<p><strong>ನವದೆಹಲಿ</strong>: ನ್ಯಾಯಾಂಗ ವ್ಯವಹಾರ, ಕಲಾಪಗಳನ್ನು ಸುಗಮವಾಗಿ ನಡೆಸಲು ಹೆಚ್ಚುವರಿ ಪೀಠಗಳನ್ನು ಸ್ಥಾಪಿಸುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.</p>.<p>ಕೊಲ್ಹಾಪುರದಲ್ಲಿ ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರು ಮತ್ತು ವಿಭಾಗೀಯ ಪೀಠಗಳು ಕಾರ್ಯನಿರ್ವಹಿಸಲು ಆಗಸ್ಟ್ 1ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಎತ್ತಿಹಿಡಿದಿದೆ.</p>.<p>ಈ ನಿರ್ಧಾರವನ್ನು ಪ್ರಶ್ನಿಸಿ ರಂಜೀತ್ ಬಾಬುರಾವ್ ನಿಂಬಾಳ್ಕರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಪೀಠವು, ‘ನ್ಯಾಯಾಂಗ ಕೆಲಸದ ಹಂಚಿಕೆಯು ಮುಖ್ಯ ನ್ಯಾಯಮೂರ್ತಿಗಳ ವಿಶೇಷ ಹಕ್ಕು. ಆದರೆ, ಇದಕ್ಕಾಗಿ ರಾಜ್ಯಪಾಲರ ಅನುಮೋದನೆ ಪಡೆಯಬೇಕು’ ಎಂದು ಹೇಳಿದೆ.</p>.<p>ಮೂಲಸೌಕರ್ಯಗಳ ಸಾಧ್ಯತೆ ಮತ್ತು ಲಭ್ಯತೆಯನ್ನು ಪರಿಗಣಿಸಿ ಕೊಲ್ಹಾಪುರವನ್ನು ಹೆಚ್ಚುವರಿ ಪೀಠದ ಸ್ಥಳವಾಗಿ ನಿಗದಿಪಡಿಸಿ ಹೈಕೋರ್ಟ್ ಪ್ರಸ್ತಾವ ಸಿದ್ಧಪಡಿಸಿರುವುದನ್ನು ಪೀಠವು ಗಮನಿಸಿತು. </p>.<p>ಕೊಲ್ಹಾಪುರ, ಸಾಂಗ್ಲಿ, ಸತಾರಾ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಖ್ಯ ನ್ಯಾಯಮೂರ್ತಿಗಳ ಆಡಳಿತಾತ್ಮಕ ನಿರ್ದೇಶನಗಳಿಗೆ ಅನುಗುಣವಾಗಿ ಕೊಲ್ಹಾಪುರ ಪೀಠಕ್ಕೆ ವಹಿಸಲಾಗುತ್ತದೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯಾಯಾಂಗ ವ್ಯವಹಾರ, ಕಲಾಪಗಳನ್ನು ಸುಗಮವಾಗಿ ನಡೆಸಲು ಹೆಚ್ಚುವರಿ ಪೀಠಗಳನ್ನು ಸ್ಥಾಪಿಸುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.</p>.<p>ಕೊಲ್ಹಾಪುರದಲ್ಲಿ ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರು ಮತ್ತು ವಿಭಾಗೀಯ ಪೀಠಗಳು ಕಾರ್ಯನಿರ್ವಹಿಸಲು ಆಗಸ್ಟ್ 1ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಎತ್ತಿಹಿಡಿದಿದೆ.</p>.<p>ಈ ನಿರ್ಧಾರವನ್ನು ಪ್ರಶ್ನಿಸಿ ರಂಜೀತ್ ಬಾಬುರಾವ್ ನಿಂಬಾಳ್ಕರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಪೀಠವು, ‘ನ್ಯಾಯಾಂಗ ಕೆಲಸದ ಹಂಚಿಕೆಯು ಮುಖ್ಯ ನ್ಯಾಯಮೂರ್ತಿಗಳ ವಿಶೇಷ ಹಕ್ಕು. ಆದರೆ, ಇದಕ್ಕಾಗಿ ರಾಜ್ಯಪಾಲರ ಅನುಮೋದನೆ ಪಡೆಯಬೇಕು’ ಎಂದು ಹೇಳಿದೆ.</p>.<p>ಮೂಲಸೌಕರ್ಯಗಳ ಸಾಧ್ಯತೆ ಮತ್ತು ಲಭ್ಯತೆಯನ್ನು ಪರಿಗಣಿಸಿ ಕೊಲ್ಹಾಪುರವನ್ನು ಹೆಚ್ಚುವರಿ ಪೀಠದ ಸ್ಥಳವಾಗಿ ನಿಗದಿಪಡಿಸಿ ಹೈಕೋರ್ಟ್ ಪ್ರಸ್ತಾವ ಸಿದ್ಧಪಡಿಸಿರುವುದನ್ನು ಪೀಠವು ಗಮನಿಸಿತು. </p>.<p>ಕೊಲ್ಹಾಪುರ, ಸಾಂಗ್ಲಿ, ಸತಾರಾ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಖ್ಯ ನ್ಯಾಯಮೂರ್ತಿಗಳ ಆಡಳಿತಾತ್ಮಕ ನಿರ್ದೇಶನಗಳಿಗೆ ಅನುಗುಣವಾಗಿ ಕೊಲ್ಹಾಪುರ ಪೀಠಕ್ಕೆ ವಹಿಸಲಾಗುತ್ತದೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>