<p><strong>ಹೈದರಾಬಾದ್</strong>: ತೆಲಂಗಾಣದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಶ್ವಾನಗಳನ್ನು ಹತ್ಯೆಗೈಯ್ಯಲು ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಎಂಬ ಚುಚ್ಚುಮದ್ದನ್ನು ಬಳಸಲಾಗಿದೆ ಎಂದು ತೆಲಂಗಾಣ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. </p>.<p>ಮನುಷ್ಯರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೊದಲು ಈ ಅರವಳಿಕೆ ಚುಚ್ಚುಮದ್ದನ್ನು ನೀಡಲಾಗುತ್ತದೆ ಹಾಗೂ ಪಶು ವೈದ್ಯರು ಕೂಡ ಪ್ರಾಣಿಗಳಿಗೆ ದಯಾಮರಣ ನೀಡುವ ಸಂದರ್ಭದಲ್ಲಿ ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಜತೆಗೆ ಬೇರೆ ಔಷಧಿಯನ್ನು ಮಿಶ್ರಣ ಮಾಡಿ ನೀಡುತ್ತಾರೆ ಎಂಬುದು ಇಲ್ಲಿ ಗಮನಾರ್ಹ. </p>.<p>ರಾಜ್ಯದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಒಂದು ತಿಂಗಳಲ್ಲಿ 1 ಸಾವಿರ ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿತ್ತು. ಶ್ವಾನಗಳನ್ನು ಕೊಲ್ಲಲು ಗ್ರಾಮ ಪಂಚಾಯಿತಿ ನಾಯಕರೇ ಕೆಲವು ವ್ಯಕ್ತಿಗಳನ್ನು ನೇಮಿಸಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಏತನ್ಮಧ್ಯೆ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.</p>.<p>ಈ ಬೆಳವಣಿಗೆಗೆ ಸಂಬಂಧಿಸಿದಂತೆ ಸ್ಟ್ರೇ ಅನಿಮಲ್ ಫೌಂಡೇಷನ್ ಆಫ್ ಇಂಡಿಯಾದ (ಎಸ್ಎಎಫ್ಐ) ಅಧಿಕಾರಿ ಅದುಲಪುರಂ ಗೌತಮ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ಬಂಧಿತ ವ್ಯಕ್ತಿಯಿಂದ ಪೊಲೀಸರು ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಚುಚ್ಚುಮದ್ದನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತಾದ ತನಿಖೆ ಮುಂದುವರಿಯುತ್ತಿದೆ. ಮತ್ತೊಂದೆಡೆ ಶ್ವಾನಗಳ ಸಾವಿಗೆ ನಿಖರ ಕಾರಣ ತಿಳಿಯಲು ವಿಧಿವಿಜ್ಞಾನ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಶ್ವಾನಗಳನ್ನು ಹತ್ಯೆಗೈಯ್ಯಲು ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಎಂಬ ಚುಚ್ಚುಮದ್ದನ್ನು ಬಳಸಲಾಗಿದೆ ಎಂದು ತೆಲಂಗಾಣ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. </p>.<p>ಮನುಷ್ಯರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೊದಲು ಈ ಅರವಳಿಕೆ ಚುಚ್ಚುಮದ್ದನ್ನು ನೀಡಲಾಗುತ್ತದೆ ಹಾಗೂ ಪಶು ವೈದ್ಯರು ಕೂಡ ಪ್ರಾಣಿಗಳಿಗೆ ದಯಾಮರಣ ನೀಡುವ ಸಂದರ್ಭದಲ್ಲಿ ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಜತೆಗೆ ಬೇರೆ ಔಷಧಿಯನ್ನು ಮಿಶ್ರಣ ಮಾಡಿ ನೀಡುತ್ತಾರೆ ಎಂಬುದು ಇಲ್ಲಿ ಗಮನಾರ್ಹ. </p>.<p>ರಾಜ್ಯದ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಒಂದು ತಿಂಗಳಲ್ಲಿ 1 ಸಾವಿರ ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿತ್ತು. ಶ್ವಾನಗಳನ್ನು ಕೊಲ್ಲಲು ಗ್ರಾಮ ಪಂಚಾಯಿತಿ ನಾಯಕರೇ ಕೆಲವು ವ್ಯಕ್ತಿಗಳನ್ನು ನೇಮಿಸಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಏತನ್ಮಧ್ಯೆ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.</p>.<p>ಈ ಬೆಳವಣಿಗೆಗೆ ಸಂಬಂಧಿಸಿದಂತೆ ಸ್ಟ್ರೇ ಅನಿಮಲ್ ಫೌಂಡೇಷನ್ ಆಫ್ ಇಂಡಿಯಾದ (ಎಸ್ಎಎಫ್ಐ) ಅಧಿಕಾರಿ ಅದುಲಪುರಂ ಗೌತಮ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ‘ಬಂಧಿತ ವ್ಯಕ್ತಿಯಿಂದ ಪೊಲೀಸರು ‘ಸಕ್ಸ್ಮೆಥೋನಿಯಮ್ ಕ್ಲೊರೈಡ್’ ಚುಚ್ಚುಮದ್ದನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತಾದ ತನಿಖೆ ಮುಂದುವರಿಯುತ್ತಿದೆ. ಮತ್ತೊಂದೆಡೆ ಶ್ವಾನಗಳ ಸಾವಿಗೆ ನಿಖರ ಕಾರಣ ತಿಳಿಯಲು ವಿಧಿವಿಜ್ಞಾನ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>