<p class="bodytext"><strong>ನವದೆಹಲಿ</strong>: ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ (ಎನ್ಸಿಎಲ್ಎಟಿ) ಹಂಗಾಮಿ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎಂ. ವೇಣುಗೋಪಾಲ್ ಅವರನ್ನು ತರಾತುರಿಯಲ್ಲಿ ನೇಮಿಸಿದ್ದಕ್ಕೆ ಸುಪ್ರೀಂಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p class="bodytext">ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎಲ್. ನಾಗೇಶ್ವರ ರಾವ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಕುರಿತ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.</p>.<p class="bodytext">ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಗುರುವಾರದ ವಿಚಾರಣೆ ವೇಳೆ ಹಾಜರಿರಬೇಕು ಎಂದು ಪೀಠ ಸೂಚಿಸಿದೆ.</p>.<p class="bodytext">ಎನ್ಸಿಎಲ್ಎಟಿ ಅಧ್ಯಕ್ಷರಾದ ಚೀಮಾ ಅವರ ನಿವೃತ್ತಿಗೆ 10 ದಿನ ಮೊದಲೇ ವೇಣುಗೋಪಾಲ್ ಅವರನ್ನು ನೇಮಿಸಲಾಗಿದೆ. ಇದು ಹೇಗೆ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p class="bodytext">ಕೇಂದ್ರ ಸರ್ಕಾರ ಎನ್ಸಿಎಲ್ಟಿಗೆ 8 ನ್ಯಾಯಾಂಗ ಸದಸ್ಯರು ಮತ್ತು 10 ತಾಂತ್ರಿಕ ಸದಸ್ಯರನ್ನು ನೇಮಿಸುವ ಪ್ರಸ್ತಾವನೆಗೆ ಶನಿವಾರ ಅನುಮೋದನೆ ನೀಡಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ (ಎನ್ಸಿಎಲ್ಎಟಿ) ಹಂಗಾಮಿ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎಂ. ವೇಣುಗೋಪಾಲ್ ಅವರನ್ನು ತರಾತುರಿಯಲ್ಲಿ ನೇಮಿಸಿದ್ದಕ್ಕೆ ಸುಪ್ರೀಂಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p class="bodytext">ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎಲ್. ನಾಗೇಶ್ವರ ರಾವ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಕುರಿತ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.</p>.<p class="bodytext">ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಗುರುವಾರದ ವಿಚಾರಣೆ ವೇಳೆ ಹಾಜರಿರಬೇಕು ಎಂದು ಪೀಠ ಸೂಚಿಸಿದೆ.</p>.<p class="bodytext">ಎನ್ಸಿಎಲ್ಎಟಿ ಅಧ್ಯಕ್ಷರಾದ ಚೀಮಾ ಅವರ ನಿವೃತ್ತಿಗೆ 10 ದಿನ ಮೊದಲೇ ವೇಣುಗೋಪಾಲ್ ಅವರನ್ನು ನೇಮಿಸಲಾಗಿದೆ. ಇದು ಹೇಗೆ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p class="bodytext">ಕೇಂದ್ರ ಸರ್ಕಾರ ಎನ್ಸಿಎಲ್ಟಿಗೆ 8 ನ್ಯಾಯಾಂಗ ಸದಸ್ಯರು ಮತ್ತು 10 ತಾಂತ್ರಿಕ ಸದಸ್ಯರನ್ನು ನೇಮಿಸುವ ಪ್ರಸ್ತಾವನೆಗೆ ಶನಿವಾರ ಅನುಮೋದನೆ ನೀಡಿತ್ತು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>