<p><strong>ನವದೆಹಲಿ/ ಆಗ್ರಾ:</strong> ಇಲ್ಲಿನ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ 17 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ, ಇದುವರೆಗೆ ತಲೆಮರೆಸಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಆಗ್ರಾದಲ್ಲಿ ಭಾನುವಾರ ಬಂಧಿಸಲಾಗಿದೆ.</p><p>‘ಪೊಲೀಸರ ತಂಡವು ಚೈತನ್ಯಾನಂದ (62) ಅವರು ಆಗ್ರಾದ ಹೋಟೆಲ್ನಲ್ಲಿ ತಂಗಿದ್ದನ್ನು ಪತ್ತೆಹಚ್ಚಿ ಬಂಧಿಸಿದೆ’ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಚೈತನ್ಯಾನಂದ ಅವರ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ಆಗ್ರಾದ ತಾಜ್ ಗಂಜ್ ಪ್ರದೇಶದಲ್ಲಿರುವ ಹೋಟೆಲ್ವೊಂದರಲ್ಲಿ ಅವರು ತಂಗಿರುವುದು ಖಚಿತಪಟ್ಟ ಬಳಿಕ ಭಾನುವಾರ ಬೆಳಿಗ್ಗೆ 3:30ರ ವೇಳೆಗೆ ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. </p><p>ಚೈತನ್ಯಾನಂದ ವಿರುದ್ಧ ಆಗಸ್ಟ್ 4ರಂದು ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ಆಶ್ರಮದಿಂದ ಪರಾರಿಯಾಗಿದ್ದರು.</p><p>ಆಗ್ರಾದ ಹೋಟೆಲ್ನ ಸಿಬ್ಬಂದಿ ಪ್ರಕಾರ, ‘ಸೆಪ್ಟೆಂಬರ್ 27ರಂದು ಚೈತನ್ಯಾನಂದ ಅವರು ‘ಪಾರ್ಥ ಸಾರಥಿ’ ಹೆಸರಿನಲ್ಲಿ ಹೋಟೆಲ್ನಲ್ಲಿ ಕೊಠಡಿ ಪಡೆದುಕೊಂಡಿದ್ದರು. ಇಡೀ ರಾತ್ರಿ ಕೊಠಡಿಯಲ್ಲೇ ಉಳಿದಿದ್ದರು’ ಎಂದು ತಿಳಿಸಿದ್ದಾರೆ.</p><p>ಬಂಧನದ ಕುರಿತು ಯಾವುದೇ ಹೇಳಿಕೆ ನೀಡಲು ಆಗ್ರಾ ಪೊಲೀಸರು ನಿರಾಕರಿಸಿದರು.</p><p>ಇದಕ್ಕೂ ಮುನ್ನ, ಚೈತನ್ಯಾನಂದ ಅವರ ಹೆಸರಿನಲ್ಲಿ ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಇಡಲಾಗಿದ್ದ ₹8 ಕೋಟಿ ಮೊತ್ತವನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದರು. </p><p>‘ನೈಋತ್ಯ ದೆಹಲಿಯಲ್ಲಿರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ಮಾಜಿ ಮುಖ್ಯಸ್ಥರಾಗಿದ್ದ ಸರಸ್ವತಿ ಅವರ ವಸತಿಗೃಹಕ್ಕೆ ಭೇಟಿ ನೀಡುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರುತ್ತಿದ್ದರು. ಅಲ್ಲದೇ, ಅವರ ಚಲನವಲನಗಳ ಮೇಲೆ ಮೊಬೈಲ್ನ ಮೂಲಕವೇ ನಿಗಾ ಇಡುತ್ತಿದ್ದರು’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p><p>‘ಚೈತನ್ಯಾನಂದ ಅವರು ಬೇರೆ ಬೇರೆ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ₹50 ಲಕ್ಷ ಹಣವನ್ನು ಪಡೆದುಕೊಂಡಿದ್ದರು. ಬ್ಯಾಂಕ್ ಖಾತೆ ತೆರೆಯುವ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರು’ ಎಂದು ವಿಚಾರಣೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಶ್ವಸಂಸ್ಥೆ ಹಾಗೂ ಬ್ರಿಕ್ಸ್ ಸಂಘಟನೆಯ ಜೊತೆ ಸಂಪರ್ಕ ಹೊಂದಿರುವುದಾಗಿ ಮಾಡಿಟ್ಟುಕೊಂಡಿದ್ದ ನಕಲಿ ವಿಸಿಟಿಂಗ್ ಕಾರ್ಡ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್ ಪಿತೂರಿ ಆರೋಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿತ್ತು.</p><p>ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ</p>.ಚೈತನ್ಯಾನಂದ ಸರಸ್ವತಿ ಜಾಮೀನು: ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ.ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮಿ ಚೈತನ್ಯಾನಂದ ವಿರುದ್ಧ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ ಆಗ್ರಾ:</strong> ಇಲ್ಲಿನ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ 17 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ, ಇದುವರೆಗೆ ತಲೆಮರೆಸಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಆಗ್ರಾದಲ್ಲಿ ಭಾನುವಾರ ಬಂಧಿಸಲಾಗಿದೆ.</p><p>‘ಪೊಲೀಸರ ತಂಡವು ಚೈತನ್ಯಾನಂದ (62) ಅವರು ಆಗ್ರಾದ ಹೋಟೆಲ್ನಲ್ಲಿ ತಂಗಿದ್ದನ್ನು ಪತ್ತೆಹಚ್ಚಿ ಬಂಧಿಸಿದೆ’ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಚೈತನ್ಯಾನಂದ ಅವರ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ಆಗ್ರಾದ ತಾಜ್ ಗಂಜ್ ಪ್ರದೇಶದಲ್ಲಿರುವ ಹೋಟೆಲ್ವೊಂದರಲ್ಲಿ ಅವರು ತಂಗಿರುವುದು ಖಚಿತಪಟ್ಟ ಬಳಿಕ ಭಾನುವಾರ ಬೆಳಿಗ್ಗೆ 3:30ರ ವೇಳೆಗೆ ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. </p><p>ಚೈತನ್ಯಾನಂದ ವಿರುದ್ಧ ಆಗಸ್ಟ್ 4ರಂದು ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ಆಶ್ರಮದಿಂದ ಪರಾರಿಯಾಗಿದ್ದರು.</p><p>ಆಗ್ರಾದ ಹೋಟೆಲ್ನ ಸಿಬ್ಬಂದಿ ಪ್ರಕಾರ, ‘ಸೆಪ್ಟೆಂಬರ್ 27ರಂದು ಚೈತನ್ಯಾನಂದ ಅವರು ‘ಪಾರ್ಥ ಸಾರಥಿ’ ಹೆಸರಿನಲ್ಲಿ ಹೋಟೆಲ್ನಲ್ಲಿ ಕೊಠಡಿ ಪಡೆದುಕೊಂಡಿದ್ದರು. ಇಡೀ ರಾತ್ರಿ ಕೊಠಡಿಯಲ್ಲೇ ಉಳಿದಿದ್ದರು’ ಎಂದು ತಿಳಿಸಿದ್ದಾರೆ.</p><p>ಬಂಧನದ ಕುರಿತು ಯಾವುದೇ ಹೇಳಿಕೆ ನೀಡಲು ಆಗ್ರಾ ಪೊಲೀಸರು ನಿರಾಕರಿಸಿದರು.</p><p>ಇದಕ್ಕೂ ಮುನ್ನ, ಚೈತನ್ಯಾನಂದ ಅವರ ಹೆಸರಿನಲ್ಲಿ ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಇಡಲಾಗಿದ್ದ ₹8 ಕೋಟಿ ಮೊತ್ತವನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದರು. </p><p>‘ನೈಋತ್ಯ ದೆಹಲಿಯಲ್ಲಿರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ನ ಮಾಜಿ ಮುಖ್ಯಸ್ಥರಾಗಿದ್ದ ಸರಸ್ವತಿ ಅವರ ವಸತಿಗೃಹಕ್ಕೆ ಭೇಟಿ ನೀಡುವಂತೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹೇರುತ್ತಿದ್ದರು. ಅಲ್ಲದೇ, ಅವರ ಚಲನವಲನಗಳ ಮೇಲೆ ಮೊಬೈಲ್ನ ಮೂಲಕವೇ ನಿಗಾ ಇಡುತ್ತಿದ್ದರು’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p><p>‘ಚೈತನ್ಯಾನಂದ ಅವರು ಬೇರೆ ಬೇರೆ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಎಫ್ಐಆರ್ ದಾಖಲಾಗುತ್ತಿದ್ದಂತೆಯೇ, ₹50 ಲಕ್ಷ ಹಣವನ್ನು ಪಡೆದುಕೊಂಡಿದ್ದರು. ಬ್ಯಾಂಕ್ ಖಾತೆ ತೆರೆಯುವ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರು’ ಎಂದು ವಿಚಾರಣೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ವಿಶ್ವಸಂಸ್ಥೆ ಹಾಗೂ ಬ್ರಿಕ್ಸ್ ಸಂಘಟನೆಯ ಜೊತೆ ಸಂಪರ್ಕ ಹೊಂದಿರುವುದಾಗಿ ಮಾಡಿಟ್ಟುಕೊಂಡಿದ್ದ ನಕಲಿ ವಿಸಿಟಿಂಗ್ ಕಾರ್ಡ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್ ಪಿತೂರಿ ಆರೋಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿತ್ತು.</p><p>ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ</p>.ಚೈತನ್ಯಾನಂದ ಸರಸ್ವತಿ ಜಾಮೀನು: ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ.ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮಿ ಚೈತನ್ಯಾನಂದ ವಿರುದ್ಧ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>