<p><strong>ಕೋಲ್ಕತ್ತ:</strong> ಇನ್ನೂ ಹತ್ತು ದಿನಗಳ ಒಳಗಾಗಿ ನಾನು ಗೆದ್ದಿರುವ ಕ್ಷೇತ್ರಗಳಲ್ಲಿ ಒಂದನ್ನು ಬಿಟ್ಟುಕೊಡುತ್ತೇನೆ. ಅದು ಯಾವ ಕ್ಷೇತ್ರ ಎನ್ನುವುದನ್ನು ಪಕ್ಷದ ನಾಯಕತ್ವವು ನಿರ್ಧರಿಸುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ 15 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ನಂದಿಗ್ರಾಮದಲ್ಲಿ ಕೂಡ ಸತತ ಜಯ ಸಾಧಿಸಿದ್ದಾರೆ.</p><p>ಭವಾನಿಪುರ ಮತ್ತು ನಂದಿಗ್ರಾಮದ ಜನರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ನಾನು ಮರೆಯುವುದಿಲ್ಲ. ಎರಡೂ ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಕ್ಷೇತ್ರದ ವಿಚಾರವಾಗಿ ನಾನು ನನ್ನ ಅಭಿಪ್ರಾಯವನ್ನು ಪಕ್ಷದ ನಾಯಕರಿಗೆ ತಿಳಿಸುತ್ತೇನೆ. ಅಂತಿಮ ನಿರ್ಧಾರವು ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. </p><p>ಬಿಜೆಪಿ ಸರ್ಕಾರವು ಮಾಡುವ ಕೆಲಸವು, ಬಂಗಾಳದಲ್ಲಿ ಇನ್ನೂ 100 ವರ್ಷ ನಮ್ಮದೇ ಪಕ್ಷವು ಅಧಿಕಾರದಲ್ಲಿರುವಂತೆ ಮಾಡಲಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಮತ ಪ್ರಮಾಣವು ಶೇ 46ರಿಂದ ಶೇ 60ಕ್ಕೆ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ. </p><p>ಸುವೆಂದು ಅಧಿಕಾರಿ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದು, ಅವರು ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎನ್ನುವ ಕುರಿತು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗಳು ನಡೆಯುತ್ತಿವೆ. </p><p>ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇನ್ನೂ ಹತ್ತು ದಿನಗಳ ಒಳಗಾಗಿ ನಾನು ಗೆದ್ದಿರುವ ಕ್ಷೇತ್ರಗಳಲ್ಲಿ ಒಂದನ್ನು ಬಿಟ್ಟುಕೊಡುತ್ತೇನೆ. ಅದು ಯಾವ ಕ್ಷೇತ್ರ ಎನ್ನುವುದನ್ನು ಪಕ್ಷದ ನಾಯಕತ್ವವು ನಿರ್ಧರಿಸುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ 15 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ನಂದಿಗ್ರಾಮದಲ್ಲಿ ಕೂಡ ಸತತ ಜಯ ಸಾಧಿಸಿದ್ದಾರೆ.</p><p>ಭವಾನಿಪುರ ಮತ್ತು ನಂದಿಗ್ರಾಮದ ಜನರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ನಾನು ಮರೆಯುವುದಿಲ್ಲ. ಎರಡೂ ಕ್ಷೇತ್ರಗಳ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಕ್ಷೇತ್ರದ ವಿಚಾರವಾಗಿ ನಾನು ನನ್ನ ಅಭಿಪ್ರಾಯವನ್ನು ಪಕ್ಷದ ನಾಯಕರಿಗೆ ತಿಳಿಸುತ್ತೇನೆ. ಅಂತಿಮ ನಿರ್ಧಾರವು ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ. </p><p>ಬಿಜೆಪಿ ಸರ್ಕಾರವು ಮಾಡುವ ಕೆಲಸವು, ಬಂಗಾಳದಲ್ಲಿ ಇನ್ನೂ 100 ವರ್ಷ ನಮ್ಮದೇ ಪಕ್ಷವು ಅಧಿಕಾರದಲ್ಲಿರುವಂತೆ ಮಾಡಲಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಮತ ಪ್ರಮಾಣವು ಶೇ 46ರಿಂದ ಶೇ 60ಕ್ಕೆ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ. </p><p>ಸುವೆಂದು ಅಧಿಕಾರಿ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದು, ಅವರು ಯಾವ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎನ್ನುವ ಕುರಿತು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗಳು ನಡೆಯುತ್ತಿವೆ. </p><p>ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>