<p><strong>ನವದೆಹಲಿ:</strong> ಲೋಕಸಭೆ, ರಾಜ್ಯಗಳ ವಿಧಾನಸಭೆ ಹಾಗೂ ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಜಾರಿ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.</p>.ಮಹಿಳಾ ಮೀಸಲಾತಿ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ನಿತಿನ್ ಗಡ್ಕರಿ .<p>ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ವಿ ನಾಗರತ್ನ ಹಾಗೂ ಆರ್. ಮಹಾದೇವನ್ ಅವರಿದ್ದ ಪೀಠ, ಮೀಸಲಾತಿಯ ಪರವಾಗಿ ಟಿಪ್ಪಣಿಗಳನ್ನು ಮಾಡಿದರು. ‘ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು’ ಎಂದೂ ಪೀಠ ಹೇಳಿತು.</p><p>‘ಎಲ್ಲಾ ನಾಗರಿಕರು ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ಪಡೆಯಲು ಅರ್ಹರು ಎನ್ನುವುದನ್ನು ಸಂವಿಧಾನದ ಪ್ರಸ್ತಾವನೆಯೇ ಹೇಳುತ್ತದೆ. ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು? ಮಹಿಳೆಯರು; ಶೇ 48ರಷ್ಟಿದ್ದಾರೆ. ಇದು ಮಹಿಳೆಯರಿಗೆ ರಾಜಕೀಯ ಸಮಾನತೆ ನೀಡುವುದಕ್ಕೆ ಸಂಬಂಧಿಸಿದ್ದು’ ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಹೇಳಿದರು.</p><p>ಮುಂದಿನ ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಗೆ ಕಾಯದೇ ಕೂಡಲೇ ಮಹಿಳಾ ಮೀಸಲಾತಿ ಕಾನೂನನ್ನು ಜಾರಿ ಮಾಡಬೇಕು ಎಂದು ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಕೋರ್ಟ್ ಹೀಗೆ ಹೇಳಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p> .ಮಹಿಳಾ ಮೀಸಲಾತಿ ಕಾನೂನು ರೂಪ ಪಡೆಯಲಿ: ಡಾ.ಎಚ್.ಸಿ.ಮಹದೇವಪ್ಪ.<p>‘ಬ್ರಿಟಿಷ್ ವಸಾಹತು ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು 75 ವರ್ಷಗಳಾದರೂ, ಪ್ರಾತಿನಿಧ್ಯಕ್ಕಾಗಿ ಕೋರ್ಟ್ಗೆ ಬರಬೇಕಾಗಿದ್ದು ದುರದೃಷ್ಟಕರ. ಅವರಿಗೆ ಕೇವಲ ಮೂರನೇ ಒಂದರಷ್ಟು ಮಾತ್ರ ಮೀಸಲಾತಿ ಇದೆ. ಅದಕ್ಕೂ ಯಾವುದೋ ದತ್ತಾಂಶಕ್ಕೆ ಕಾಯಬೇಕಾಗಿದೆ’ ಎಂದು ಅರ್ಜಿದಾರರ ಪರ ವಕೀಲಾರದ ಶೋಭಾ ಗುಪ್ತಾ ಹೇಳಿದರು.</p><p>‘ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆ ಯಾವಾಗ? ಸರ್ಕಾರಕ್ಕೆ ನೋಟಿಸ್ ನೀಡಿ. ಕಾನೂನು ಜಾರಿ ಕಾರ್ಯಾಂಗದ ಕೆಲಸವಾಗಿದ್ದು, ಅದರಲ್ಲಿ ನಾವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಪ್ರತಿವಾದಿಗಳಿಗೂ, ಕೇಂದ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿ’ ಎಂದು ಕೋರ್ಟ್ ಹೇಳಿತು.</p>.ಮಹಿಳಾ ಮೀಸಲಾತಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ.<p>2023ರ ಸೆಪ್ಟೆಂಬರ್ನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಅದೇ ತಿಂಗಳಿನಲ್ಲಿ ರಾಷ್ಟ್ರಪತಿ ಸಹಿಯೂ ಬಿದ್ದಿತ್ತು.</p><p>ಜನಗಣತಿ ನಡೆದು ಆ ಬಳಿಕ ನಡೆಯುವ ಕ್ಷೇತ್ರ ಪುನರ್ವಿಂಗಡನೆ ಮಾಡಿದ ಬಳಿಕ ಈ ಕಾನೂನು ಜಾರಿಯಾಗಲಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿ ಬರೆದ ಸುದ್ದಿ)</strong></em></p>.ಮಹಿಳಾ ಮೀಸಲಾತಿ | ಸಂಸತ್, ವಿಧಾನಸಭೆಗೆ ಮಹಿಳೆಯರ ಪ್ರವೇಶ: ಯೋಗಿ ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆ, ರಾಜ್ಯಗಳ ವಿಧಾನಸಭೆ ಹಾಗೂ ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ಕಾನೂನು ಜಾರಿ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.</p>.ಮಹಿಳಾ ಮೀಸಲಾತಿ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ನಿತಿನ್ ಗಡ್ಕರಿ .<p>ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ವಿ ನಾಗರತ್ನ ಹಾಗೂ ಆರ್. ಮಹಾದೇವನ್ ಅವರಿದ್ದ ಪೀಠ, ಮೀಸಲಾತಿಯ ಪರವಾಗಿ ಟಿಪ್ಪಣಿಗಳನ್ನು ಮಾಡಿದರು. ‘ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು’ ಎಂದೂ ಪೀಠ ಹೇಳಿತು.</p><p>‘ಎಲ್ಲಾ ನಾಗರಿಕರು ರಾಜಕೀಯ ಹಾಗೂ ಸಾಮಾಜಿಕ ಸಮಾನತೆ ಪಡೆಯಲು ಅರ್ಹರು ಎನ್ನುವುದನ್ನು ಸಂವಿಧಾನದ ಪ್ರಸ್ತಾವನೆಯೇ ಹೇಳುತ್ತದೆ. ದೇಶದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತರು ಯಾರು? ಮಹಿಳೆಯರು; ಶೇ 48ರಷ್ಟಿದ್ದಾರೆ. ಇದು ಮಹಿಳೆಯರಿಗೆ ರಾಜಕೀಯ ಸಮಾನತೆ ನೀಡುವುದಕ್ಕೆ ಸಂಬಂಧಿಸಿದ್ದು’ ಎಂದು ನ್ಯಾಯಮೂರ್ತಿ ನಾಗರತ್ನ ಮೌಖಿಕವಾಗಿ ಹೇಳಿದರು.</p><p>ಮುಂದಿನ ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆಗೆ ಕಾಯದೇ ಕೂಡಲೇ ಮಹಿಳಾ ಮೀಸಲಾತಿ ಕಾನೂನನ್ನು ಜಾರಿ ಮಾಡಬೇಕು ಎಂದು ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಕೋರ್ಟ್ ಹೀಗೆ ಹೇಳಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p> .ಮಹಿಳಾ ಮೀಸಲಾತಿ ಕಾನೂನು ರೂಪ ಪಡೆಯಲಿ: ಡಾ.ಎಚ್.ಸಿ.ಮಹದೇವಪ್ಪ.<p>‘ಬ್ರಿಟಿಷ್ ವಸಾಹತು ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು 75 ವರ್ಷಗಳಾದರೂ, ಪ್ರಾತಿನಿಧ್ಯಕ್ಕಾಗಿ ಕೋರ್ಟ್ಗೆ ಬರಬೇಕಾಗಿದ್ದು ದುರದೃಷ್ಟಕರ. ಅವರಿಗೆ ಕೇವಲ ಮೂರನೇ ಒಂದರಷ್ಟು ಮಾತ್ರ ಮೀಸಲಾತಿ ಇದೆ. ಅದಕ್ಕೂ ಯಾವುದೋ ದತ್ತಾಂಶಕ್ಕೆ ಕಾಯಬೇಕಾಗಿದೆ’ ಎಂದು ಅರ್ಜಿದಾರರ ಪರ ವಕೀಲಾರದ ಶೋಭಾ ಗುಪ್ತಾ ಹೇಳಿದರು.</p><p>‘ಕ್ಷೇತ್ರ ಪುನರ್ವಿಂಗಡನೆ ಪ್ರಕ್ರಿಯೆ ಯಾವಾಗ? ಸರ್ಕಾರಕ್ಕೆ ನೋಟಿಸ್ ನೀಡಿ. ಕಾನೂನು ಜಾರಿ ಕಾರ್ಯಾಂಗದ ಕೆಲಸವಾಗಿದ್ದು, ಅದರಲ್ಲಿ ನಾವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಪ್ರತಿವಾದಿಗಳಿಗೂ, ಕೇಂದ್ರ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿ’ ಎಂದು ಕೋರ್ಟ್ ಹೇಳಿತು.</p>.ಮಹಿಳಾ ಮೀಸಲಾತಿ ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ.<p>2023ರ ಸೆಪ್ಟೆಂಬರ್ನಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಅದೇ ತಿಂಗಳಿನಲ್ಲಿ ರಾಷ್ಟ್ರಪತಿ ಸಹಿಯೂ ಬಿದ್ದಿತ್ತು.</p><p>ಜನಗಣತಿ ನಡೆದು ಆ ಬಳಿಕ ನಡೆಯುವ ಕ್ಷೇತ್ರ ಪುನರ್ವಿಂಗಡನೆ ಮಾಡಿದ ಬಳಿಕ ಈ ಕಾನೂನು ಜಾರಿಯಾಗಲಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿ ಬರೆದ ಸುದ್ದಿ)</strong></em></p>.ಮಹಿಳಾ ಮೀಸಲಾತಿ | ಸಂಸತ್, ವಿಧಾನಸಭೆಗೆ ಮಹಿಳೆಯರ ಪ್ರವೇಶ: ಯೋಗಿ ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>