<p><strong>ತ್ರಿಶ್ಶೂರ್/ ತಿರುವನಂತಪುರ:</strong> ಶಿಥಿಲಗೊಂಡ ಮನೆಯನ್ನು ಪುನರ್ನಿರ್ಮಿಸಿಕೊಡುವಂತೆ ಕೋರಿ ಹಿರಿಯ ನಾಗರಿಕರೊಬ್ಬರು ನೀಡಿದ ಮನವಿಯನ್ನು ಸ್ವೀಕರಿಸಲು ಕೇಂದ್ರ ಸಚಿವ ಸುರೇಶ್ ಗೋಪಿ ಅವರು ನಿರಾಕರಿಸಿದ್ದಾರೆ. </p>.<p>ತ್ರಿಶ್ಶೂರ್ ಜಿಲ್ಲೆಯ ಪುಲ್ಲು ಎಂಬಲ್ಲಿ ಸೆ.12ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಚುವೇಲಾಯುಧನ್ ಎಂಬವರು ಲಿಖಿತ ಮನವಿ ನೀಡಲು ಮುಂದಾಗಿದ್ದರು. ಸಾರ್ವಜನಿಕವಾಗಿ ಮನವಿ ಸ್ವೀಕರಿಸಲು ಸಚಿವರು ನಿರಾಕರಿಸಿದ್ದರು. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿತ್ತು. </p>.<p>ಇದನ್ನು ಸಮರ್ಥಿಸಿಕೊಂಡಿರುವ ಸುರೇಶ್ ಗೋಪಿ, ‘ನಾನು ಈಡೇರಿಸಲಾಗದ ಭರವಸೆಗಳನ್ನು ನೀಡುವುದಿಲ್ಲ. ವಸತಿಗೆ ಸಂಬಂಧಿಸಿದ ವಿಷಯವು ರಾಜ್ಯಕ್ಕೆ ಸಂಬಂಧಿಸಿದ್ದು. ಅದನ್ನು ರಾಜ್ಯ ಸರ್ಕಾರವೇ ಪರಿಗಣಿಸಬೇಕು. ಈ ಘಟನೆಯನ್ನು ಕೆಲವರು ತಮ್ಮ ರಾಜಕೀಯ ಹಿತಾಸಕ್ತಿಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ’ ಎಂದು ಗೋಪಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p><strong>ಮನೆ ನಿರ್ಮಿಸುವ ಭರವಸೆ:</strong> ಕೊಚುವೇಲಾಯುಧನ್ ಅವರಿಗೆ ಮನೆ ನಿರ್ಮಿಸಿಕೊಡುವುದಾಗಿ ಸಿಪಿಎಂನ ಸ್ಥಳೀಯ ನಾಯಕರೊಬ್ಬರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶ್ಶೂರ್/ ತಿರುವನಂತಪುರ:</strong> ಶಿಥಿಲಗೊಂಡ ಮನೆಯನ್ನು ಪುನರ್ನಿರ್ಮಿಸಿಕೊಡುವಂತೆ ಕೋರಿ ಹಿರಿಯ ನಾಗರಿಕರೊಬ್ಬರು ನೀಡಿದ ಮನವಿಯನ್ನು ಸ್ವೀಕರಿಸಲು ಕೇಂದ್ರ ಸಚಿವ ಸುರೇಶ್ ಗೋಪಿ ಅವರು ನಿರಾಕರಿಸಿದ್ದಾರೆ. </p>.<p>ತ್ರಿಶ್ಶೂರ್ ಜಿಲ್ಲೆಯ ಪುಲ್ಲು ಎಂಬಲ್ಲಿ ಸೆ.12ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಚುವೇಲಾಯುಧನ್ ಎಂಬವರು ಲಿಖಿತ ಮನವಿ ನೀಡಲು ಮುಂದಾಗಿದ್ದರು. ಸಾರ್ವಜನಿಕವಾಗಿ ಮನವಿ ಸ್ವೀಕರಿಸಲು ಸಚಿವರು ನಿರಾಕರಿಸಿದ್ದರು. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿತ್ತು. </p>.<p>ಇದನ್ನು ಸಮರ್ಥಿಸಿಕೊಂಡಿರುವ ಸುರೇಶ್ ಗೋಪಿ, ‘ನಾನು ಈಡೇರಿಸಲಾಗದ ಭರವಸೆಗಳನ್ನು ನೀಡುವುದಿಲ್ಲ. ವಸತಿಗೆ ಸಂಬಂಧಿಸಿದ ವಿಷಯವು ರಾಜ್ಯಕ್ಕೆ ಸಂಬಂಧಿಸಿದ್ದು. ಅದನ್ನು ರಾಜ್ಯ ಸರ್ಕಾರವೇ ಪರಿಗಣಿಸಬೇಕು. ಈ ಘಟನೆಯನ್ನು ಕೆಲವರು ತಮ್ಮ ರಾಜಕೀಯ ಹಿತಾಸಕ್ತಿಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ’ ಎಂದು ಗೋಪಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p><strong>ಮನೆ ನಿರ್ಮಿಸುವ ಭರವಸೆ:</strong> ಕೊಚುವೇಲಾಯುಧನ್ ಅವರಿಗೆ ಮನೆ ನಿರ್ಮಿಸಿಕೊಡುವುದಾಗಿ ಸಿಪಿಎಂನ ಸ್ಥಳೀಯ ನಾಯಕರೊಬ್ಬರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>