<p>ಇಂಫಾಲ್: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಬುಧವಾರ ನಡೆಸಿದ ದಾಳಿಯಲ್ಲಿ ಮೂವರು ಕ್ರೈಸ್ತ ನಾಯಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.</p>.<p>ಥಾಡೋ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಸದಸ್ಯರು ಚುರಾಚಾಂದ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದೆ. ಅವರು ಪ್ರಯಾಣಿಸುತ್ತಿದ್ದ ಎರಡು ವಾಹನಗಳ ಮೇಲೆ ಶಂಕಿತ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಕಿಗಳು ಬಹುಸಂಖ್ಯಾತರಾಗಿರುವ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ದಾಳಿಯ ಬಳಿಕ ಸಂಪೂರ್ಣ ಬಂದ್ ಆಚರಿಸಲಾಗಿದೆ. ನಾಗಾ ಸಮುದಾಯದ ಶಾಸಕರ ತಂಡ ಮತ್ತು ಕುಕಿ ಸಂಘಟನೆಯೊಂದು ಹತ್ಯೆಯನ್ನು ಖಂಡಿಸಿದೆ.</p>.<p>ದಾಳಿಯ ಹಿಂದೆ ಮೈತೇಯಿ ಸಮುದಾಯದ ಕೈವಾಡವಿದೆ ಎಂಬ ಆರೋಪಗಳನ್ನು ಮೈತೇಯಿ ಸಮುದಾಯದ ಸಂಘಟನೆಯೊಂದು ತಿರಸ್ಕರಿಸಿದೆ.</p>.<p>‘ಮೃತರಲ್ಲಿ ಮಣಿಪುರ ಬ್ಯಾಪ್ಟಿಸ್ಟ್ ಕನ್ವೆನ್ಷನ್ನ ಮಾಜಿ ಪ್ರಧಾನ ಕಾರ್ಯದರ್ಶಿ ವಿ. ಸಿತ್ಲೋರ್ ಅವರೂ ಸೇರಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿಯನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ವೈ.ಖೇಮಚಂದ್ ಸಿಂಗ್ ಅವರು, ‘ಹಿಂಸಾಚಾರವು ಶಾಂತಿಗೆ ಧಕ್ಕೆ ತರುತ್ತದೆ. ಸಮಾಜದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಮರ್ಥನೆ ಇಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಫಾಲ್: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಬುಧವಾರ ನಡೆಸಿದ ದಾಳಿಯಲ್ಲಿ ಮೂವರು ಕ್ರೈಸ್ತ ನಾಯಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.</p>.<p>ಥಾಡೋ ಬ್ಯಾಪ್ಟಿಸ್ಟ್ ಅಸೋಸಿಯೇಷನ್(ಟಿಬಿಎ) ಸದಸ್ಯರು ಚುರಾಚಾಂದ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದೆ. ಅವರು ಪ್ರಯಾಣಿಸುತ್ತಿದ್ದ ಎರಡು ವಾಹನಗಳ ಮೇಲೆ ಶಂಕಿತ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಕಿಗಳು ಬಹುಸಂಖ್ಯಾತರಾಗಿರುವ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ದಾಳಿಯ ಬಳಿಕ ಸಂಪೂರ್ಣ ಬಂದ್ ಆಚರಿಸಲಾಗಿದೆ. ನಾಗಾ ಸಮುದಾಯದ ಶಾಸಕರ ತಂಡ ಮತ್ತು ಕುಕಿ ಸಂಘಟನೆಯೊಂದು ಹತ್ಯೆಯನ್ನು ಖಂಡಿಸಿದೆ.</p>.<p>ದಾಳಿಯ ಹಿಂದೆ ಮೈತೇಯಿ ಸಮುದಾಯದ ಕೈವಾಡವಿದೆ ಎಂಬ ಆರೋಪಗಳನ್ನು ಮೈತೇಯಿ ಸಮುದಾಯದ ಸಂಘಟನೆಯೊಂದು ತಿರಸ್ಕರಿಸಿದೆ.</p>.<p>‘ಮೃತರಲ್ಲಿ ಮಣಿಪುರ ಬ್ಯಾಪ್ಟಿಸ್ಟ್ ಕನ್ವೆನ್ಷನ್ನ ಮಾಜಿ ಪ್ರಧಾನ ಕಾರ್ಯದರ್ಶಿ ವಿ. ಸಿತ್ಲೋರ್ ಅವರೂ ಸೇರಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿಯನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ವೈ.ಖೇಮಚಂದ್ ಸಿಂಗ್ ಅವರು, ‘ಹಿಂಸಾಚಾರವು ಶಾಂತಿಗೆ ಧಕ್ಕೆ ತರುತ್ತದೆ. ಸಮಾಜದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಮರ್ಥನೆ ಇಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>