್ ಮಿಶ್ರಾ ಅವರಿದ್ದ ಪೀಠ ಹೇಳಿತು.
ಅಂಗವಿಕಲತೆಯ ಸ್ಥಿತಿಗತಿಯ ಬಗ್ಗೆ ನಾಮಪತ್ರದಲ್ಲಿ ನಮೂದಿಸಬೇಕು ಎಂದು ಪಿಐಎಲ್ನಲ್ಲಿ ವಿನಂತಿಸಲಾಗಿತ್ತು. ಇದರ ಅಗತ್ಯ ಏನು ಅನ್ನುವುದನ್ನೂ ಕೋರ್ಟ್ ಪ್ರಶ್ನಿಸಿದೆ.