<p><strong>ಕೋಲ್ಕತ್ತ:</strong> ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿಯಾಗಿ ಶನಿವಾರ (ಮೇ 9) ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>ಇದರೊಂದಿಗೆ ಅವರು, ರಾಜ್ಯದಲ್ಲಿ ಕೇಸರಿ ಪಕ್ಷದ ಮೊದಲ ಮುಖ್ಯಮಂತ್ರಿ ಎನಿಸಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು.</p><p>ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅವರಿಗೆ ಪ್ರಮಾಣ ಬೋಧಿಸಿದ್ದಾರೆ. ಇದೇ ವೇಳೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ನಾಯಕರ ವಿವರ ಇಲ್ಲಿದೆ.</p><p><strong>ಅಗ್ನಿಮಿತ್ರಾ ಪಾಲ್</strong><br>ಅಸನೋಲ್ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಅಗ್ನಿಮಿತ್ರಾ ಪೌಲ್, 2019ರಲ್ಲಿ ಬಿಜೆಪಿ ಸೇರಿದ್ದಾರೆ.</p><p><strong>ದಿಲೀಪ್ ಘೋಷ್<br></strong>ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷರಾಗಿ 2015ರಿಂದ 2021ರ ವರೆಗೆ ಹೊಣೆ ಹೊತ್ತುಕೊಂಡಿದ್ದ ದಿಲೀಪ್ ಘೋಷ್ ಕರಗ್ಪುರ ಸದರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.</p><p><strong>ಅಶೋಕ್ ಕಿರ್ತಾನಿಯಾ<br></strong>ಬನಗ್ರಾಮ ಉತ್ತರ ಕ್ಷೇತ್ರದಿಂದ ಆಯ್ಕೆಯಾಗಿರುವ ಅಶೋಕ್ ಕಿರ್ತಾನಿಯಾ ಅವರೂ ಸುವೇಂದು ಸಂಪುಟ ಸೇರಿದ್ದಾರೆ.</p><p><strong>ನಿತೀಶ್ ಪ್ರಾಮಾಣಿಕ್<br></strong>ನಿತೀಶ್ ಪ್ರಾಮಾಣಿಕ್ ಅವರು 2021ರಿಂದ 2024ರ ವರೆಗೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಮತ್ತು ಯುವಜನ & ಕ್ರೀಡಾ ಸಚಿವರಾಗಿದ್ದರು. ಅವರು ಕೂಚ್ಬೆಹಾರ್ ಜಿಲ್ಲೆಯ ಮಾಥಾಭಂಗ ಶಾಸಕರಾಗಿದ್ದಾರೆ.</p><p><strong>ಕ್ಷುದಿರಾಮ್ ತುಡು<br></strong>ರಾಣಿಬಂಧ್ (ಎಸ್ಟಿ) ಕ್ಷೇತ್ರದ ಶಾಸಕ ಕ್ಷಿದಿರಾಮ್ ತುಡು ಅವರು ಬಿಜೆಪಿ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 4ರಂದು ಪ್ರಕಟವಾಗಿತ್ತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.</p><p>ಇದರೊಂದಿಗೆ, ಕೇಸರಿ ಪಕ್ಷವು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ 15 ವರ್ಷಗಳ ಬಳಿಕ ಅಧಿಕಾರ ಕಳೆದುಕೊಂಡಂತಾಗಿದೆ.</p><p>ಟಿಎಂಸಿ 80 ಕಡೆ ಜಯ ಸಾಧಿಸಿದೆ. ಕಾಂಗ್ರೆಸ್ ಮತ್ತು ಆಮ್ ಜನತಾ ಉನ್ನಾಯನ್ ಪಕ್ಷ ತಲಾ ಎರಡು ಕ್ಷೇತ್ರಗಳಲ್ಲಿ ಗೆದ್ದಿವೆ. ಸಿಪಿಐ(ಎಂ) ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ ಒಂದೊಂದು ಕಡೆ ಜಯ ಸಾಧಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿಯಾಗಿ ಶನಿವಾರ (ಮೇ 9) ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>ಇದರೊಂದಿಗೆ ಅವರು, ರಾಜ್ಯದಲ್ಲಿ ಕೇಸರಿ ಪಕ್ಷದ ಮೊದಲ ಮುಖ್ಯಮಂತ್ರಿ ಎನಿಸಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು.</p><p>ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅವರಿಗೆ ಪ್ರಮಾಣ ಬೋಧಿಸಿದ್ದಾರೆ. ಇದೇ ವೇಳೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ನಾಯಕರ ವಿವರ ಇಲ್ಲಿದೆ.</p><p><strong>ಅಗ್ನಿಮಿತ್ರಾ ಪಾಲ್</strong><br>ಅಸನೋಲ್ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಅಗ್ನಿಮಿತ್ರಾ ಪೌಲ್, 2019ರಲ್ಲಿ ಬಿಜೆಪಿ ಸೇರಿದ್ದಾರೆ.</p><p><strong>ದಿಲೀಪ್ ಘೋಷ್<br></strong>ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷರಾಗಿ 2015ರಿಂದ 2021ರ ವರೆಗೆ ಹೊಣೆ ಹೊತ್ತುಕೊಂಡಿದ್ದ ದಿಲೀಪ್ ಘೋಷ್ ಕರಗ್ಪುರ ಸದರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.</p><p><strong>ಅಶೋಕ್ ಕಿರ್ತಾನಿಯಾ<br></strong>ಬನಗ್ರಾಮ ಉತ್ತರ ಕ್ಷೇತ್ರದಿಂದ ಆಯ್ಕೆಯಾಗಿರುವ ಅಶೋಕ್ ಕಿರ್ತಾನಿಯಾ ಅವರೂ ಸುವೇಂದು ಸಂಪುಟ ಸೇರಿದ್ದಾರೆ.</p><p><strong>ನಿತೀಶ್ ಪ್ರಾಮಾಣಿಕ್<br></strong>ನಿತೀಶ್ ಪ್ರಾಮಾಣಿಕ್ ಅವರು 2021ರಿಂದ 2024ರ ವರೆಗೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಮತ್ತು ಯುವಜನ & ಕ್ರೀಡಾ ಸಚಿವರಾಗಿದ್ದರು. ಅವರು ಕೂಚ್ಬೆಹಾರ್ ಜಿಲ್ಲೆಯ ಮಾಥಾಭಂಗ ಶಾಸಕರಾಗಿದ್ದಾರೆ.</p><p><strong>ಕ್ಷುದಿರಾಮ್ ತುಡು<br></strong>ರಾಣಿಬಂಧ್ (ಎಸ್ಟಿ) ಕ್ಷೇತ್ರದ ಶಾಸಕ ಕ್ಷಿದಿರಾಮ್ ತುಡು ಅವರು ಬಿಜೆಪಿ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.</p><p>294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 4ರಂದು ಪ್ರಕಟವಾಗಿತ್ತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.</p><p>ಇದರೊಂದಿಗೆ, ಕೇಸರಿ ಪಕ್ಷವು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ 15 ವರ್ಷಗಳ ಬಳಿಕ ಅಧಿಕಾರ ಕಳೆದುಕೊಂಡಂತಾಗಿದೆ.</p><p>ಟಿಎಂಸಿ 80 ಕಡೆ ಜಯ ಸಾಧಿಸಿದೆ. ಕಾಂಗ್ರೆಸ್ ಮತ್ತು ಆಮ್ ಜನತಾ ಉನ್ನಾಯನ್ ಪಕ್ಷ ತಲಾ ಎರಡು ಕ್ಷೇತ್ರಗಳಲ್ಲಿ ಗೆದ್ದಿವೆ. ಸಿಪಿಐ(ಎಂ) ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ ಒಂದೊಂದು ಕಡೆ ಜಯ ಸಾಧಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>