ನವೆದಹಲಿ: ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೌರವ ಸಮರ್ಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಿವೇಕಾನಂದರ ಆದರ್ಶಗಳು ಮತ್ತು ವಿಚಾರಗಳು ದೇಶದ ಜನತೆಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಹೇಳಿದರು.
ವಿವೇಕಾನಂದರ ಜೀವನ, ದೇಶಭಕ್ತಿ, ಆಧ್ಮಾತ್ಮಿಕತೆ ಮತ್ತು ಸಮರ್ಪಣೆ ಯಾವಾಗಲೂ ಸ್ಫೂರ್ತಿ ನೀಡುತ್ತವೆ ಎಂದು ಪ್ರಧಾನಿ ಮೋದಿ ಸ್ಮರಿಸಿದರು.
स्वामी विवेकानंद को उनकी जयंती पर सादर नमन। उनका जीवन राष्ट्रभक्ति, आध्यात्मिकता और कर्मठता के लिए सदैव प्रेरित करता है। उनके महान विचार और आदर्श देशवासियों का मार्गदर्शन करते रहेंगे।
ಭಾರತ್ ಜೋಡೊ ಯಾತ್ರೆಯನ್ನು ಉಲ್ಲೇಖ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ವಾಮಿ ವಿವೇಕಾನಂದರು ದೇಶವನ್ನು ಒಗ್ಗೂಡಿಸುವ ವಾಸ್ತವಿಕ ಮೌಲ್ಯದಲ್ಲಿ ನಂಬಿಕೆಯನ್ನಿರಿಸಿದ್ದರು ಎಂದು ಹೇಳಿದರು.
We extend our warmest greetings on #NationalYouthDay, celebrated to mark the birth anniversary of one of India’s greatest philosophers — Swami Vivekananda, who believed in India’s intrinsic value of unity -“Bharat Jodo”
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.