<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p><p>ಉತ್ತರ ಪ್ರದೇಶದಲ್ಲಿ ಅಡಗಿದ್ದ ಈ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಭಾನುವಾರ ವಶಕ್ಕೆ ಪಡೆದಿತ್ತು. ಬಳಿಕ ಅವರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಾರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. </p>.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.ಭಾರತ ಯಾರ ಮುಂದೆಯೂ ತಲೆಬಾಗದು: ಸೋಮನಾಥದಲ್ಲಿ ಪ್ರಧಾನಿ ಮೋದಿ . <p>ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ತಂಡವು ಎರಡು ವಾರಗಳ ಕಾಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅನುಮತಿ ನೀಡಿದ್ದು, ಮೇ 24ರಂದು ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ.</p><p>ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.</p>.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.IPL 2026ರಿಂದ ಎರಡು ತಂಡಗಳು ಹೊರಕ್ಕೆ: 4 ಸ್ಥಾನಗಳಿಗಾಗಿ 6 ತಂಡಗಳ ಪೈಪೋಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p><p>ಉತ್ತರ ಪ್ರದೇಶದಲ್ಲಿ ಅಡಗಿದ್ದ ಈ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಭಾನುವಾರ ವಶಕ್ಕೆ ಪಡೆದಿತ್ತು. ಬಳಿಕ ಅವರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಾರಾಸತ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. </p>.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.ಭಾರತ ಯಾರ ಮುಂದೆಯೂ ತಲೆಬಾಗದು: ಸೋಮನಾಥದಲ್ಲಿ ಪ್ರಧಾನಿ ಮೋದಿ . <p>ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ತಂಡವು ಎರಡು ವಾರಗಳ ಕಾಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ನ್ಯಾಯಾಲಯವು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅನುಮತಿ ನೀಡಿದ್ದು, ಮೇ 24ರಂದು ಮತ್ತೆ ಹಾಜರುಪಡಿಸುವಂತೆ ಸೂಚಿಸಿದೆ.</p><p>ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.</p>.Video | ಪೊಲೀಸರ ಎದುರೇ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ಹಲ್ಲೆ: ಆಗಿದ್ದೇನು?.IPL 2026ರಿಂದ ಎರಡು ತಂಡಗಳು ಹೊರಕ್ಕೆ: 4 ಸ್ಥಾನಗಳಿಗಾಗಿ 6 ತಂಡಗಳ ಪೈಪೋಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>