<p><strong>ಕಣ್ಣೂರು</strong>: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮ ಸ್ಥಾನವನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸದಸ್ಯ ಸಿ.ಸದಾನಂದನ್ ಮಾಸ್ಟರ್ ಅವರನ್ನು ತಮ್ಮ ಸ್ಥಾನಕ್ಕೆ ನೇಮಕ ಮಾಡಬೇಕೆಂಬ ಶಿಫಾರಸನ್ನೂ ಅವರು ಭಾನುವಾರ ಮುಂದಿಟ್ಟರು. </p>.<p>ಗೋಪಿ ಅವರು ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಖಾತೆ ಸಚಿವವಾಗಿದ್ದಾರೆ.</p>.<p>ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ‘ನನ್ನನ್ನು ತೆಗೆದ ಮೇಲೆ ಸದಾನಂದನ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಬೇಕು. ಇದು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವಾಗಲಿದೆ ಎಂದು ನಾನು ನಂಬುತ್ತೇನೆ’ ಎಂದರು. ಸಭೆಯಲ್ಲಿ ಸದಾನಂದನ್ ಅವರೂ ಭಾಗಿಯಾಗಿದ್ದರು. </p>.<p>‘ಚಿತ್ರರಂಗವನ್ನು ಬಿಟ್ಟು ಮಂತ್ರಿಯಾಗಬೇಕು ಎಂದು ನಾನು ಯಾವತ್ತೂ ಭಾವಿಸಿರಲಿಲ್ಲ. ಸದಾನಂದನ್ ಅವರ ‘ಸಂಸದ’ ಕಚೇರಿಯು ಶೀಘ್ರವೇ ‘ಸಚಿವರ ಕಚೇರಿ’ಯಾಗಿ ಬದಲಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದೂ ಗೋಪಿ ಹೇಳಿದರು. </p>.<p>ಸದಾನಂದನ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು</strong>: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮ ಸ್ಥಾನವನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸದಸ್ಯ ಸಿ.ಸದಾನಂದನ್ ಮಾಸ್ಟರ್ ಅವರನ್ನು ತಮ್ಮ ಸ್ಥಾನಕ್ಕೆ ನೇಮಕ ಮಾಡಬೇಕೆಂಬ ಶಿಫಾರಸನ್ನೂ ಅವರು ಭಾನುವಾರ ಮುಂದಿಟ್ಟರು. </p>.<p>ಗೋಪಿ ಅವರು ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಖಾತೆ ಸಚಿವವಾಗಿದ್ದಾರೆ.</p>.<p>ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ‘ನನ್ನನ್ನು ತೆಗೆದ ಮೇಲೆ ಸದಾನಂದನ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಬೇಕು. ಇದು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವಾಗಲಿದೆ ಎಂದು ನಾನು ನಂಬುತ್ತೇನೆ’ ಎಂದರು. ಸಭೆಯಲ್ಲಿ ಸದಾನಂದನ್ ಅವರೂ ಭಾಗಿಯಾಗಿದ್ದರು. </p>.<p>‘ಚಿತ್ರರಂಗವನ್ನು ಬಿಟ್ಟು ಮಂತ್ರಿಯಾಗಬೇಕು ಎಂದು ನಾನು ಯಾವತ್ತೂ ಭಾವಿಸಿರಲಿಲ್ಲ. ಸದಾನಂದನ್ ಅವರ ‘ಸಂಸದ’ ಕಚೇರಿಯು ಶೀಘ್ರವೇ ‘ಸಚಿವರ ಕಚೇರಿ’ಯಾಗಿ ಬದಲಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದೂ ಗೋಪಿ ಹೇಳಿದರು. </p>.<p>ಸದಾನಂದನ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>