<p><strong>ನವದೆಹಲಿ</strong>: ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.</p>.<p>ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದ ತೀರ್ಪಿನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗಳಿಗೆ ಅವರ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಮಯದಲ್ಲಿ ಈ ಹೇಳಿಕೆ ನೀಡಿದೆ.</p>.<p>‘ನಿಮ್ಮ ರಾಜಕೀಯ ಹೋರಾಟವನ್ನು ದಯವಿಟ್ಟು ಈ ನ್ಯಾಯಾಲಯದ ಹೊರಗೆ ಮಾಡಿ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ ಹೇಳಿತು.</p>.<p>ಮಮತಾ ಅವರು ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಆತ್ಮದೀಪ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸುತ್ತಿದೆ.</p>.<p>ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಮಣಿಂದರ್ ಸಿಂಗ್, ವಿಚಾರಣೆಯನ್ನು ಮುಂದೂಡುವಂತೆ ಪೀಠವನ್ನು ಒತ್ತಾಯಿಸಿದರಲ್ಲದೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಪ್ರಾರಂಭಿಸಲು ಒಪ್ಪಿಗೆ ನೀಡುವಂತೆ ಅಟಾರ್ನಿ ಜನರಲ್ ಅವರಿಗೆ ಮನವಿಯನ್ನು ಕಳುಹಿಸಲಾಗಿದೆ ಎಂದರು.</p>.<p>ಅದಕ್ಕೆ ಸಿಜೆಐ, ‘ಒಪ್ಪಿಗೆ ಸಿಗಲಿದೆ ಎಂಬುದು ನಿಮಗೆ ಖಚಿತವಾಗಿದೆಯೇ? ನ್ಯಾಯಾಲಯದ ಮುಂದೆ ರಾಜಕೀಯ ತರಲು ಪ್ರಯತ್ನಿಸಬೇಡಿ. ನಿಮ್ಮ ರಾಜಕೀಯ ಹೋರಾಟವನ್ನು ಬೇರೆ ಎಲ್ಲಾದರೂ ಮಾಡಿ’ ಎಂದು ತರಾಟೆಗೆ ತೆಗೆದುಕೊಂಡರು. ಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಅವಧಿಗೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯಾಯಾಂಗಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.</p>.<p>ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದ ತೀರ್ಪಿನ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗಳಿಗೆ ಅವರ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಮಯದಲ್ಲಿ ಈ ಹೇಳಿಕೆ ನೀಡಿದೆ.</p>.<p>‘ನಿಮ್ಮ ರಾಜಕೀಯ ಹೋರಾಟವನ್ನು ದಯವಿಟ್ಟು ಈ ನ್ಯಾಯಾಲಯದ ಹೊರಗೆ ಮಾಡಿ’ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ ಹೇಳಿತು.</p>.<p>ಮಮತಾ ಅವರು ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಆತ್ಮದೀಪ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸುತ್ತಿದೆ.</p>.<p>ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಮಣಿಂದರ್ ಸಿಂಗ್, ವಿಚಾರಣೆಯನ್ನು ಮುಂದೂಡುವಂತೆ ಪೀಠವನ್ನು ಒತ್ತಾಯಿಸಿದರಲ್ಲದೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಪ್ರಾರಂಭಿಸಲು ಒಪ್ಪಿಗೆ ನೀಡುವಂತೆ ಅಟಾರ್ನಿ ಜನರಲ್ ಅವರಿಗೆ ಮನವಿಯನ್ನು ಕಳುಹಿಸಲಾಗಿದೆ ಎಂದರು.</p>.<p>ಅದಕ್ಕೆ ಸಿಜೆಐ, ‘ಒಪ್ಪಿಗೆ ಸಿಗಲಿದೆ ಎಂಬುದು ನಿಮಗೆ ಖಚಿತವಾಗಿದೆಯೇ? ನ್ಯಾಯಾಲಯದ ಮುಂದೆ ರಾಜಕೀಯ ತರಲು ಪ್ರಯತ್ನಿಸಬೇಡಿ. ನಿಮ್ಮ ರಾಜಕೀಯ ಹೋರಾಟವನ್ನು ಬೇರೆ ಎಲ್ಲಾದರೂ ಮಾಡಿ’ ಎಂದು ತರಾಟೆಗೆ ತೆಗೆದುಕೊಂಡರು. ಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಅವಧಿಗೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>