<p><strong>ನವದೆಹಲಿ:</strong> ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯೊಬ್ಬಳ ಗುರುತು ಬಹಿರಂಗ ಪಡಿಸಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಾಲೀವಾಲ್ ಅವರನ್ನು ದೆಹಲಿ ನ್ಯಾಯಾಲಯವೊಂದು ಬುಧವಾರ ಖುಲಾಸೆಗೊಳಿಸಿದೆ.</p>.<p>ಹೆಚ್ಚುವರಿ ಮುಖ್ಯ ನ್ಯಾಯಾಧೀಶೆ ನೇಹಾ ಮಿತ್ತಲ್ ಅವರು ಆದೇಶ ನೀಡಿದರು. ಆದೇಶದ ಪ್ರತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಸ್ವಾತಿ ಅವರು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಆಗಿದ್ದಾಗಿನ 2016ರ ಪ್ರಕರಣ ಇದಾಗಿದೆ. ಬಾಲನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಸ್ವಾತಿ ಅವರ ಮೇಲಿತ್ತು.</p>.<p>ಉಪ ಆಯುಕ್ತರಿಗೆ ಪತ್ರ ಬರೆದಿದ್ದ ಸ್ವಾತಿ ಅವರು ಪ್ರಕರಣದ ತನಿಖೆ ಕುರಿತು ಮಾಹಿತಿ ನೀಡುವಂತೆ ನೋಟಿಸ್ ನೀಡಿದ್ದರು. ಈ ನೋಟಿಸ್ನಲ್ಲಿ ಬಾಲಕಿಯ ಹೆಸರಿತ್ತು. ಇದೇ ನೋಟಿಸ್ ಪ್ರತಿಯನ್ನು ಸ್ವಾತಿ ಅವರು ಎಲ್ಲ ಮಾಧ್ಯಮಗಳಿಗೂ ಕಳುಹಿಸಿಕೊಟ್ಟಿದ್ದರು. ‘ಹಲವು ವಾಟ್ಸ್ಆ್ಯಪ್ ಗುಂಪುಗಳಲ್ಲಿ ಈ ನೋಟಿಸ್ ಹರಿದಾಡಿತ್ತು ಮತ್ತು ಸುದ್ದಿ ವಾಹಿನಿಗಳೂ ಈ ನೋಟಿಸ್ ಅನ್ನು ಬಿತ್ತರಿಸಿದ್ದವು’ ಎಂದು ಎಫ್ಐಆರ್ನಲ್ಲಿ ಹೇಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯೊಬ್ಬಳ ಗುರುತು ಬಹಿರಂಗ ಪಡಿಸಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಾಲೀವಾಲ್ ಅವರನ್ನು ದೆಹಲಿ ನ್ಯಾಯಾಲಯವೊಂದು ಬುಧವಾರ ಖುಲಾಸೆಗೊಳಿಸಿದೆ.</p>.<p>ಹೆಚ್ಚುವರಿ ಮುಖ್ಯ ನ್ಯಾಯಾಧೀಶೆ ನೇಹಾ ಮಿತ್ತಲ್ ಅವರು ಆದೇಶ ನೀಡಿದರು. ಆದೇಶದ ಪ್ರತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಸ್ವಾತಿ ಅವರು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಆಗಿದ್ದಾಗಿನ 2016ರ ಪ್ರಕರಣ ಇದಾಗಿದೆ. ಬಾಲನ್ಯಾಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಸ್ವಾತಿ ಅವರ ಮೇಲಿತ್ತು.</p>.<p>ಉಪ ಆಯುಕ್ತರಿಗೆ ಪತ್ರ ಬರೆದಿದ್ದ ಸ್ವಾತಿ ಅವರು ಪ್ರಕರಣದ ತನಿಖೆ ಕುರಿತು ಮಾಹಿತಿ ನೀಡುವಂತೆ ನೋಟಿಸ್ ನೀಡಿದ್ದರು. ಈ ನೋಟಿಸ್ನಲ್ಲಿ ಬಾಲಕಿಯ ಹೆಸರಿತ್ತು. ಇದೇ ನೋಟಿಸ್ ಪ್ರತಿಯನ್ನು ಸ್ವಾತಿ ಅವರು ಎಲ್ಲ ಮಾಧ್ಯಮಗಳಿಗೂ ಕಳುಹಿಸಿಕೊಟ್ಟಿದ್ದರು. ‘ಹಲವು ವಾಟ್ಸ್ಆ್ಯಪ್ ಗುಂಪುಗಳಲ್ಲಿ ಈ ನೋಟಿಸ್ ಹರಿದಾಡಿತ್ತು ಮತ್ತು ಸುದ್ದಿ ವಾಹಿನಿಗಳೂ ಈ ನೋಟಿಸ್ ಅನ್ನು ಬಿತ್ತರಿಸಿದ್ದವು’ ಎಂದು ಎಫ್ಐಆರ್ನಲ್ಲಿ ಹೇಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>