<p><strong>ಕೋಲ್ಕತ್ತ:</strong> ಬಿಜೆಪಿ ಹಿರಿಯ ನಾಯಕ ಸುವೇಂಧು ಅಧಿಕಾರಿ ಅವರ ಆಪ್ತ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮಾಜಿ ಪಂಚಾಯತ್ ಮುಖ್ಯಸ್ಥ ಪವಿತ್ರಾ ಕರ್ ಅವರು ಮಂಗಳವಾರ ಮತ್ತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. </p>.<p>ನಂದಿಗ್ರಾಮದಲ್ಲಿ ಸುವೇಂಧು ಅವರ ಪ್ರತಿಸ್ಪರ್ಧಿಯಾಗಿ ಪವಿತ್ರಾ ಅವರೇ ಕಣಕ್ಕಿಳಿಯಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದಿದೆ. </p>.<p class="title">ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಪವಿತ್ರಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಟಿಎಂಸಿ ಪೋಸ್ಟ್ ಮಾಡಿದ್ದು, ‘ಬಿಜೆಪಿಯ ಜನವಿರೋಧಿ ನೀತಿಗಳಿಂದ ಪವಿತ್ರಾ ಬೇಸತ್ತಿದ್ದಾರೆ’ ಎಂದಿದೆ.</p>.<p class="title"> ಪಬಿತ್ರಾ ಅವರು 2020ರಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲು ಟಿಎಂಸಿ ತೊರೆದಿದ್ದರು.</p>.<p class="title">2021ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಬೋಯಲ್–1 ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿಗೆ ಹೆಚ್ಚು ಮತಗಳು ದೊರಕುವಂತೆ ಮಾಡುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.</p>.<p class="title">ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಅವರು 2021ರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 1,900 ಮತಗಳ ಅಂತರದಲ್ಲಿ ಸೋಲಿಸಿದ್ದರು ಎಂಬುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿ ಹಿರಿಯ ನಾಯಕ ಸುವೇಂಧು ಅಧಿಕಾರಿ ಅವರ ಆಪ್ತ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಮಾಜಿ ಪಂಚಾಯತ್ ಮುಖ್ಯಸ್ಥ ಪವಿತ್ರಾ ಕರ್ ಅವರು ಮಂಗಳವಾರ ಮತ್ತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. </p>.<p>ನಂದಿಗ್ರಾಮದಲ್ಲಿ ಸುವೇಂಧು ಅವರ ಪ್ರತಿಸ್ಪರ್ಧಿಯಾಗಿ ಪವಿತ್ರಾ ಅವರೇ ಕಣಕ್ಕಿಳಿಯಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದಿದೆ. </p>.<p class="title">ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಪವಿತ್ರಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಟಿಎಂಸಿ ಪೋಸ್ಟ್ ಮಾಡಿದ್ದು, ‘ಬಿಜೆಪಿಯ ಜನವಿರೋಧಿ ನೀತಿಗಳಿಂದ ಪವಿತ್ರಾ ಬೇಸತ್ತಿದ್ದಾರೆ’ ಎಂದಿದೆ.</p>.<p class="title"> ಪಬಿತ್ರಾ ಅವರು 2020ರಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲು ಟಿಎಂಸಿ ತೊರೆದಿದ್ದರು.</p>.<p class="title">2021ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಬೋಯಲ್–1 ಗ್ರಾಮ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿಗೆ ಹೆಚ್ಚು ಮತಗಳು ದೊರಕುವಂತೆ ಮಾಡುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.</p>.<p class="title">ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಅವರು 2021ರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 1,900 ಮತಗಳ ಅಂತರದಲ್ಲಿ ಸೋಲಿಸಿದ್ದರು ಎಂಬುದು ಗಮನಾರ್ಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>